)
- ಎದೆಗೆ ಚುಚ್ಚಲು ಬಂದಾಗ ಬಲಗೈ ಅಡ್ಡಪಡಿಸಿದ್ದರಿಂದ ಗಂಭೀರ ಗಾಯ । ಯುವಕ ಸಿದ್ದೇಶ ದಾವಣಗೆರೆ ಆಸ್ಪತ್ರೆಗೆ ದಾಖಲು
- ಸೋದರ ಮಾವ, ಅಣ್ಣ ಇತರರ ಮೇಲೆ ಯುವತಿ ತೀವ್ರ ಆಕ್ರೋಶ
- ರಕ್ಷಣೆ ಕೋರಿ ಪೊಲೀಸ್ ಠಾಣೆಗೆ ಹೋಗಿದ್ದಾಗ ಘಟನೆ- ಬಸವಾಪಟ್ಟಣ ಠಾಣೆ ವ್ಯಾಪ್ತಿ ದಾಗಿನಕಟ್ಟೆ ಲೀಲಾವತಿ, ಸಿದ್ದೇಶ
- ಘಟನೆ ಗಮನಿಸಿ ಸ್ಥಳಕ್ಕೆ ದೌಡಾಯಿಸಿ ಆರೋಪಿ ನಾಗರಾಜನನ್ನು ವಶಕ್ಕೆ ಪಡೆ ಪೊಲೀಸರು
ಕನ್ನಡಪ್ರಭ ವಾರ್ತೆ ದಾವಣಗೆರೆ
ಚನ್ನಗಿರಿ ತಾ. ಕೆಂಚುಗಾರನಹಳ್ಳಿ ವಾಸಿ, ಹಾಲಿ ಮೈಸೂರಿನ ಫಾರಂ ಹೌಸ್ವೊಂದರಲ್ಲಿ ಕೆಲಸಕ್ಕಿರುವ ಕೆಂಚುಗಾರನಹಳ್ಳಿ ಸಿದ್ದೇಶ ಹಲ್ಲೆಗೊಳಗಾದ ವ್ಯಕ್ತಿ. ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ದಾಗಿನಕಟ್ಟೆ ಗ್ರಾಮದ ಲೀಲಾವತಿ (18) ಅವರನ್ನು ಸಿದ್ದೇಶ 4 ವರ್ಷದಿಂದ ಪ್ರೀತಿಸಿ, ಜೂ.1ರಂದು ಇಬ್ಬರು ಮದುವೆಯಾಗಿದ್ದರು ಎನ್ನಲಾಗಿದೆ.
ಜೂ.1ರಂದು ಮದುವೆಯಾದ ಲೀಲಾವತಿ, ಸಿದ್ದೇಶ ಮಾರನೆಯ ದಿನವೇ ದಾವಣಗೆರೆ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ, ಜಿಲ್ಲಾ ಪೊಲೀಸ್ ವರಿಷ್ಠರಿಗೆ ಮನವಿ ಮಾಡಿದ್ದರು. ತಮಗೆ ಜೀವಭಯವಿದ್ದು, ರಕ್ಷಣೆ ನೀಡುವಂತೆ ನವಜೋಡಿ ಎಸ್ಪಿಗೆ ಮನವಿ ಮಾಡಿದ್ದರು. ಈ ಬಗ್ಗೆ ಬಸವಾಪಟ್ಟಣ ಠಾಣೆಗೆ ದೂರು ನೀಡುವಂತೆ ಎಸ್ಪಿ ಸೂಚಿಸಿದ್ದರು. ಎಸ್ಪಿ ಅವರ ಸೂಚನೆಯಂತೆ ವಕೀಲರ ಸಮೇತ ನವದಂಪತಿ ಠಾಣೆಗೆ ದೂರು ನೀಡಲು ಹೋಗಿದ್ದರು.
ತಕ್ಷಣವೇ ಘಟನೆಯನ್ನು ಗಮನಿಸಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಆರೋಪಿ ನಾಗರಾಜನನ್ನು ವಶಕ್ಕೆ ಪಡೆದು, ಮುಂದಾಗಲಿದ್ದ ಅಪಾಯವನ್ನು ತಪ್ಪಿಸಿದರು. ಘಟನೆಯಿಂದ ತೀವ್ರ ಆಕ್ರೋಶಗೊಂಡ ಲೀಲಾವತಿ ತನಗೆ, ತನ್ನ ಪತಿಗೆ ಪೊಲೀಸರು ಸೂಕ್ತ ರಕ್ಷಣೆ, ಭದ್ರತೆ ನೀಡಬೇಕು. ತನ್ನ ಪತಿ ಹಾಗೂ ತನ್ನ ಕೊಲೆಗೆ ಯತ್ನಿಸಿದ ಸೋದರ ಮಾವ ನಾಗರಾಜ ಹಾಗೂ ತನ್ನ ಅಣ್ಣ ಮಂಜುನಾಥನ ವಿರುದ್ಧ ದೂರು ನೀಡುವುದಾಗಿ ಹೇಳಿದ್ದಾರೆ. - - -
- - -
ಚಾಕು ದಾಳಿ, ಆರೋಪಿ ಬಂಧನ: ಎಸ್ಪಿ ಶೇಖರ್ದಾವಣಗೆರೆ: ಬಸವಾಪಟ್ಟಣದ ಠಾಣೆಯಲ್ಲಿ ಪ್ರೀತಿಸಿ ಮದುವೆಯಾದ ಯುವಕನ ಮೇಲೆ ಮಾರಣಾಂತಿಕ ದಾಳಿ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ.ಶೇಖರ್ ತಿಳಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರೀತಿಸಿ ವಿವಾಹವಾಗಿದ್ದಕ್ಕೆ ಯುವಕ- ಯುವತಿ ಬಗ್ಗೆ ಯುವತಿ ಕುಟುಂಬಸ್ಥರ ವಿರೋಧವಿತ್ತು. ಪ್ರೀತಿಸಿ ಮದುವೆಯಾಗಿದ್ದ ಯುವಕ-ಯುವತಿಯಿಂದ ಪೊಲೀಸರು ಮಾಹಿತಿ ಪಡೆಯುತ್ತಿದ್ದ ವೇಳೆ ಚಾಕುವಿನಿಂದ ದಾಳಿ ಮಾಡಲಾಗಿದೆ ಎಂದರು. ಚಾಕುವಿನಿಂದ ದಾಳಿಗೊಳಗಾದ ಯುವಕನನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಚನ್ನಗಿರಿ ತಾ. ಕಂಚುಗಾರನಹಳ್ಳಿ ಗ್ರಾಮದಲ್ಲಿ ಭದ್ರತೆಗಾಗಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ದಾಳಿ ಮಾಡಿದವರ ಮೇಲೆ ದೂರು ನೀಡದಂತೆ ಕೆಲ ಪೊಲೀಸ್ ಸಿಬ್ಬಂದಿ ಒತ್ತಡ ಹೇರಿದ್ದಾರೆಂಬ ಆರೋಪವಿದೆ. ಈ ಬಗ್ಗೆ ಚನ್ನಗಿರಿ ಡಿವೈಎಸ್ಪಿಗೆ ತನಿಖೆ ನಡೆಸುವಂತೆ ಸೂಚನೆ ನೀಡುತ್ತೇವೆ ಎಂದು ಎಸ್ಪಿ ಡಾ.ಶೇಖರ್ ತಿಳಿಸಿದರು.- - - (ಡಾ.ಶೇಖರ್, ಎಸ್ಪಿ)-(ಫೋಟೋಗಳಿವೆ):