ಕನ್ನಡಪ್ರಭ ವಾರ್ತೆ ಮಾಲೂರು
ಉತ್ತಮ ಹವ್ಯಾಸ ಬೆಳೆಸಿಕೊಳ್ಳಿ
ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಗಮನ ನೀಡಿ ತಂದೆ ತಾಯಿಯ ಕನಸು ನನಸು ಮಾಡುವಂತೆ ಹಾಗೂ ಉತ್ತಮ ಪ್ರಜೆಯಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ದುಶ್ಚಟಗಳಿಂದ ದೂರವಿದ್ದು ಉತ್ತಮ ಹವ್ಯಾಸಗಳನ್ನು ರೂಡಿಸಿಕೊಳ್ಳಬೇಕು ತಂದೆ ತಾಯಿ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಕಾಲೇಜಿಗೆ ಕಳಿಸುತ್ತಾರೆ. ವಿದ್ಯಾರ್ಥಿಗಳು ಯಾವುದೇ ದುಶ್ಚಟಕ್ಕೆ ಬಲಿಯಾಗದೆ ಜೀವನವನ್ನು ಉಜ್ವಲವಾಗಿ ರೂಪಿಸಿಕೊಳ್ಳಿ ಎಂದರು.ಇದೇ ಸಂದರ್ಭದಲ್ಲಿ ಜೆ.ಎಸ್.ಎಸ್. ಕಾಲೇಜು, ಸರ್ಕಾರಿ ಬಾಲಕಿಯರ ಕಾಲೇಜು, ಪಟ್ಟಣದ ಬಸ್ ನಿಲ್ದಾಣ ಹಾಗೂ ವೃತ್ತಗಳಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ಮಂಜುಳ, ಪೋಲಿಸ್ ಇಲಾಖೆಯ ಪಿಎಸ್ಐಗಳಾದ ವರಲಕ್ಷ್ಮಮ್ಮ, ಗೀತಮ್ಮ, ಎ.ಎಸ್.ಐಗಳಾದ ಆನಂದ್, ಮುನೇಗೌಡ, ನಾರಾಯಣಸ್ವಾಮಿ, ಸಿಬ್ಬಂದಿ ಮೋಹನ್, ಉಪನ್ಯಾಸಕಾರದ ವೆಂಕಟೇಶ್, ಶಂಕರ್, ಮೋಹನ್, ಶಿಕ್ಷಕ ಆನಂದ್, ಇನ್ನಿತರರು ಹಾಜರಿದ್ದರು.