ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಇದರ ಬಗ್ಗೆ ಅರಿವು, ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜರುಗಿಸಿ, ಕುಡಿಯುವ ನೀರು, ಜಾನುವಾರು ಮೇವು, ಕೃಷಿ ಬೆಳೆಗಳ ಬಿತ್ತನೆ ಬಗ್ಗೆ ಪ್ರಗತಿ ಪರಿಶೀಲಿಸಿ ಮಾತನಾಡಿದರು.ಬತ್ತಿದ ೧೩೫೦ ಕೊಳವೆ ಬಾವಿ
ಬೋರ್ವೆಲ್, ಪೈಪ್ ಲೈನ್, ಖಾಸಗಿ ಕೊಳವೆ ಬಾವಿ ಬಾಡಿಗೆ ಪಡೆಯಲು ಒಪ್ಪಂದ ಎಲ್ಲವನ್ನು ಸಮರ್ಪಕವಾಗಿ ಸಿದ್ದಪಡಿಸಿಕೊಳ್ಳಲು ಸೂಚಿಸಿದರು. ಸಾರ್ವಜನಿಕರಲ್ಲಿ ನೀರಿನ ಮಿತ ಬಳಕೆ, ಅಪವ್ಯಯ, ಸೋರಿಕೆ ಬಗ್ಗೆ ಅರಿವು ಮೂಡಿಸಬೇಕು. ೨೦೨೩-೨೪ ನೇ ಸಾಲಿನಲ್ಲಿ ಎಸ್ ಆರ್ ಡಿ ಎಫ್ ಅನುದಾನದಡಿ ನಗರ ಪ್ರದೇಶಗಳಲ್ಲಿ ೧೩೧,ಗ್ರಾಮೀಣ ಪ್ರದೇಶಗಳಲ್ಲಿ ೩೦೫ ಒಟ್ಟು ೪೩೬ ಕೊಳವೆಬಾವಿಗಳನ್ನು ದುರಸ್ಥಿಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಯರಗೋಳ್ನಿಂದ ನೀರುಅಗತ್ಯವಿರುವೆಡೆ ಈಗಾಗಲೇ ನಗರಸಭೆಯ ಟ್ರ್ಯಾಕ್ಟರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಯರಗೊಳ ಜಲಾಶಯದ ನೀರನ್ನು ಪ್ರತಿ ೪ ದಿನಗಳಿಗೊಮ್ಮೆ ಹಾಗೂ ಕೊಳವೆ ಬಾವಿ ನೀರನ್ನು ಪ್ರತಿ ಎರಡು ದಿನಗಳಿಗೊಮ್ಮೆ ಪೂರೈಸಲಾಗುತ್ತಿದೆ. ಸಾಧ್ಯವಾಗುವುದಾದರೆ ಯಾರಗೊಳ ನೀರನ್ನು ಎರಡು ದಿನಗಳಿಗೊಮ್ಮೆ ಪೂರೈಸಲು ಕ್ರಮ ವಹಿಸಬೇಕು ಎಂದರು. ಗೊಬ್ಬರಕ್ಕೆ ಕೊರತೆ ಇಲ್ಲ
ರಾಜ್ಯ ವಿಪತ್ತು ನಿರ್ವಹನಾ ಅನುದಾನದಲ್ಲಿ ೪.೭೫ಕೋಟಿ ಮೊತ್ತದ ಅನುದಾನ ಲಭ್ಯವಿದೆ. ಜಿಲ್ಲೆಯಲ್ಲಿ ೨೯ ವಾರಗಳಿಗೆ ಸಾಕಾಗುವಷ್ಟು ೩೩೮೬೪೦ ಟನ್ ಗಳಷ್ಟು ಜಾನುವಾರು ಮೇವು ಲಭ್ಯವಿದೆ. ಜಿಲ್ಲೆಯಲ್ಲಿ ಒಟ್ಟು ಶೇ.೬.೯೧ರಷ್ಟು ನೀರಾವರಿ ಕೃಷಿ ಬೆಳೆಗಳ ಬಿತ್ತನೆ ಆಗಿದೆ. ಪ್ರಸ್ತುತ ೯೬೭೫ ಮೆ. ಟನ್ ನಷ್ಟು ರಸಗೊಬ್ಬರ ದಾಸ್ತಾನು ಲಭ್ಯವಿದೆ ಎಂದು ಸಂಬಂಧಿಸಿದ ಅಧಿಕಾರಿಗಳು ಸಭೆಗ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಜಿಪಂ ಸಿಇಓ ಡಾ. ಪ್ರವೀಣ್ ಪಿ.ಬಾಗೇವಾಡಿ, ಎಡಿಸಿ ಮಂಗಳ ಇದ್ದರು.