ಮಣ್ಣು ಪರೀಕ್ಷೆ ಅಭಿಯಾನದ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿ: ಪಿ.ಕೆ.ಬಸವರಾಜಪ್ಪ ಸಲಹೆ

KannadaprabhaNewsNetwork |  
Published : Feb 16, 2026, 02:00 AM IST
 ನರಸಿಂಹರಾಜಪುರ ಕೃಷಿ ಇಲಾಖೆಯ ಸಭಾಂಗಣದಲ್ಲಿ ನಡೆದ ತಾಲೂಕು ಕೃಷಿಕ ಸಮಾಜದ ದ್ವೈಮಾಸಿಕ ಸಭೆಯು ಕೃಷಿಕ ಸಮಾಜದ ಅಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯಿತು. | Kannada Prabha

ಸಾರಾಂಶ

ನರಸಿಂಹರಾಜಪುರಮುಂದಿನ ದಿನಗಳಲ್ಲಿ ಮಣ್ಣು ಪರೀಕ್ಷಾ ಅಭಿಯಾನವನ್ನು ಕೃಷಿ, ತೋಟಗಾರಿಕೆ ಹಾಗೂ ಕಾಫಿ ಬೋರ್ಡ್ ಸಹಯೋಗದಲ್ಲಿ ಹಮ್ಮಿಕೊಂಡು ರೈತರಿಗೆ ಮಣ್ಣು ತೆಗೆಯುವ ವಿಧಾನ ಹಾಗೂ ಮಣ್ಣಿನ ಪ್ರಾಮುಖ್ಯತೆ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ.ಬಸವರಾಜಪ್ಪ ಸಲಹೆ ನೀಡಿದರು.

ಕೃಷಿ ಇಲಾಖೆಯಲ್ಲಿ ನಡೆದ ತಾಲೂಕು ಕೃಷಿಕ ಸಮಾಜದ ಆಡಳಿತ ಮಂಡಳಿ ದ್ವೈ ಮಾಸಿಕ ಸಭೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಮುಂದಿನ ದಿನಗಳಲ್ಲಿ ಮಣ್ಣು ಪರೀಕ್ಷಾ ಅಭಿಯಾನವನ್ನು ಕೃಷಿ, ತೋಟಗಾರಿಕೆ ಹಾಗೂ ಕಾಫಿ ಬೋರ್ಡ್ ಸಹಯೋಗದಲ್ಲಿ ಹಮ್ಮಿಕೊಂಡು ರೈತರಿಗೆ ಮಣ್ಣು ತೆಗೆಯುವ ವಿಧಾನ ಹಾಗೂ ಮಣ್ಣಿನ ಪ್ರಾಮುಖ್ಯತೆ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ.ಬಸವರಾಜಪ್ಪ ಸಲಹೆ ನೀಡಿದರು.

ಕೃಷಿ ಇಲಾಖೆಯಲ್ಲಿ ನಡೆದ ತಾಲೂಕು ಕೃಷಿಕ ಸಮಾಜದ ಆಡಳಿತ ಮಂಡಳಿ ದ್ವೈ ಮಾಸಿಕ ಸಭೆಯಲ್ಲಿ ಮಾತನಾಡಿ, ರೈತರಿಗೆ ತಮ್ಮ ಜಮೀನಿನ ಮಣ್ಣಿನ ಫಲವತ್ತತೆ ಬಗ್ಗೆ ಅರಿವು ಅಥವಾ ಮಾಹಿತಿ ಇಲ್ಲದೆ ಇಳುವರಿ ಕಡಿಮೆ ಪಡೆಯುತ್ತಿದ್ದಾರೆ. ಆದ್ದರಿಂದ ರೈತರಿಗೆ ತಮ್ಮ ಜಮೀನಿನ ಮಣ್ಣನ್ನು ಯಾವ ಸಮಯಕ್ಕೆ ಪರೀಕ್ಷಿಸಬೇಕು. ಯಾವ, ಯಾವ ಗೊಬ್ಬರ ಹಾಕಬೇಕು ಹಾಗೂ ಮಣ್ಣಿಗೆ ಅನುಗುಣವಾಗಿ ಯಾವ ಬೆಳೆಗಳನ್ನು ಬೆಳೆದರೆ ಉತ್ತಮ ಇಳುವರಿ ಪಡೆಯ ಬಹುದು ಎಂಬ ಬಗ್ಗೆ ಮಾಹಿತಿ ನೀಡಬೇಕು ಎಂದು ಕೃಷಿ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಪಶು ವೈದ್ಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಪ್ರೀತಮ್ ಮಾಹಿತಿ ನೀಡಿ, ಅನುಗ್ರಹ ಯೋಜನೆಯಡಿ, ಜಾನುವಾರು ಗಳು ಆಕಸ್ಮಿಕವಾಗಿ ಮರಣ ಹೊಂದಿದರೆ ₹15 ಸಾವಿರ, ಕುರಿಗಳು ಮರಣ ಹೊಂದಿದರೆ 3 ರಿಂದ 6 ತಿಂಗಳ ಮರಿಗಳಿಗೆ ₹5 ಸಾವಿರ, 6 ತಿಂಗಳ ಮೇಲ್ಪಟ್ಟ ಮರಿಗಳಿಗೆ ಏಳೂವರೆ ಸಾವಿರ ಪರಿಹಾರ ನೀಡಲು ಅವಕಾಶ ವಿದೆ. ಜಾನುವಾರುಗಳಿಗೆ ಸಂಬಂಧಪಟ್ಟ ಅಥವಾ ತುರ್ತು ಸಂದರ್ಭದಲ್ಲಿ ಪಶು ಆಸ್ಪತ್ರೆ ಸಹಾಯವಾಣಿ 1962 ಕ್ಕೆ ಕರೆ ಮಾಡಿದರೆ ಪಶು ಸಂಜೀವಿನಿ ವಾಹನಗಳ ಮೂಲಕ ಜಾನುವಾರುಗಳಿಗೆ ಮನೆ ಬಾಗಿಲಿಗೆ ಬಂದು ಉಚಿತ ಸೇವೆ ಒದಗಿಸಲಾಗುವುದು ಎಂದರು.

ಸಭೆ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ ಮಾತನಾಡಿ, ಮಲೆನಾಡಿನ ಸೂಕ್ತ ತಳಿಗಳ ಬಗ್ಗೆ ನೀಡಬೇಕು ಎಂದರು. ಡಾ.ಪ್ರೀತಮ್‌ ಮಾತನಾಡಿ, ಮಲೆನಾಡಿನಲ್ಲಿ ಮಲ್ನಾಡ್ ಗಿಡ್ಡ, ಅಮೃತ್ ಮಹಾಲ್, ಜೆರ್ಸಿ ಕ್ರಾಸ್ ಬ್ರೀಡ್ ಸೂಕ್ತ ಎಂದು ತಿಳಿಸಿದರು. ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರೋಹಿತ್ ಮಾತನಾಡಿ, ಎಲೆ ಚುಕ್ಕಿ ರೋಗಕ್ಕೆ ರೈತರಿಗೆ ಈಗಾಗಲೇ ಔಷಧಿ ವಿತರಿಸಲಾಗಿದೆ. 2026 ರಿಂದ 2028ನೇ ಸಾಲಿನ ಅಡಿಕೆ ಬೆಳೆ ವಿಮೆ ಟರ್ಮ್ ಶೀಟ್ ಅನ್ನು ಹೊಸದಾಗಿ ರಚಿಸಲಾಗುತ್ತಿದೆ. ಇದರ ಅನ್ವಯ ಮುಂದಿನ ದಿನಗಳಲ್ಲಿ ಶೇ.40 ರಷ್ಟು ಕ್ಲೇಮ್ ಹೆಚ್ಚಾಗುತ್ತದೆ. ಪ್ರಸ್ತುತ ತೋಟಗಾರಿಕೆ ಇಲಾಖೆ ಯಿಂದ ರೈತರಿಗೆ ವಿತರಿಸಲು 50 ಸಾವಿರ ಕಾಳು ಮೆಣಸಿನ ಸಸಿ ಹಾಗೂ 4 ಸಾವಿರ ಅಡಕೆ ಸಸಿಗಳನ್ನು ನೀಡ ಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಎಚ್.ಕೆ.ನವೀನ್, ಸದಸ್ಯರಾದ ಎನ್.ಎಲ್.ತೀರ್ಥೇಶ್, ಎಚ್.ಎಂ. ನಾಗರಾಜ, ವೈ.ಎಸ್. ರವಿ, ಎಚ್.ಎನ್ ರವಿಶಂಕರ್, ಎನ್.ಎಸ್.ರಂಜಿತ್ , ಎಚ್.ಆರ್.ತಿಮ್ಮಯ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗುವಿನ ಸಾಮರ್ಥ ಅರಿತು ಬೋಧನೆ ಮಾಡಿ: ಡಾ. ಮಹೇಶ ದೇಸಾಯಿ
ಉತ್ತಮ ಕಾರ್ಯಕ್ಕೆ ಭಗವಂತನ ಕೃಪೆ ಎಲ್ಲರಿಗೂ ಅಗತ್ಯ: ಡಾ.ಜಿ.ಎಸ್.ಶಿವಕುಮಾರ್