ಇಂಧನ ದರ ಏರಿಕೆ ವಿರೋಧಿಸಿ ಸಿಪಿಎಂ ಪ್ರತಿಭಟನೆ

KannadaprabhaNewsNetwork |  
Published : May 24, 2026, 02:15 AM IST
ಹಗರಿಬೊಮ್ಮನಹಳ್ಳಿಯ ಬಸವೇಶ್ವರ ವೃತ್ತದಲ್ಲಿ ಇಂಧನಗಳ ದರ ಏರಿಕೆ ವಿರೋಧಿಸಿ ಸಿಪಿಐ(ಎಂ) ತಾಲೂಕು ಘಟಕದ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಐದು ರಾಜ್ಯಗಳ ಚುನಾವಣೆಯ ಮೊದಲು ಇಂಧನಗಳ ದಾಸ್ತಾನು ಕೊರತೆ ಇಲ್ಲ.

ಹಗರಿಬೊಮ್ಮನಹಳ್ಳಿ: ದೇಶದ ದುಡಿಯುವ ಜನತೆ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾಗ ಪೆಟ್ರೋಲ್, ಡೀಸೆಲ್, ಗ್ಯಾಸ್ ದರಗಳನ್ನು ನಿರಂತರವಾಗಿ ಏರಿಸುವ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಸಿಪಿಎಂ ತಾಲೂಕು ಕಾರ್ಯದರ್ಶಿ ಬಿ.ಮಾಳಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಇಂಧನಗಳ ದರ ಏರಿಕೆ ವಿರೋಧಿಸಿ ಸಿಪಿಎಂ ತಾಲೂಕು ಘಟಕ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಐದು ರಾಜ್ಯಗಳ ಚುನಾವಣೆಯ ಮೊದಲು ಇಂಧನಗಳ ದಾಸ್ತಾನು ಕೊರತೆ ಇಲ್ಲ. ಕೊಲ್ಲಿ ಯುದ್ಧದಿಂದ ದೇಶದಲ್ಲಿ ತೈಲ ಬಿಕ್ಕಟ್ಟು ಉಂಟಾಗದು ಎಂದು ಹೇಳಿದ್ದ ದೇಶದ ಪ್ರಧಾನಿ, ಚುನಾವಣೆಗಳ ಫಲಿತಾಂಶದ ನಂತರ ಇಂಧನಗಳ ಬೆಲೆ ಏರಿಸಿ ವಿದೇಶಕ್ಕೆ ತೆರಳಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕಿಡಿಕಾರಿದರು.

ಕೊಲ್ಲಿ ಯುದ್ಧದ ವೇಳೆಯಲ್ಲಿ ದೇಶದ ಇಂಧನ ಬಿಕ್ಕಟ್ಟಿಗೆ ಅಭಿವೃದ್ಧಿಗೆ ಪೂರಕವಾಗದ ಭಾರತದ ವಿದೇಶಾಂಗ ನೀತಿಯೇ ಕಾರಣವಾಗಿದೆ. ಪ್ರಧಾನಿಯವರ ವಿದೇಶಾಂಗ ನೀತಿಯನ್ನು ಪಕ್ಷ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.

ವಿಶ್ವದ ಬಹುತೇಕ ರಾಷ್ಟ್ರಗಳು ತಮ್ಮ ತಮ್ಮ ದೇಶದ ಜನರ ಹಿತಾಸಕ್ತಿಗೆ ಪೂರಕವಾಗಿ ತೈಲ ಬೆಲೆಗಳನ್ನು ನಿಯಂತ್ರಿಸುತ್ತಿದ್ದರೆ, ನಮ್ಮ ದೇಶದಲ್ಲಿ ಮಾತ್ರ ಕೇಂದ್ರದ ವಿಫಲ ವಿದೇಶಾಂಗ ನೀತಿಯಿಂದಾಗಿ ತೈಲ ಬೆಲೆಗಳ ಏರಿಕೆ ಜನತೆಯ ಮೇಲೆ ಹೊರೆಯಾಗಿದೆ ಎಂದು ಪಕ್ಷದ ಜಿಲ್ಲಾ ಮುಖಂಡ ಆರ್.ಎಸ್.ಬಸವರಾಜ್ ಆರೋಪಿಸಿದರು. ಇಂಧನ ಬೆಲೆಗಳನ್ನು ಇಳಿಸುವ ಜೊತೆಗೆ ಬೆಲೆಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ತಾಲೂಕು ಮುಖಂಡ ಜಗನ್ನಾಥ್ ಒತ್ತಾಯಿಸಿದರು.

ಪಕ್ಷದ ಮುಖಂಡರಾದ ರಂಗಪ್ಪ ದಾಸರ್, ಎಂ.ಆನಂದ್, ಕೆ.ಗಾಳೆಪ್ಪ, ಕೆ.ರಮೇಶ್, ಕೆ.ಅಂಜಿನಮ್ಮ, ಪಿ.ಚಾಂದಬೀ, ಜಿ.ರಮೇಶ್, ದುರುಗಮ್ಮ, ಕೆ.ರಾಮಣ್ಣ, ಕರಿಬಸಮ್ಮ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಹಗರಿಬೊಮ್ಮನಹಳ್ಳಿಯ ಬಸವೇಶ್ವರ ವೃತ್ತದಲ್ಲಿ ಇಂಧನಗಳ ದರ ಏರಿಕೆ ವಿರೋಧಿಸಿ ಸಿಪಿಎಂ ತಾಲೂಕು ಘಟಕದ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉರಿ ಬಿಸಿಲು ಲೆಕ್ಕಿಸದೆ ಅಂಜನಾದ್ರಿಗೆ ಅಪಾರ ಭಕ್ತಗಣ
ತುಂಗಭದ್ರಾ ನದಿ ಒಡಲಲ್ಲಿ ಮರ್ರಂ ಅಕ್ರಮ