ರಾಮನಗರ: ನಿರ್ಮಾಣ ಹಂತದ ಮನೆಯೊಂದರ ಮೇಲೆ ದಾಳಿ ನಡೆಸಿ ಖೋಟಾ ನೋಟು ತಯಾರಿಸುತ್ತಿದ್ದ ಜಾಲವನ್ನು ಬೇಧಿಸಿರುವ ಪೊಲೀಸರು, 5 ಲಕ್ಷ ಮೌಲ್ಯದ ನಕಲಿ ನೋಟಿಗೆ ಸಿದ್ಧಪಡಿಸಿದ್ದ 10 ಬಂಡಲ್ ವಶಪಡಿಸಿಕೊಂಡು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮನೆ ಮಾಲೀಕ ಸಂತೋಷ್, ಸಂಪತ್ , ಗೋವಿಂದರಾಜು, ರೇಣುಕಾರಾಜ್, ರಾಜೇಶ್, ಶಿವರಾಜ್ , ಸತೀಶ್ ಬಂಧಿತರು. ಇವರಲ್ಲಿ ಕೆಲವರು ಸ್ಥಳೀಯರು. ಆರೋಪಿ ಸಂಪತ್ ಜಾಲದ ಸೂತ್ರಧಾರ ಎನ್ನಲಾಗಿದೆ.
ಘಟನೆ ವಿವರ:ಶಾಂತಿಲಾಲ್ ಬಡಾವಣೆಯಲ್ಲಿ ನಿರ್ಮಾಣ ಹಂತದ ಮನೆಯಲ್ಲಿ 10 ದಿನಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಬಾತ್ಮಿದಾರರಿಂದ ಐಜೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಿಢೀರ್ ದಾಳಿ ನಡೆಸಿದಾಗ ಖೋಟಾ ನೋಟು ಜಾಲ ಪತ್ತೆಯಾಗಿದ್ದು, ಸ್ಥಳದಲ್ಲಿಯೇ 7 ಮಂದಿ ಸಿಕ್ಕಿ ಬಿದ್ದಿದ್ದಾರೆ.
ಪೊಲೀಸರು ದಾಳಿ ನಡೆಸಿದಾಗ 5 ಲಕ್ಷ ಮೌಲ್ಯದ ನಕಲಿ ನೋಟು ತಯಾರಿಸಲು ಬೇಕಾದ ಪೇಪರ್ ಗಳನ್ನು ಸಿದ್ಧಪಡಿಸಲಾಗುತ್ತಿತ್ತು. ಈ ಪೇಪರ್ ಗಳನ್ನು ಬೇರೆಡೆಗೆ ರವಾನೆ ಮಾಡಿ, ಅಲ್ಲಿ ನಕಲಿ ನೋಟುಗಳಿಗೆ ಅಂತಿಮ ರೂಪ ನೀಡುವ ವ್ಯವಸ್ಥೆ ಇತ್ತು ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ , ಡಿವೈಎಸ್ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲಿಸಿದರು.
ಬಾಕ್ಸ್..................
ರಾಮನಗರ: ನಕಲಿ ನೋಟು ತಯಾರಿಕೆ ಹಿಂದೆ ದೊಡ್ಡ ಜಾಲವೇ ಇದ್ದು, ಅದನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಿ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದರು.
ಬಂಧಿತ ಆರೋಪಿಗಳು ಖೋಟಾ ನೋಟು ಜಾಲದವರ ಸಂಪರ್ಕದಲ್ಲಿ ಇರುವುದು ಗೊತ್ತಾಗುತ್ತಿದೆ. ಇವರೆಲ್ಲರು ಹಳೆಯ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ತನಿಖೆಯೂ ನಡೆಯುತ್ತಿದೆ. ಈ ಖೋಟಾ ನೋಟುಗಳು ಬೇರೆ ಸ್ಥಳಕ್ಕೆ ಹೋಗಿ ಫಿನಿಶ್ ಆಗುತ್ತಿತ್ತು. ಅದು ಎಲ್ಲಿ, ಯಾರು ಮಾಡುತ್ತಿದ್ದರು ಎಂಬುದನ್ನು ಪತ್ತೆ ಹಚ್ಚಿ ಉಳಿದ ಆರೋಪಿಗಳನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ರೋಹನ್ ಜಗದೀಶ್ ತಿಳಿಸಿದರು.
6.ಖೋಟಾ ನೋಟು ತಯಾರಿಸುತ್ತಿದ್ದ ನಿರ್ಮಾಣ ಹಂತದ ಮನೆ.
7.ಎಸ್ಪಿ ರೋಹನ್ ಜಗದೀಶ್ ಸುದ್ದಿಗಾರರೊಂದಿಗೆ ಮಾತನಾಡಿದರು.