ಕನ್ನಡಪ್ರಭ ವಾರ್ತೆ ಹರಿಹರ
ತಹಸೀಲ್ದಾರ್ ಕಚೇರಿಗೆ ಆಗಮಿಸಿದ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಮುಖಂಡರು ಚುನಾವಣಾ ಶಿರಸ್ತೇದಾರ್ ಅಶೋಕ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಅನಂತರ ಮುಖಂಡರು ಮಾತನಾಡಿ, ಸಮಾಜದಲ್ಲಿ ಅಂಬೇಡ್ಕರ್ ಎಲ್ಲರ ಸಮಾನತೆಗಾಗಿ ಹೋರಾಡಿ, ಶೋಷಿತ ಸಮುದಾಯಗಳಿಗೆ ಚೇತನ ತುಂಬಿರುವ ಧೀಮಂತ ನಾಯಕ. ಅವರ ಬಗ್ಗೆ ಸಂಸತ್ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವ ಅಮಿತ್ ಷಾ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಲು ಒತ್ತಾಯಿಸಿದರು.ದೇವಸ್ಥಾನದ ಗಂಟೆಗಳಿಗಿಂತ ಶಾಲೆಯ ಗಂಟೆಗಳು ಹೆಚ್ಚು ಕೇಳಬೇಕೆಂಬುದು ಅವರ ಹಂಬಲವಿತ್ತು. ಧರ್ಮಕ್ಕಿಂತ ಶ್ರಮದ ಬಗ್ಗೆ ಒಲವು ವ್ಯಕ್ತಪಡಿಸುತ್ತಿದ್ದರು. ಅಂಥವರ ಬಗ್ಗೆ ಹಗುರವಾಗಿ ಮಾತನಾಡುವುದು ಖಂಡನೀಯ. ಅಮಿತ್ ಷಾ ಅವರು ತಕ್ಷಣವೇ ಕ್ಷಮೆ ಯಾಚಿಸಬೇಕು. ಪ್ರಧಾನಿ ಮೋದಿ ಈ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಒತ್ತಾಯಿಸಿದರು.
- - - -೨೧ಎಚ್ಆರ್ಆರ್೦೩:
ಹರಿಹರದಲ್ಲಿ ಸಂಸತ್ನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ, ಕೇಂದ್ರ ಗೃಹಸಚಿವರನ್ನು ಸಚಿವ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿ, ಭಾರತ ಕಮ್ಯುನಿಸ್ಟ್ ಪಕ್ಷದಿಂದ ಮನವಿ ಸಲ್ಲಿಸಲಾಯಿತು.