ಕನ್ನಡಪ್ರಭ ವಾರ್ತೆ ತುಮಕೂರು
ತುಮಕೂರು ತಾಲೂಕಿನ ಊರ್ಡಿಗೆರೆಯಲ್ಲಿ ಎನ್ಡಿಎ ಅಭ್ಯರ್ಥಿ ವಿ. ಸೋಮಣ್ಣ ಅವರ ಪರ ನಡೆದ ಕಾರ್ಯಕರ್ತರು ಹಾಗೂ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮದು ದೊಡ್ಡ ದೇಶ. ನಮ್ಮ ದೇಶಕ್ಕೆ ನರೇಂದ್ರ ಮೋದಿಯವರಂತಹ ದಿಟ್ಟ ಪ್ರಧಾನಿಯ ಅಗತ್ಯವಿದೆ. ಹಾಗಾಗಿ ನರೇಂದ್ರ ಮೋದಿಯವರನ್ನು 3ನೇ ಬಾರಿಗೆ ಪ್ರಧಾನಿ ಮಾಡಲು ನಾವೆಲ್ಲೂ ಪಣ ತೊಡಬೇಕು ಎಂದು ಕರೆ ನೀಡಿದರು.
ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದ್ದು ಸೋನಿಯಾಗಾಂಧಿ. ನಾನು ಅದನ್ನು ಇಲ್ಲ ಎನ್ನುವುದಿಲ್ಲ ಎಂದ ಅವರು, ನಾನು ಈ ಹಿಂದೆ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬರುವ ಉದ್ದೇಶ ಹೊಂದಿರಲಿಲ್ಲ. ಆದರೂ ಕಾಂಗ್ರೆಸ್ನವರು ನನ್ನನ್ನು ಕರೆತಂದು ಸೋಲಿಸಿದರು. ಹಾಗಾಗಿ ನಾನು ರಾಜಕೀಯದಲ್ಲಿ ಯಾರನ್ನೂ ನಂಬುವುದಿಲ್ಲ ಎಂದರು.ಕುಮಾರಸ್ವಾಮಿ ಇಡೀ ದೇಶದಲ್ಲಿಯೇ ಉತ್ತಮವಾದ ಪಂಚರತ್ನ ಯೋಜನೆ ರೂಪಿಸಿದ್ದರು. ಇಡೀ ರಾಜ್ಯದ ನೀರನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆಯೂ ಯೋಜನೆ ರೂಪಿಸಿದ್ದರು. ಅಲ್ಲದೆ ಬಡವರು, ರೈತರ 25 ಕೋಟಿ ಸಾಲ ಮನ್ನಾ ಮಾಡಿದರು. ಇಂತಹ ಕುಮಾರಸ್ವಾಮಿ ಹೆಣ್ಣು ಮಕ್ಕಳ ಬಗ್ಗೆ ಕೀಳಾಗಿ ಮಾತನಾಡುತ್ತಾರೆಯೇ, ಇದೆಲ್ಲಾ ಕಾಂಗ್ರೆಸ್ನವರ ಚಿತಾವಣೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಗೆ ಮಾರು ಹೋಗಬೇಡಿ, ಈ ದೇಶವನ್ನು ಆಳುವ ಶಕ್ತಿ ಕೇವಲ ಮೋದಿಗೆ ಮಾತ್ರ ಇದ್ದು, ಎನ್ಡಿಎ ಅಭ್ಯರ್ಥಿ ಸೋಮಣ್ಣ ರವರಿಗೆ ಮತ ಚಲಾಯಿಸುವ ಮೂಲಕ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು ಎಂದರು.