ಕನ್ನಡಪ್ರಭ ವಾರ್ತೆ ಕೋಲಾರಗೃಹ ಆರೋಗ್ಯ ಯೋಜನೆಯ ಸಹಯೋಗದಿಂದ ಕ್ಷಯರೋಗವನ್ನು ಪತ್ತೆ ಹಚ್ಚಿ ಅದಕ್ಕೆ ತ್ವರಿತ ಗತಿಯಲ್ಲಿ ಚಿಕಿತ್ಸೆ ನೀಡಬೇಕು. ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ಅರಿವು ಕಾರ್ಯಕ್ರಮ ಹಾಗೂ ವ್ಯಾಪಕವಾಗಿ ಪ್ರಚಾರವನ್ನು ಜನರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಎನ್.ಟಿ.ಇ.ಪಿ ೧೦೦ ದಿನಗಳ ಶಿಬಿರ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ತರಬೇತಿ ನೀಡಲು ಸೂಚನೆ
ಡಿ.೭ರಂದು ಶಿಬಿರ ಉದ್ಘಾಟಿಸಲಾಗುವುದು, ಮಾ.೧೭/೨೦೨೫ ರವರೆಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಹಬ್ಬ ಹರಿದಿನಗಳ ಸಂದರ್ಭಗಳಲ್ಲಿ ಹಾಗೂ ಯುವಜನತೆಗೆ ಕ್ಷಯ ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಕ್ಷಯ ರೋಗ ಬಂದು ವಾಸಿಯಾದ ವ್ಯಕ್ತಿಗಳನ್ನು ಕರೆತಂದು ಜನರಿಗೆ ಅರಿವು ಮೂಡಿಸುವುದು. ಅರಿವು ಕಾರ್ಯಕ್ರಮಗಳಲ್ಲಿ ಯುವಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿವಾರಣಾಧಿಕಾರಿ ಡಾ.ಜಿ.ಪ್ರಸನ್ನಕುಮಾರ್ ಇದ್ದರು.