ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಸಮುದಾಯ ಮುಖಂಡರೊಂದಿಗೆ ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ರಾಜ್ಯಾದ್ಯಂತ ನಾಗರಿಕರ ಸ್ಥಿತಿ-ಗತಿ, ಅಗತ್ಯತೆ, ಬೇಡಿಕೆ ತಿಳಿಯಲು ಹಾಗೂ ಅವರ ಪರವಾಗಿ ಯೋಜನೆಗಳನ್ನು ರೂಪಿಸಲು ಅಂಕಿ-ಅಂಶ ಸಂಗ್ರಹಿಸುವ ಸಲುವಾಗಿ ಜಿಲ್ಲೆಯಲ್ಲಿ ಸಮೀಕ್ಷೆ ಕೈಗೊಂಡಿದ್ದು, ಸಾಧ್ಯವಾದಷ್ಟು ಸಮೀಕ್ಷೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ತಿಳಿಸಿದರು.
ಒಂದು ಕುಟುಂಬ ಮತ್ತು ವ್ಯಕ್ತಿಯ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಇದಾಗಿದ್ದು, ಸಮೀಕ್ಷೆಯಲ್ಲಿ ಕೆಲವು ವೈಯಕ್ತಿಕ ಹಾಗೂ ಕುಟುಂಬ ಮಾಹಿತಿಗಳನ್ನು ಸಂಗ್ರಹಿಸಲಾಗುವುದು. ಗಣತಿದಾರರು ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಧನಾತ್ಮಕವಾಗಿ ಸಹಕರಿಸಲು ಜನರಿಗೆ ತಿಳಿಸಿ. ಈಗಾಗಲೇ ಆಶಾ ಕಾರ್ಯಕರ್ತೆಯರು, ಸ್ಥಳೀಯ ಸಂಸ್ಥೆಗಳ ಕಸ ವಿಲೇವಾರಿ ವಾಹನಗಳಲ್ಲಿ ಜಿಂಗಲ್ಸ್, ಬ್ಯಾನರ್ಗಳನ್ನು ಅಳವಡಿಸುವ ಮೂಲಕ ಸಮೀಕ್ಷೆ ಕುರಿತು ಪ್ರಚಾರ ಕೈಗೊಂಡಿದ್ದು, ಅರಿವು ಮತ್ತು ಜಾಗೃತಿ ಮೂಡಿಸಲು ಸಮುದಾಯದ ಮುಖ್ಯಸ್ಥರ ಪಾತ್ರವೂ ದೊಡ್ಡದಾಗಿದ್ದು ಸಮೀಕ್ಷೆ ಕುರಿತು ಹೆಚ್ಚು ಪ್ರಚುರಪಡಿಸುವಂತೆ ಹೇಳಿದರು.ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಮಾತನಾಡಿ, ಈಗಾಗಲೇ ಗಣತಿದಾರರಿಗೆ ಸಮೀಕ್ಷೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗಿದೆ. ಗಣತಿದಾರರು ತರಬೇತಿಯಲ್ಲಿ ನೀಡಲಾಗಿರುವ ಮಾರ್ಗದರ್ಶನದಂತೆ ಸಮೀಕ್ಷೆ ನಡೆಸಲಿದ್ದಾರೆ. ಸಮಯ ಕಡಿಮೆಯಿದ್ದು, ಸಾರ್ವಜನಿಕರಿಗೆ ಸಮೀಕ್ಷೆ ಕುರಿತು ಮಾಹಿತಿ ನೀಡುವುದು ಹಾಗೂ ಜಾಗೃತಿ ಮೂಡಿಸುವ ಅಗತ್ಯವಿದೆ. ಸಮೀಕ್ಷೆ ಯಶಸ್ವಿಗೊಳಿಸಲು ಜನರಲ್ಲಿ ಜಾಗೃತಿ ಮೂಡಿಸಲು ಸಹಕರಿಸುವಂತೆ ತಿಳಿಸಿದರು.
ಸಮುದಾಯದ ಮುಖಂಡರು ಮಾತನಾಡಿ ಸಮೀಕ್ಷೆಯ ದಿನವನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ತಿಳಿಸಿದರೆ ಕುಟುಂಬದ ಸದಸ್ಯರು ಮನೆಯಲ್ಲಿರಲು ಸಹಕಾರಿಯಾಗುತ್ತದೆ ಎಂದು ಸಲಹೆ ನೀಡಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಂಜುಳ ಹಾಗೂ ವಿವಿಧ ಸಮುದಾಯದ ಮುಖಂಡರು, ಪದಾಧಿಕಾರಿಗಳು ಹಾಜರಿದ್ದರು.