ನಾಡಿನ ಸಂಸ್ಕೃತಿ, ಶಿಲ್ಪಕಲೆ ವಿಶ್ವದಲ್ಲೇ ಅಗ್ರಗಣ್ಯ: ಶಾಸಕ ನೇಮರಾಜ್‌

KannadaprabhaNewsNetwork |  
Published : Nov 04, 2024, 12:26 AM IST
ಫೋಟೋವಿವರ- (3ಎಂಎಂಎಚ್‌1) ಮರಿಯಮ್ಮನಹಳ್ಳಿಯಲ್ಲಿ ಶುಕ್ರವಾರ ಸಂಜೆ ಕರ್ನಾಟಕ ರಾಜ್ಯೋತ್ಸವದ ಸಿಂಧೂರ ಬಂಡಾರ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. | Kannada Prabha

ಸಾರಾಂಶ

ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುವ ಮೂಲಕ ನುಡಿ ಕನ್ನಡ, ನಡೆ ಕನ್ನಡ, ಉಸಿರು ಕನ್ನಡ ಎಂದು ಪ್ರತಿಯೊಬ್ಬ ಕನ್ನಡಿಗರು ಜೀವಿಸಬೇಕು.

ಮರಿಯಮ್ಮನಹಳ್ಳಿ: ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುವ ಮೂಲಕ ನುಡಿ ಕನ್ನಡ, ನಡೆ ಕನ್ನಡ, ಉಸಿರು ಕನ್ನಡ ಎಂದು ಪ್ರತಿಯೊಬ್ಬ ಕನ್ನಡಿಗರು ಜೀವಿಸಬೇಕು ಎಂದು ಶಾಸಕ ಕೆ. ನೇಮರಾಜ್‌ ನಾಯ್ಕ ಹೇಳಿದರು.ಅವರು ಪಟ್ಟಣದ ಸರ್ಕಾರಿ ಫೌಢ ಶಾಲಾ‌ ಆವರಣದಲ್ಲಿ ಶುಕ್ರವಾರ ಸಂಜೆ ನಡೆದ ಕರ್ನಾಟಕ ರಾಜ್ಯೋತ್ಸವದ ಸಿಂಧೂರ ಭಂಡಾರ ಎನ್ನುವ ವಿಶೇಷ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡ‌ ನಾಡಿನ ಸಂಸ್ಕೃತಿ, ಕಲೆ, ಸಾಹಿತ್ಯ ಶಿಲ್ಪಕಲೆ ವಿಶ್ವದಲ್ಲಿಯೇ ಶ್ರೇಷ್ಠವಾದುದು. ನಮ್ಮ ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆಯ ಬಗ್ಗೆ ಪ್ರತಿಯೊಬ್ಬರಲ್ಲಿ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಕನ್ನಡ ನಾಡಿನಲ್ಲಿ ಅನೇಕ ಸಾಧು-ಸಂಸರು- ದಾಸರು- ಶಿವಶರಣರು ಕವಿಗಳು ಈ ಪುಣ್ಯಭೂಮಿಯಲ್ಲಿ ಜನಿಸಿರುವುದು ನಮ್ಮೆಲ್ಲರ ಪುಣ್ಯವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪಂಪ, ರನ್ನ, ಪೊನ್ಮ ಜನ್ನ, ಕುವೆಂಪು ಸೇರಿದಂತೆ ನೂರಾರು ಸಾಹಿತಿಗಳ ಕೊಡುಗೆ ಅಪಾರವಾಗಿದೆ. ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿಯೊಬ್ಬರು ಅತ್ಯಂತ ಸಡಗರ ಸಂಭ್ರಮದಿಂದ ಒಗ್ಗೂಡಿ ಆಚರಿಸಬೇಕು. ಇದೊಂದು ಕನ್ನಡಿಗರ ಸಡಗರದ ಹಬ್ಬವಾಗಿದೆ ಎಂದು ಅವರು ಹೇಳಿದರು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದೆ ಮಾತಾ ಮಂಜಮ್ಮ ಜೋಗತಿ ಮಾತನಾಡಿ, ನಾವು ಕೇವಲ ನವೆಂಬರ್‌ ಕನ್ನಡಿಗರಾಗದೇ, ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಗಳಾಗಿ ಕನ್ನಡದಲ್ಲೇ ಮಾತನಾಡಬೇಕು. ಕನ್ನಡದಲ್ಲೇ ಬರೆಯಬೇಕು. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸಬೇಕು. ಕನ್ನಡ ನಾಡು ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ನಮ್ಮ ಮಕ್ಕಳನ್ನು 1ರಿಂದ10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಸರ್ಕಾರಿ ಶಾಲೆಗೆ ಓದಿಸುವ ಮೂಲಕ ಕನ್ನಡ ಭಾಷೆ ಉಳಿವೆಗೆ ಸದಾ ಕಟ್ಟಿಬದ್ಧರಾಗಿರಬೇಕು ಎಂದು ಅವರು ಹೇಳಿದರು.

ಮಂಡಲ ಮಂಚಾಯಿತಿ ಮಾಜಿ ಪ್ರಧಾನ ಎಂ. ವಿಶ್ವನಾಥ ಶೆಟ್ಟಿ, ರಂಗಕಲಾವಿದೆ ಡಾ. ಕೆ. ನಾಗರತ್ನಮ್ಮ, ಮಲ್ಲಿಕಾರ್ಜುನ ಶಿವಾಚಾರ್ಯಸ್ವಾಮೀಜಿ ಸಭೆಯಲ್ಲಿ ಮಾತನಾಡಿದರು.

ಜಿ.ನಾಗಲಾಪುರದ ನಿರಂಜನ ಪ್ರಭುಮಹಾಸ್ವಾಮಿಗಳು, ನಂದಿಪುರದ ಮಹೇಶ್ವರಸ್ವಾಮಿಗಳು, ಹಾಲಸಿದ್ದೇಶ್ವರಸ್ವಾಮಿ, ಚಿತ್ರನಟ ಡಾ.ಪ್ರವೀಣ್‌, ಸ್ಥಳೀಯ ಮುಖಂಡರಾದ ಗರಗ ಪ್ರಕಾಶ್ ಪೂಜಾರ್‌, ಗುಂಡಾಸ್ವಾಮಿ, ಬಿ.ಎಂ.ಎಸ್‌. ಮೃತ್ಯುಂಜಯ, ಬಾದಾಮಿ ಮೃತ್ಯುಂಜಯ, ಪಿ.ಓಬಜ್ಜ, ಬಿ.ಎಸ್. ರಾಜಪ್ಪ, ಅನುಸೂಯಮ್ಮ, ಎಲಿಗಾರ್ ಮಂಜಣ್ಣ, ಉರವಕೊಂಡ ವೆಂಕಟೇಶ್ ಸೇರಿದಂತೆ ಸ್ಥಳೀಯ ಕನ್ನಡಪರ ಸಂಘಟನೆಯ ಪದಾಧಿಕಾರಿಗಳು, ಕಲಾವಿದರು, ಸಾಧಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಕಲಾವಿದರಾದ ಎಸ್.ರೇಣುಕಮ್ಮ, ಬಿ.ಶಾರದಮ್ಮ, ಬಿ.ಎಂ.ಎಸ್‌. ಪ್ರಭು, ಕೊಟ್ಗಿ ಮಲ್ಲನಗೌಡ, ಪತ್ತಾರ್‌ ಪೀರ್‌ ಸಾಹೇಬ್‌, ಬಿ. ಸರದಾರ, ಬಿ.ಎಂ. ಯೋಗೇಶ್‌, ಕೆ. ರಾಮಚಂದ್ರಪ್ಪ, ಪಿ. ಚಿದಾನಂದ, ಎಲ್‌. ರಾಮಾಂಜಿನೇಯ, ಚಂದ್ರಕಾಂತ್‌, ಜೆ. ದುರ್ಗಾದಾಸ್‌, ಸಾಧಕರಾದ ಶಿವಶಂಕರ್‌ ಬಣಗಾರ್‌, ಮೇಟಿ ಕೊಟ್ರಪ್ಪ, ಡಾ. ಪ್ರವೀಣ್, ಹನುಮಂತಪ್ಪ, ಪೂಜಾರ್‌ ಬಸವರಾಜ, ರಾಜು ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಶಾಸಕರ ಆಪ್ತಕಾರ್ಯದರ್ಶಿ ಬಿ. ದೊಡ್ಡಬಸಪ್ಪ ರೆಡ್ಡಿ ಸ್ವಾಗತಿಸಿದರು. ಶಿವಶಂಕರಯ್ಯ, ಗವಿಸಿದ್ದಯ್ಯ ನಿರೂಪಿಸಿದು.

ಕಾರ್ಯಕ್ರಮದ ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಿತ್ರನಟ ಪ್ರೇಮ್‌, ಖ್ಯಾತ ಚಲನಚಿತ್ರ ಹಿನ್ನಲೆ ಗಾಯಕ ಹೇಮಂತ್ ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮ ಹಾಗೂ ಖ್ಯಾತ ಗಾಯಕ ಕಲಾವಿದರಾದ ದಿವ್ಯ ರಾಮಚಂದ್ರ, ಶಿವಾನಿ, ಮನೋಜವಂ, ಅಶ್ವಿನ್ ಶರ್ಮ, ಅಶ್ವಿನಿ, ವಿನೋದ, ಅಭಿನಂದನ್, ಐಶ್ವರ್ಯ, ಕಾರ್ತಿಕ್ ಹುಲಿ, ಜಗ್ಗಪ್ಪ, ಸುಷ್ಮಿತ ಸೇರಿದಂತತೆ ಇತರೆ ಕಲಾವಿದರಿಂದ ಸಂಗೀತ, ನೃತ್ಯ ಹಾಗೂ ಹಾಸ್ಯ ಕಾರ್ಯಕ್ರಮಗಳು ನಡೆದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಸಂಘಗಳ ಬಲವರ್ಧನೆಗೆ ವಿಮೆ ಅನಿವಾರ್ಯ
ಕವಿಚಕ್ರವರ್ತಿ ರನ್ನನ ಇತಿಹಾಸ ಉಳಿಸಿ, ಬೆಳೆಸಬೇಕಿದೆ: ಎ.ಎಂ. ಕಂಬಾರ