ಅನುತ್ತೀರ್ಣ ಮಕ್ಕಳ ಉತ್ತೀರ್ಣಕ್ಕೆ ಪೂರಕ ವಾತಾವರಣ ಕಲ್ಪಿಸಿ

KannadaprabhaNewsNetwork |  
Published : Jun 11, 2024, 01:39 AM IST
10ಕೆಎಂಎನ್ ಡಿ29 | Kannada Prabha

ಸಾರಾಂಶ

ಮಂಡ್ಯ ತಾಲೂಕಿನ ಹೊಳಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ಪರೀಕ್ಷೆ 2 ಸಂಬಂಧ ಕನ್ನಡ ಶಿಕ್ಷಕರಿಗೆ ಆಯೋಜಿಸಿದ್ದ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು

ಮಂಡ್ಯ: ಅನುತ್ತೀರ್ಣಗೊಂಡ ಮಕ್ಕಳು ಮತ್ತೆ ಉತ್ತೀರ್ಣರಾಗಲು ಶಿಕ್ಷಕರು ಪೂರಕ ವಾತಾವರಣ ಕಲ್ಪಿಸಬೇಕು ಎಂದು ಉತ್ತರವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ.ಸೌಭಾಗ್ಯ ಸಲಹೆ ನೀಡಿದರು.

ತಾಲೂಕಿನ ಹೊಳಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ಪರೀಕ್ಷೆ 2 ಸಂಬಂಧ ಕನ್ನಡ ಶಿಕ್ಷಕರಿಗೆ ಆಯೋಜಿಸಿದ್ದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿ, ಪರೀಕ್ಷೆ-1 ರ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಶಿಕ್ಷಕರು ತಮ್ಮದೇ ಆದ ಕಲಿಕಾ ಪೂರಕ ಕಾರ್ಯಕ್ರಮಗಳನ್ನು ಅಳವಡಿಸುವ ಮೂಲಕ ತೇರ್ಗಡೆಯಾಗಲು ಪ್ರೇರೇಪಿಸಬೇಕು ಎಂದರು.

ಜಿಲ್ಲೆಯಲ್ಲಿ ನಡೆದ 10ನೇ ತರಗತಿ ಪರೀಕ್ಷೆ ಫಲಿತಾಂಶದಲ್ಲಿ ಮಂಡ್ಯ ಉತ್ತರ ವಲಯ ಪ್ರಥಮ ಸ್ಥಾನ ಪಡೆದಿರುವುದು ಸಂತಸ ತಂದಿದೆ. ಅದೇ ರೀತಿ ಮತ್ತೊಂದು ಪರೀಕ್ಷೆಯಲ್ಲಿ ಮಕ್ಕಳ ಕಲಿಕೆ ಗಟ್ಟಿಯಾಗಿ ಪರೀಕ್ಷೆಗೆ ಅಣಿಗೊಳಿಸಬೇಕಾದ ಮಹತ್ತರ ಸವಾಲನ್ನು ಎದುರಿಸಲು ಶಿಕ್ಷಕರು ಸಿದ್ದರಾಗಬೇಕು ಎಂದು ತಿಳಿಸಿದರು. ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಪುನರಾವರ್ತನೆಯನ್ನು ನಿತ್ಯ ಆಯೋಜಿಸಿ ಕಲಿಕಾ ಪುನರ್ ಬಲವರ್ಧನೆಗೊಳಿಸಬೇಕು ಎಂದು ಕಿವಿಮಾತು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾದ ಜಿ.ಕೆ.ಸತೀಶ್ ಹಾಗೂ ಜಿ.ಸಿ.ರಜನಿ ಪಾಸಿಂಗ್ ಪ್ಯಾಕೇಜ್ ಹಾಗೂ ಶಾಲೆಯಲ್ಲಿ ಗ್ರೇಡ್ ಕಡಿಮೆ ಇರುವ ಮಕ್ಕಳ ಕಲಿಕೆ ಗಟ್ಟಿಗೊಳಿಸಲು ಹಮ್ಮಿಕೊಳ್ಳುವ ಕುರಿತು ಮಾಹಿತಿ ನೀಡಿದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಕೆ.ಆರ್.ಶಶಿಧರ ಈಚಗೆರೆ, ಪ್ರಭಾರಿ ಮುಖ್ಯ ಶಿಕ್ಷಕ ಪುಟ್ಟಸ್ವಾಮಯ್ಯ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಎಚ್.ಚಂದ್ರಶೇಖರ್, ಶಿಕ್ಷಕರಾದ ನೋಹನ್ ಕುಮಾರ್, ಸಂಗಪ್ಪ ರಾಜನಾಳ್, ಎ.ಆರ್.ಶ್ರೀನಿವಾಸ್, ಎಂ.ಆರ್.ಸುನೀತಾ ಹಾಗೂ ಮಂಡ್ಯ ಉತ್ತರ ವಲಯದ ಕನ್ನಡ ಶಿಕ್ಷಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!