ಲಕ್ಷ್ಮೇಶ್ವರ: ಇಂದಿನ ವಿದ್ಯಾರ್ಥಿಗಳೇ ಮುಂದಿನ ಮತದಾರರು, ಆದ್ದರಿಂದ ಅವರಲ್ಲಿ ಮತದಾನದ ಬಗ್ಗೆ ಹಾಗೂ ಪ್ರಜಾಪ್ರಭುತ್ವ ಬಗ್ಗೆ ಅರಿವು ಮೂಡಿಸಲು ಇಂತಹ ಸ್ಪರ್ಧೆಗಳು ಸಹಕಾರಿ ಎಂದು ಲಕ್ಷ್ಮೇಶ್ವರ ತಾಲೂಕಿನ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ.ಬಿ. ಹೊಸಮನಿ ಹೇಳಿದರು.
ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ. 4 ರಲ್ಲಿ ಶಿರಹಟ್ಟಿ ಬ್ಲಾಕ್ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸ್ವೀಪ್ ಸಮಿತಿ ಶಿರಹಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಿರಹಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಶಿರಹಟ್ಟಿ ಸಹಯೋಗದಲ್ಲಿ ಏರ್ಪಡಿಸಲಾಗಿತ್ತು.
ಮತದಾರ ಜಾಗೃತರಾದಲ್ಲಿ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವ ಅದರ ಶಕ್ತಿ ಸಾಮರ್ಥ್ಯಗಳ ಬಗ್ಗೆ ತಿಳಿಸಿ ಕೊಡುವ ಕಾರ್ಯ ಶಿಕ್ಷಕರು ಮಾಡಬೇಕು ಎಂದು ಹೇಳಿದರು.ಈ ವೇಳೆ ಬಿ.ಆರ್.ಪಿ ಈಶ್ವರ್ ಮೆಡ್ಲೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ಪರ್ಧೆಯ ರೂಪರೇಷಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಣೆ ನೀಡಿದರು. ಇಂತಹ ಸ್ಪರ್ಧೆಗಳಿಂದ ಮಕ್ಕಳಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಸಹಕಾರಿ ಎಂದರು.
ರಸಪ್ರಶ್ನೆ ಸ್ಪರ್ಧೆ:
ದ್ವಿತೀಯ ಸ್ಥಾನ: ಎಸ್.ಎಸ್.ಹೈಸ್ಕೂಲ್ ಹೆಬ್ಬಾಳ, ಕಾರ್ತಿಕರೆಡ್ಡಿ ಕಾಮರೆಡ್ಡಿ, ಆಕಾಶ ಅಂಗಡಿ
ಪ್ರಬಂಧ ಸ್ಪರ್ಧೆ(ಕನ್ನಡ ಮಾಧ್ಯಮ):
ದ್ವಿತೀಯ ಸ್ಥಾನ: ಸಹನಾ ಮೇಟಿ, ಸರ್ಕಾರಿ ಪ್ರೌಢಶಾಲೆ ಹುಲ್ಲೂರು
ಪ್ರಬಂಧ ಸ್ಪರ್ಧೆ(ಆಂಗ್ಲ ಮಾಧ್ಯಮ):
ದ್ವಿತೀಯ ಸ್ಥಾನ: ಸುಶ್ಮಿತಾ ಯಲುವಿಗಿ, ಆಕ್ಸ್ಫರ್ಡ್ ಸ್ಕೂಲ್ ಲಕ್ಷ್ಮೇಶ್ವರ
ತೃತೀಯ ಸ್ಥಾನ: ಈಶ್ವರಿ ಕಟಗಿ,ಫೀನಿಕ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಲಕ್ಷ್ಮೇಶ್ವರಚಿತ್ರಕಲಾ ಸ್ಪರ್ಧೆ
ಪ್ರಥಮ ಸ್ಥಾನ: ಖದೀಜಾ ಸೂರಣಗಿ, ಎಸ್ ಟಿಪಿಎಂಬಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಲಕ್ಷ್ಮೇಶ್ವರದ್ವಿತೀಯ ಸ್ಥಾನ: ಭಾಗ್ಯ ಮಾಡಳ್ಳಿ, ಸರ್ಕಾರಿ ಪ್ರೌಢಶಾಲೆ ಗೊಜನೂರು
ತೃತೀಯ ಸ್ಥಾನ: ಕವನಾ ಅಂಗಡಿ, ಫೀನಿಕ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಲಕ್ಷ್ಮೇಶ್ವರ