ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪಕ್ಷದ ಪದಾಧಿಕಾರಿಗಳು, ಸದಸ್ಯರು, ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇತ್ತೀಚೆಗೆ ನಡೆದ ಸಂಸತ್ತನ ಚಳಿಗಾಲದ ಅಧಿವೇಶನದಲ್ಲಿ 146 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವ ಕೇಂದ್ರ ಸರ್ಕಾರದ ನಡೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರೋಧಿ ನಡೆಯಾಗಿದೆ. ಈ ಕ್ರಮ ಖಂಡನೀಯ ವಿಷಯವಾಗಿದೆ ಎಂದರು.ಕಾರ್ಪೊರೇಟ್ ಬಂಡವಾಳದಾರರ ಲೂಟಿಯಾಗಿ ಸಂಸತ್ತನ್ನೂ ಬಲಿಕೊಡಲು ಮೋದಿ ಸರ್ಕಾರ ಸಿದ್ಧವಾಗಿದೆ. ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಸತ್ತು ಅತ್ಯಂತ ಪ್ರಧಾನ ಅಂಗವಾಗಿದೆ. ಹೀಗಿದ್ದೂ ಪ್ರಶ್ನೆ ಕೇಳಿದ ಕಾರಣಕ್ಕಾಗಿ ಸಂಸದರನ್ನು ಅಮಾನತುಗೊಳಿಸುವ ಈ ಕ್ರಮವು ಸರ್ವಾಧಿಕಾರತನದ ಧೋರಣೆಯಾಗಿದೆಯಾಗಿದೆ ಎಂದು ಆರೋಪಿಸಿದರು.
ಬಿಜೆಪಿ ಅಧಿಕಾರಕ್ಕಾಗಿ ಧರ್ಮದ ಆಧಾರದಲ್ಲಿ ಜನರ ನಡುವೆ ವಿಷ ಬೀಜ ಬಿತ್ತುವುಇದರ ಮೂಲಕ ಅಮಾಯಕರ ಸಾವುಗಳಿಗೆ ಕಾರಣವಾಗುತ್ತಿದೆ. ರಾಮನು ಸೇರಿದಂತೆ ಎಲ್ಲ ದೇವರುಗಳನ್ನು ತಮ್ಮ ಅಧಿಕಾರದಾಸೆಗಾಗಿ ಬಿಜೆಪಿ ಮತ್ತು ಸಂಘ ಪರಿವಾರದವರು ಮಲೀನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂನ ಜಿಲ್ಲಾ ಕಾರ್ಯದರ್ಶಿ ಕೆ.ಜಿ ವೀರೇಶ, ಮುಖಂಡರಾದ ಡಿ.ಎಸ್.ಶರಣಬಸವ. ಕರಿಯಪ್ಪ ಅಚ್ಚೊಳ್ಳಿ, ನರಸಣ್ಣ ನಾಯಕ, ನರಸಿಂಹ ಪುಚ್ಚಲದಿನ್ನಿ, ರಮೇಶ ಯಾಪಲದಿನ್ನಿ, ವಿರೇಶ, ನಾಗೇಂದ್ರ, ಶ್ಯಾಮ್ ಸುಂದರ, ಈ.ರಂಗನಗೌಡ ಸೇರಿ ಅನೇಕರು ಇದ್ದರು.