ಸಹಕಾರ ಸಂಘಕ್ಕೆ ಪ್ರಸಕ್ತ ಸಾಲಿನಲ್ಲಿ ₹13.65 ಲಕ್ಷ ನಿವ್ವಳ ಲಾಭ

KannadaprabhaNewsNetwork |  
Published : Sep 06, 2026, 01:15 AM IST
ಹುಣಸಗಿ ಪಟ್ಟಣದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಹುಣಸಗಿ ಪಟ್ಟಣ ಪತ್ತಿನ ಸಹಕಾರ ಸಂಘದ 8ನೇ ವಾರ್ಷಿಕ ಮಹಾಸಭೆಯನ್ನುದ್ದೇಶಿಸಿ ಸಂಘದ ಅಧ್ಯಕ್ಷ ಬಸವರಾಜ್ ಮೇಲಿನಮನಿ ಮಾತನಾಡಿದರು. | Kannada Prabha

ಸಾರಾಂಶ

ಪಟ್ಟಣದ ಪತ್ತಿನ ಸಹಕಾರ ಸಂಘವು‌ ಪ್ರಸಕ್ತ ಸಾಲಿನಲ್ಲಿ ₹13,65,827 ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಬಸವರಾಜ್ ಮೇಲಿನಮನಿ ಹೇಳಿದರು.

ಕನ್ನಡಪ್ರಭ ವಾರ್ತೆ ಹುಣಸಗಿ

ಪಟ್ಟಣದ ಪತ್ತಿನ ಸಹಕಾರ ಸಂಘವು‌ ಪ್ರಸಕ್ತ ಸಾಲಿನಲ್ಲಿ ₹13,65,827 ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಬಸವರಾಜ್ ಮೇಲಿನಮನಿ ಹೇಳಿದರು.

ಪಟ್ಟಣದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಹುಣಸಗಿ ಪಟ್ಟಣ ಪತ್ತಿನ ಸಹಕಾರ ಸಂಘದ 8ನೇ ವಾರ್ಷಿಕ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಿಬ್ಬಂದಿಯ ಪ್ರಾಮಾಣಿಕ ಸೇವೆ ಹಾಗೂ ಷೇರುದಾರರು ಸಮಯಕ್ಕೆ ಸರಿಯಾಗಿ ಸಾಲ ಪಡೆದು ಮರುಪಾವತಿ ಮಾಡಿರುವುದು ಸಂಘದ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗಿದೆ ಎಂದರು.

ಸಂಘವು ಆರ್ಥಿಕ ಚಟುವಟಿಕೆಗಳಿಗೆ ಸೀಮಿತವಾಗದೆ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ಸಭೆಯ ಆರಂಭದಲ್ಲಿ ವಂದೇ ಮಾತರಂ ಗೀತೆ ಪ್ರಸ್ತುತಪಡಿಸಲಾಯಿತು. ಸಹಕಾರಿ ಪಿತಾಮಹ ಎಸ್.ಎಸ್. ಪಾಟೀಲ್ ಕಣಗಿನಾಳ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸಭೆಗೆ ಚಾಲನೆ ನೀಡಲಾಯಿತು.

ಸಂಘದ ಮುಖ್ಯ ಕಾರ್ಯನಿರ್ವಾಹಕ ಮಹಾಂತೇಶ ಅವರು ವಾರ್ಷಿಕ ವರದಿ ವಾಚಿಸಿ, ಪ್ರಸ್ತುತ ಸಾಲಿನಲ್ಲಿ ಲಾಭಾಂಶವನ್ನು ಕಟ್ಟಡ ನಿಧಿಗೆ ವರ್ಗಾಯಿಸುವ ಪ್ರಸ್ತಾವನೆಗೆ ಷೇರುದಾರರು ಚಪ್ಪಾಳೆ ತಟ್ಟುವ ಮೂಲಕ ಒಪ್ಪಿಗೆ ಸೂಚಿಸಿದರು. ನೀಲಕಂಠ ಹೊನಕಲ್ ಪ್ರಸ್ತಾವನೆ ಅನುಮೋದಿಸಿದರು. ಉಪಾಧ್ಯಕ್ಷ ಶಾಂತಗೌಡ ಅರಕೇರಿ, ನಿರ್ದೇಶಕರಾದ ಚಂದ್ರಶೇಖರ ದೇಸಾಯಿ, ಗುರಲಿಂಗಣ್ಣ ಸಜ್ಜನ್, ಚಂದ್ರಶೇಖರ ಬೋರಮಗುಂಡ, ಪದ್ಮಾವತಿ ದೇಶಪಾಂಡೆ, ಅಮರೇಶ ವೈಲಿ, ಶರಣಬಸವ ಬಾ.ಪಾಟೀಲ್, ಲಕ್ಷ್ಮಣ ಚವ್ಹಾಣ, ದೇವು ಬೈಚಬಾಳ ಸೇರಿದಂತೆ ಇತರರಿದ್ದರು. ಲೆಕ್ಕಿಗ ಪ್ರಭು ನೂಲಿನ್ ಸ್ವಾಗತಿಸಿದರು. ಹರೀಶ ಹಂದಿಗನೂರು ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಘನತೆ ಗಾಳಿಗೆ ಬಿಟ್ಟು, ಭಾಷಣದಲ್ಲಿ ಗೌರವ ಕೊಟ್ಟು ಹೊರಟರು!
ದೇವದುರ್ಗದಲ್ಲಿ ಪ್ರಜಾ ಸೇವೆ ಅಂದೋಲನಕ್ಕೆ ಶಾಸಕಿ ಚಾಲನೆ