ಗೋಶಾಲೆಗಳಲ್ಲಿ ಗೋವುಗಳಿಗೆ ರಕ್ಷಣೆ: ಸಚಿವ ಮಂಕಾಳ ವೈದ್ಯ

KannadaprabhaNewsNetwork |  
Published : Jun 22, 2025, 01:19 AM IST
ಗೋಶಾಲೆ ಉದ್ಘಾಟಿಸಿದರು | Kannada Prabha

ಸಾರಾಂಶ

ಸಾಕಲು ಸಾಧ್ಯವಾಗದೇ ಇರುವವರು ಗೋಶಾಲೆಗಳಿಗೆ ಗೋವುಗಳನ್ನು ನೀಡಬೇಕು.

ಕಾರವಾರ: ಗೋವುಗಳನ್ನು ಸಾಕುವವರ ಸಂಖ್ಯೆ ಹೆಚ್ಚಬೇಕು. ಸಾಕಲು ಸಾಧ್ಯವಾಗದೇ ಇರುವವರು ಗೋಶಾಲೆಗಳಿಗೆ ಗೋವುಗಳನ್ನು ನೀಡಬೇಕು. ಗೋಶಾಲೆಗಳಲ್ಲಿ ಗೋವುಗಳನ್ನು ಜೋಪಾನವಾಗಿ, ಮೇವು ಹಾಕಿ ನೋಡಿಕೊಳ್ಳಲಾಗುವುದು ಎಂದು ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.ಅವರು ಶನಿವಾರ ಜಿಲ್ಲಾಡಳಿತ, ಉತ್ತರ ಕನ್ನಡ ಜಿಲ್ಲಾ ಪ್ರಾಣಿದಯಾ ಸಂಘ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರ ತಾಲೂಕಿನ ಸಾವಂತವಾಡ ಹೋಬಳಿ ಕಣಸಗಿರಿ ಗ್ರಾಮದಲ್ಲಿ ನಿರ್ಮಿಸಲಾದ ಸರ್ಕಾರಿ ಗೋಶಾಲೆ ಉದ್ಘಾಟಿಸಿ ಮಾತನಾಡಿದರು.

ಗೋವು ತಾಯಿಗೆ ಸಮಾನ ಅವುಗಳು ಅನಾಥವಾಗಿ ಬಿಡದೇ, ಸೂಕ್ತ ರೀತಿಯಲ್ಲಿ ರಕ್ಷಣೆ ಮಾಡುವ ಉದ್ದೇಶದಿಂದ ಗೋಶಾಲೆಯನ್ನು ₹50 ಲಕ್ಷ ವೆಚ್ಚದಲ್ಲಿ ತೆರೆಯಲಾಗಿದೆ ಎಂದ ಸಚಿವರು, ರಾಜ್ಯದಲ್ಲಿ ಎಲ್ಲ ಕಡೆ ಗೋಶಾಲೆ ತೆರೆಯಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ 6 ಕಡೆ ಗೋಶಾಲೆ ತೆರೆಯಲಾಗಿದೆ. ಅನಾಥ ಗೋವುಗಳನ್ನು ರಕ್ಷಿಸಿ, ಗೋಶಾಲೆಗಳಲ್ಲಿ ಸಾಕಲಾಗುತ್ತದೆ. ಪೊಲೀಸ್ ಇಲಾಖೆಯಿಂದ ರಕ್ಷಿಸಲ್ಪಟ್ಟ ಗೋವುಗಳನ್ನು ಸಹ ಇಲ್ಲಿ ಸಾಕಲಾಗುವುದು ಎಂದರು.

ಶಾಸಕ ಸತೀಶ್ ಕೆ ಸೈಲ್, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ ಕಾಂದೂ, ಪ್ರೋಬೇಷನರಿ ಐ.ಎ.ಎಸ್ ಅಧಿಕಾರಿ ಝುಪಿಶಾನ್ ಹಕ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ. ಮೋಹನ ಕುಮಾರ್, ಚಿತ್ತಾಕುಲಾ ಗ್ರಾಮ ಪಂಚಾಯತ ಅಧ್ಯಕ್ಷ ನಿತಿನ್ ಆನಂದ ಬಾಂದೇಕರ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ