ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಇಲಾಖೆ, ಮುಂಗಾರು ಪರಿಸ್ಥಿತಿ ಹಾಗೂ ಇತರೆ ಪ್ರಮುಖ ವಿಷಯಗಳ ಕುರಿತು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಪರ್ಯಾಯ ಬೆಳೆ ಬೆಳೆಯುವುದು, ಬಿತ್ತನೆ ಸಲಹೆ, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ, ಬೆಳೆ ವಿಮೆ, ಪೌತಿ ಖಾತೆ ಆಂದೋಲನ ಹಾಗೂ ಇತರೆ ವಿಷಯಗಳ ಬಗ್ಗೆ ಚರ್ಚಿಸಿದರು.
ಅರ್ಹ ರೈತರು ಬೆಳೆ ವಿಮೆಯನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು, ಗರಿಷ್ಠ ಪ್ರಮಾಣದ ರೈತರು ಯೋಜನೆಯ ಪ್ರಯೋಜನ ಪಡೆಯುವಂತೆ ನೋಡಿಕೊಳ್ಳಲು ಕೃಷಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.ಪೌತಿ ಖಾತೆ ಆಂದೋಲನ ಪ್ರಕ್ರಿಯೆಯನ್ನು ಯಾವುದೇ ವಿಳಂಬವಿಲ್ಲದೆ, ಸಮರ್ಪಕ ಮತ್ತು ಪಾರದರ್ಶಕವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸಬೇಕು. ಸಾರ್ವಜನಿಕರಿಗೆ ನಿಗದಿತ ಅವಧಿಯೊಳಗೆ ಸೇವೆ ಒದಗಿಸಲು ಸಕಾಲ ಯೋಜನೆಯನ್ನು ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ನಿಗದಿತ ಕಾಲಮಿತಿಯೊಳಗೆ ಅರ್ಜಿ ವಿಲೇವಾರಿ ಮಾಡದಿದ್ದರೆ ಅಧಿಕಾರಿಗಳು ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಸಿದರು.
ಡೀಸಿ ಡಾ.ಕುಮಾರ ಮಾತನಾಡಿ, ಮುಂಗಾರು ಮಳೆ ವೈಫಲ್ಯದಿಂದ ಜಿಲ್ಲೆಯಾದ್ಯಂತ ಸುಮಾರು ಶೇ.28 ರಷ್ಟು ಮಳೆ ಕೊರತೆ ಉಂಟಾಗಿದೆ.ಈ ಕಾರಣ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಮಳೆ ಕೊರತೆಯಾಗಿದೆ. ಅಲಸಂದೆ, ತೊಗರಿ, ಹೆಸರು ಮುಂತಾದ ಬೆಳೆಗಳ ಬಿತ್ತನೆಗೂ ಸಹಾ ನೀರಿನ ಕೊರತೆಯಾಗಿದೆ. ದ್ವಿದಳ ಧಾನ್ಯ ಮತ್ತು ಎಣ್ಣೆಕಾಳುಗಳಾದ ಮುಸುಕಿನಜೋಳ, ತೊಗರಿ, ಉದ್ದು, ಹೆಸರು, ಅಲಸಂದೆ, ಎಳ್ಳು, ಹರಳು ಮುಂತಾದ ಬೆಳೆಗಳ ನಿಗದಿತ ಬಿತ್ತನೆ ಕ್ಷೇತ್ರದ ಗುರಿಯನ್ನು ತಲುಪಲು ಸಾಧ್ಯವಾಗಿಲ್ಲ ಎಂದರು.
ಮುಂಗಾರು ಮಳೆ ವೈಫಲ್ಯ ಹಿನ್ನೆಲೆಯಲ್ಲಿ ರೈತರಿಗೆ ಆರ್ಥಿಕ ನಷ್ಟವಾಗದಂತೆ ತಡೆಯಲು ಪರ್ಯಾಯ ಬೆಳೆಗಳನ್ನು ಬೆಳೆಯಲು ರೈತರಿಗೆ ಅರಿವು ಮೂಡಿಸಲು ಕೃಷಿ ಇಲಾಖೆಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.
ಬೇಸಿಗೆಯಲ್ಲಿ ನೀರಿನ ಅಭಾವ ಎದುರಿಸಬಹುದಾದ ಗ್ರಾಮಗಳಿಗೆ ಟ್ಯಾಂಕರ್ಗಳ ಮೂಲಕ ನೀರು ಪೂರೈಸಲು ಉದ್ದೇಶಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ. ಸಾರ್ವಜನಿಕರು ನೀರಿಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಬಹುದು. ಮತ್ತು ಪರಿಹರಿಸಿಕೊಳ್ಳಬಹುದು. ಶುದ್ಧ ಕುಡಿಯುವ ನೀರಿನ ಘಟಕಗಳನಿರ್ವಹಣೆ ಸರಿಯಾಗಿ ನಡೆಯುವಂತೆ ಮತ್ತು ನೀರು ಪೂರೈಕೆಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಗ್ರಾಪಂ ಪಿಡಿಒಗಳಿಗೆ ನಿರ್ದೇಶಿಸಲಾಗಿದೆ ಎಂದು ಹೇಳಿದರು.