ಕನ್ನಡಪ್ರಭ ವಾರ್ತೆ ಹರಿಹರ
ದಾವಣಗೆರೆ ಜಿಲ್ಲಾ ಲೋಕಾಯುಕ್ತ ಸಂಸ್ಥೆ ಹಾಗೂ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ, ರೆಡ್ಕ್ರಾಸ್, ಎನ್ಎಸ್ಎಸ್ ಸಹಯೋಗದಲ್ಲಿ ಕಾಲೇಜಿನಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಜಾಗೃತಿ ನಮ್ಮ ಒಟ್ಟು ಜವಾಬ್ದಾರಿ’ ಎಂಬ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆಡಳಿತ ಯಂತ್ರದಲ್ಲಿರುವ ಭ್ರಷ್ಟಾಚಾರ, ಅಕ್ರಮ ಆಸ್ತಿ ಗಳಿಕೆ, ಸ್ವಜನಪಕ್ಷಪಾತ, ಆಡಳಿತ ದುರ್ಬಳಕೆ, ಕರ್ತವ್ಯದಲ್ಲಿನ ಅಪ್ರಮಾಣಿಕತೆ ಮತ್ತು ಅಧಿಕಾರಸ್ಥರ ಅಶಿಸ್ತಿನಂತಹ ಪ್ರಕರಣಗಳೂ ಸೇರಿದಂತೆ, ಆಡಳಿತಾತ್ಮಕ ಕ್ರಮಗಳ ವಿರುದ್ಧದ ದೂರುಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಸಾರ್ವಜನಿಕ ಆಡಳಿತದ ಮಾನದಂಡಗಳನ್ನು ಸುಧಾರಣೆ ಮಾಡಲು ಕರ್ನಾಟಕ ರಾಜ್ಯಮಟ್ಟದಲ್ಲಿ ಲೋಕಾಯುಕ್ತ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.ಮುಖ್ಯಮಂತ್ರಿ, ಎಲ್ಲ ಇತರೆ ಮಂತ್ರಿಗಳು, ರಾಜ್ಯ ಶಾಸಕಾಂಗದ ಸದಸ್ಯರು, ಎಲ್ಲ ರಾಜ್ಯ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಶಾಸನಬದ್ಧ ಸಂಸ್ಥೆಗಳಲ್ಲಿ ನೇಮಗೊಂಡ ಸಹಕಾರ ಸಂಘಗಳ, ನಿಗಮಗಳ ಅಧ್ಯಕ್ಷರು, ಉಪಾಧ್ಯಕ್ಷರು ಲೋಕಾಯುಕ್ತ ಸಂಸ್ಥೆಯ ಕಾಯಿದೆ ಅಡಿಯಲ್ಲಿ ಬರುವ ಸಾರ್ವಜನಿಕ ನೌಕರರಾಗಿದ್ದಾರೆ. ಸಾರ್ವಜನಿಕ ನೌಕರರ ವರ್ತನೆಗೆ ಸಂಬಂಧಪಟ್ಟ ಆಪಾದನೆಗಳನ್ನು ಅಥವಾ ಕುಂದುಕೊರತೆಗಳನ್ನು ತನಿಖೆ ಮಾಡಿ, ವರದಿ ಮಾಡಲು ಓರ್ವ ಲೋಕಾಯುಕ್ತರು, ಒಬ್ಬ ಅಥವಾ ಅದಕ್ಕಿಂತಲೂ ಹೆಚ್ಚಿನ ಉಪ ಲೋಕಾಯುಕ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ವಿವರಿಸಿದರು.
ಲೋಕಾಯುಕ್ತ ಇಲಾಖೆಯ ಆಶಾ, ಸಂತೋಷ್, ಐ.ಕ್ಯೂ.ಎಸ್.ಸಿ ಸಹ ಸಂಯೋಜಕ ಅಬ್ದುಲ್ ಬಷೀರ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಮನೋಹರ.ಬಿ.ಎಂ, ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ತಿರುಮಲ ಟಿ., ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಬಾಬು ಕೆ.ಎ., ಇತಿಹಾಸ ವಿಭಾಗದ ಮುಖ್ಯಸ್ಥ ಹನುಮಂತಪ್ಪ ಕೆ.ವೈ., ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಮನೋಹರ್.ಕೆ.ಎಸ್. ಇತರರು ಇದ್ದರು.