ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಮಹಾರಾಣಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ 2024– 25ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ ಚಟುವಟಿಕೆಗಳಿಗೆ ಚಾಲನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಂಜಿನಿಯರಿಂಗ್, ಕಂಪ್ಯೂಟರ್ವಿಜ್ಞಾನ ಕೋರ್ಸ್ ಕಲಿಕೆಗೆ ಆದ್ಯತೆ ನೀಡದೇ ಉತ್ತಮ ಅವಕಾಶ ಇರುವ ಬೇರೆ ಬೇರೆ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಿ ಎಂದರು.
ಬಿ.ಎಸ್ಸಿ ಹಾಗೂ ಎಂ.ಎಸ್ಸಿ ಮಾಡಿದವರಿಗೆ ಸಂಶೋಧನೆಯಲ್ಲಿ ಹೆಚ್ಚು ಅವಕಾಶ ಇವೆ. ಅದರಲ್ಲೂ ರಸಾಯನ ವಿಜ್ಞಾನದಲ್ಲಿ ಅಧ್ಯಯನ ಮಾಡಿದವರು ವಿಜ್ಞಾನಿಗಳಾಗಬಹುದು ಎಂದು ಅವರು ಹೇಳಿದರು.ವಿದ್ಯೆ- ಬುದ್ಧಿ ಎರಡೂ ಹೆಣ್ಣು ಮಕ್ಕಳಿಗೆ ಹೆಚ್ಚು. ಈ ಕಾಲೇಜಿಗೆ ಬರುವವರಲ್ಲಿ ಹೆಚ್ಚಿನವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು. ಓದಿಗೆ ಆದ್ಯತೆ ನೀಡಿದರೆ ನಿಮ್ಮ ಭವಿಷ್ಯ ಉಜ್ವಲ ಆಗಿರಲಿದೆ.ಈ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಸಾಧನೆ ಇತರರಿಗೆ ಮಾದರಿ ಆಗಲಿ. ಅವರಷ್ಟೇ ಏಕಾಗ್ರತೆಯಿಂದ ಅಧ್ಯಯನ ಮಾಡಿದಲ್ಲಿ ನಿಮಗೂ ಈ ಸಾಧನೆ ಸಾಧ್ಯ. ಏಕಾಗ್ರತೆಯಿಂದ ಶಿಕ್ಷಣ ಮುಗಿಸಿ ಉತ್ತಮ ಬದುಕು ಕಟ್ಟಿಕೊಳ್ಳಿ ಎಂದು ಅವರು ಸಲಹೆ ನೀಡಿದರು.
ಇದೇ ವೇಳೆ ಕಳೆದ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 594 ಅಂಕದೊಂದಿಗೆ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಶ್ರೇಯಾ ಗಣೇಶ್ ಅಯ್ಯರ್ ಅವರಿಗೆ ಲ್ಯಾಪ್ ಟಾಪ್ ನೀಡಿ ಸನ್ಮಾನಿಸಲಾಯಿತು.