ಕುಲಸಚಿವರ ಅಮಾನತು ಮಾಡಿ ಸರ್ಕಾರಿ ಮಟ್ಟದಲ್ಲಿ ಸೂಕ್ತ ತನಿಖೆಗೆ ಆಗ್ರಹ
ಕುವೆಂಪು ವಿಶ್ವವಿದ್ಯಾಲಯದಲ್ಲಿನ ಭ್ರಷ್ಟಾಚಾರ ಹಾಗೂ ಅಸಮರ್ಪಕ ಆಡಳಿತ ನಿರ್ವಹಣೆ ಕೊನೆಗಾಣಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಜಿಲ್ಲಾ ಸಂಚಾಲಕ ರಾಕೇಶ್, ಭ್ರಷ್ಟಾಚಾರದಲ್ಲಿ ತೊಡಗಿರುವ ಕುಲಸಚಿವರನ್ನು ಅಮಾನತು ಮಾಡಿ ಸರ್ಕಾರದ ಮಟ್ಟದಲ್ಲಿ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.ವಿಶ್ವವಿದ್ಯಾಲಯ ಜ್ಞಾನ ಕೇಂದ್ರವಾಗಿ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಬೇಕು. ಆದರೆ, ಭ್ರಷ್ಟ ಅಧಿಕಾರಿಗಳ ಕೈಗೆ ಸಿಲುಕಿಕೊಂಡು ಸಮರ್ಪಕ ಆಡಳಿತವಿಲ್ಲದೇ ನಲುಗುತ್ತಿರುವುದು ವಿಷಾಧನೀಯ. ಹೀಗಾಗಿ ಭ್ರಷ್ಟಾಚಾರ ಬೇರು ಮಟ್ಟದಿಂದ ಕಿತ್ತು ಹಾಕಿ ಸಮರ್ಪಕ ಆಡಳಿತಕ್ಕಾಗಿ ಹೋರಾಟ ಅನಿವಾರ್ಯ ಎಂದು ಹೇಳಿದರು.
ಸುಮಾರು ₹50 ಲಕ್ಷ ಹಣಕಾಸು ಅವ್ಯವಹಾರ ನಡೆದಿರುವ ಬಗ್ಗೆ ಲೋಕಾಯುಕ್ತದಲ್ಲಿ ಕುಲಸಚಿವರ ವಿರುದ್ಧ ದೂರು ದಾಖಲಾಗಿದೆ. ಅಲ್ಲದೇ ಅಂಕ ಪಟ್ಟಿ ಮುದ್ರಣ ಕುರಿತ ವಿಷಯದಲ್ಲಿ ಸರ್ಕಾರದ ನಿರ್ದೇಶನಗಳನ್ನು ಬದಿಗೊತ್ತಿದೆ. ಖಾಸಗೀಯವರಿಗೆ ಗುತ್ತಿಗೆ ನೀಡುವ ವಿಚಾರದಲ್ಲಿ ಕೂಡ ಕುಲಸಚಿವರು, ಕುಲಪತಿ ಹಾಗೂ ಪರೀಕ್ಷಾಂಗ ಸಚಿವರ ವಿರುದ್ಧವೂ ದೂರು ದಾಖಲಾಗಿದೆ ಎಂದರು.
25 ಕೆಸಿಕೆಎಂ 3ಕುವೆಂಪು ವಿಶ್ವವಿದ್ಯಾನಿಲಯದ ಅಸಮರ್ಪಕ ಆಡಳಿತ ನಿರ್ವಹಣೆ ಕೊನೆಗಾಣಿಸಬೇಕೆಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಜಿತ್ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.