ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಬಳಿ ಸೇರಿದ ಗೋರಕ್ಷಕ ಕಾರ್ಯಕರ್ತರು, ಅಕ್ರಮವಾಗಿ ಗೋವುಗಳನ್ನು ಕಳ್ಳ ಸಾಗಾಣಿಕೆಗಾರರು ಹಾಗೂ ಅವರಿಗೆ ರಕ್ಷಣೆ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ಕಳೆದ ಎರಡು ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಗೋವುಗಳ ಕಳ್ಳಸಾಗಾಣಿಕೆ ಜಿಲ್ಲೆಯಲ್ಲಿ ಹೆಚ್ಚಾಗಿದೆ. ಈ ಬಗ್ಗೆ ಹಲವಾರು ಬಾರಿ ಜಿಲ್ಲಾದ್ಯಂತ ಗೋರಕ್ಷಕರು ಹಾಗೂ ಸಾರ್ವಜನಿಕರು ಇಲಾಖೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣಗಳನ್ನು ದಾಖಲಿಸಿದರೂ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ದೂರಿದರು.ಕಳೆದ ಮಾ.20ರಂದು ಬೆಳಗ್ಗೆ ಶ್ರೀರಂಗಪಟ್ಟಣ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಸರಗುಪ್ಪೆ ಸಾರ್ವಜನಿಕರು, ಬೆಳ್ಳಾಳೆ ಕಡೆಯಿಂದ ಪಾಂಡವಪುರ ಕಿರಂಗೂರು, ಶ್ರೀರಂಗಪಟ್ಟಣ ಮಾರ್ಗವಾಗಿ ಮೈಸೂರು ಕಸಾಯಿಖಾನೆಗೆ ಅಕ್ರಮವಾಗಿ ಗೋಸಾಗಣೆ ಮಾಡುತ್ತಿರುವುದಾಗಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿ ಗೋಕಳ್ಳರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ ಎಂದರು.
ಈ ವೇಳೆ ಕೆ.ಆರ್.ಎಸ್. ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಮೇಶ್ ಕರ್ಕಿಕಟ್ಟಿ ತಮ್ಮ ಕಾರ್ಯವಾಪ್ತಿ ಮೀರಿ ಬಂದು ಗೋಕಳ್ಳರ ಪರ ಮಾತನಾಡಿ, ಗೋರಕ್ಷಕರ ಮತ್ತು ಸಾರ್ವಜನಿಕರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆ ಜಿಲ್ಲಾಧ್ಯಕ್ಷ ಚಂದನ್, ಬಾಲರಾಜು, ವಸಂತ್ಕುಮಾರ್, ಸೃಜನ್, ವಿಶ್ವ, ನಿತ್ಯಾಂದ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.