ಕನ್ನಡಪ್ರಭ ವಾರ್ತೆ ಹಾಸನ
ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತಾಡಿದ ಅವರು, ದುಸ್ಥಿತಿಯಲ್ಲಿ ಇರುವ ಗ್ರಾಮೀಣ ಭಾಗದ ಅಥವಾ ಹೋಬಳಿ ಮಟ್ಟದ ಸಮುದಾಯ ಆರೋಗ್ಯ ಕೇಂದ್ರಗಳನ್ನು ದುರಸ್ತಿ ಪಡಿಸಲು ರಾಜ್ಯದ ವಿವಿಧ ಜಿಲ್ಲೆಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಣ ಬಿಡುಗಡೆ ಮಾಡಲಾಗಿದೆ. ಅದರಂತೆ ಹಾಸನ ಜಿಲ್ಲೆಗೂ ಅತೀ ಹೆಚ್ಚು ಬಿಡುಗಡೆ ಮಾಡಲಾಗಿದೆ ಎಂದರು.
ಹಾಸನ ಜಿಲ್ಲೆಗೆ 5,74,38,000 ಹಣ ಬಿಡುಗಡೆಯಾಗಿದ್ದು, ಈ ಹಣದಲ್ಲಿ ಕೇವಲ ಆಸ್ಪತ್ರೆಗಳಿಗೆ ಸುಣ್ಣ ಬಣ್ಣ ಹೆಚ್ಚಿ ದುಪ್ಪಟ್ಟು ಬಿಲ್ ಹಾಕುವ ಜೊತೆಗೆ, ಹಣವನ್ನು ಲೂಟಿ ಮಾಡುವ ಕೆಲಸವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶಾಮೀಲಾಗಿ ಮಾಡಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಅವರ ಪತ್ನಿ ಹೆಸರಿನಲ್ಲೇ ಇರುವ ಔಷಧಿ ವ್ಯಾಪಾರದ ಕೇಂದ್ರದಲ್ಲಿ ಆರೋಗ್ಯ ಇಲಾಖೆಗೆ ಅಗತ್ಯ ಇರುವ ಔಷಧಿಗಳನ್ನು ಖರೀದಿ ಮಾಡುವ ಮೂಲಕ ಕಾನೂನು ಮೀರಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಬಿಡುಗಡೆ ಆಗಿರುವ ಹಣದ ಬಗ್ಗೆ ಲೆಕ್ಕ ಕೇಳಿದರೆ ನನಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂಬ ಸಬೂಬು ಹೇಳುವ ಮೂಲಕ ಹಗರಣದಿಂದ ನುಣುಚಿಕೊಳ್ಳುವ ಕೆಲಸವನ್ನು ಜಿಲ್ಲಾ ಆರೋಗ್ಯಾಧಿಕಾರಿ ಮಾಡುತ್ತಿದ್ದಾರೆ ಎಂದು ದೂರಿದರು.ಕೂಡಲೇ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಇದನ್ನು ತನಿಖೆ ಮಾಡಬೇಕು. ತಪ್ಪಿತಸ್ಥ ಅಧಿಕಾರಿಗಳಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.