ಕನ್ನಡಪ್ರಭ ವಾರ್ತೆ ಯಾದಗಿರಿ
ಇಲ್ಲಿನ ತಾಲೂಕು ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಮನರೇಗಾ ಯೋಜನೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ ನಿರಂತರವಾಗಿ ಕೆಲಸ ನೀಡಲು ಸೂಚಿಸಿದರು.
ಯಾದಗಿರಿ ಮತ್ತು ಗುರುಮಠಕಲ್ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮನರೇಗಾ ಯೋನೆಯಡಿಯಲ್ಲಿ ಏ.1ರಿಂದ ಇಲ್ಲಿಯವರೆಗೆ ಪ್ರತಿ ಗ್ರಾಮ ಪಂಚಾಯಿತಿಗೆ ಕೂಲಿ ಕಾರ್ಮಿಕರಿಗೆ ಕೆಲಸ ಒದಗಿಸಿಕೊಡಲು ಗುರಿ ನೀಡಿದ್ದು, ಗುರಿಗೆ ಅನುಗುಣವಾಗಿ ಪಿಡಿಒಗಳು ಕೆಲಸ ನೀಡಿದ ಕುರಿತು ಅವರು ಪರಿಶೀಲಿಸಿದರು.ಗುರಿ ಸಾಧನೆ ಮಾಡದೆ ಇರುವ ಪಿಡಿಒಗಳಿಗೆ ಪ್ರಗತಿ ಸಾಧಿಸುವಂತೆ ಸೂಚಿಸಿದರು. ಬೇಸಿಗೆಯ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ ಮತ್ತು ಕೃಷಿ ಕಾರ್ಮಿಕರಿಗೆ ಕೆಲಸ ಇರುವುದಿಲ್ಲ. ಈ ಸಮಯದಲ್ಲಿ ಬಡ ಕುಟುಂಬಗಳಿಗೆ ನರೇಗಾ ಯೋಜನೆಯಡಿಯಲ್ಲಿ ಕೆಲಸ ಒದಗಿಸಿ ಕಾಮಗಾರಿ ಯೋಜನೆ ನಿಯಮಾನುಸಾರವಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಬಲವಂತ ರಾಠೋಡ್, ಯಾದಗಿರಿ ಮತ್ತು ಗುರುಮಠಕಲ್ ಕಾರ್ಯನಿರ್ವಾಹಕ ಅಧಿಕಾರಿ ವಿಲಾಸ್ ರಾಜ್, ಸಹಾಯಕ ನಿರ್ದೇಶಕ ಮಲ್ಲಣ್ಣ ಸಂಕನೂರ, ರಾಮಚಂದ್ರ ಮಸೂದೆ, ವಿಜಯಲಕ್ಷ್ಮಿ ಶಹಬಾದಿ, ಸಹಾಯಕ ಲೆಕ್ಕಾಧಿಕಾರಿ ಕಾಶಿನಾಥ, ತಾಲೂಕು ಯೋಜನಾ ಅಧಿಕಾರಿ ಶಶಿಧರ ಹಿರೇಮಠ, ವ್ಯವಸ್ಥಾಪಕ ಶಿವರಾಯ ಸೇರಿ ಇತರರಿದ್ದರು.