ವಿದ್ಯುತ್ ಮಿತ ಬಳಕೆಗಾಗಿ ಜಾಗೃತಿ ಮೂಡಿಸಿ

KannadaprabhaNewsNetwork |  
Published : Nov 04, 2023, 12:30 AM IST
ಫೋಟೊ: ೩ಎಚ್‌ಎನ್‌ಎಲ್೧ | Kannada Prabha

ಸಾರಾಂಶ

ಮಳೆ ಕೊರತೆಯಿಂದಾಗಿ ರಾಜ್ಯಾದ್ಯಂತ ವಿದ್ಯುತ್ ಕೊರತೆ ಉಂಟಾಗಿದ್ದು, ವಿದ್ಯುತ್ ಮಿತ ಬಳಕೆಗಾಗಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು. ಹಾನಗಲ್ಲದಲ್ಲಿ ತಾಪಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ತೀವ್ರ ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆ ಕುಸಿದಿದ್ದು, ಇಂಥ ಸಂದಿಗ್ಧ ಸಂದರ್ಭದಲ್ಲಿ ವಿದ್ಯುತ್ ಪೋಲಾಗುವುದನ್ನು ತಡೆಗಟ್ಟಬೇಕಿದೆ ಎಂದರು.

ಹಾನಗಲ್ಲ: ಮಳೆ ಕೊರತೆಯಿಂದಾಗಿ ರಾಜ್ಯಾದ್ಯಂತ ವಿದ್ಯುತ್ ಕೊರತೆ ಉಂಟಾಗಿದ್ದು, ತಾಲೂಕಿನಾದ್ಯಂತ ವಿದ್ಯುತ್ ಮಿತ ಬಳಕೆಗಾಗಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.

ಇಲ್ಲಿ ತಾಪಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ತೀವ್ರ ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆ ಕುಸಿದಿದ್ದು, ಇಂಥ ಸಂದಿಗ್ಧ ಸಂದರ್ಭದಲ್ಲಿ ವಿದ್ಯುತ್ ಪೋಲಾಗುವುದನ್ನು ತಡೆಗಟ್ಟಬೇಕಿದೆ. ಮುಂದಿನ ಐದಾರು ತಿಂಗಳು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಮುದಾಯದಲ್ಲಿ ವಿದ್ಯುತ್ತಿನ ಮಿತ ಬಳಕೆಯ ಬಗೆಗೆ ಜಾಗೃತಿ ಮೂಡಿಸುವಂತೆ ಸೂಚಿಸಿದರು. ಹಲವು ಗ್ರಾಮಗಳಲ್ಲಿ ಹಗಲು ಹೊತ್ತಿನಲ್ಲಿಯೂ ಬೀದಿದೀಪ ಉರಿಯುತ್ತಿದ್ದು, ವಿದ್ಯುತ್ ಪೋಲಾಗುವುದನ್ನು ತಡೆಗಟ್ಟಲು ಸೂಕ್ತ ಕ್ರಮ ಜರುಗಿಸುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ತಾಪಂ ಇಒ ದೇವರಾಜ ಅವರಿಗೆ ಸೂಚಿಸಿದರು.

೨೦೨೩-೨೪ನೇ ಸಾಲಿನ ರಾಜ್ಯ ಹಣಕಾಸು ಆಯೋಗದ ಅನಿರ್ಬಂಧಿತ ಅನುದಾನದ ಕ್ರಿಯಾಯೋಜನೆಯ ವಿವಿಧ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಶ್ರೀನಿವಾಸ ಮಾನೆ, ತಾಲೂಕಿನಲ್ಲಿ ಕೈಗೊಂಡಿರುವ ಶಾಲೆಗಳ ಕೊಠಡಿ, ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿಗಳ ಗುಣಮಟ್ಟದ ಮೇಲಾ ನಿಗಾ ವಹಿಸಲು ಸೂಚಿಸಿದರು.

ಅನಧಿಕೃತ ಕಟ್ಟಡಗಳ ನಿರ್ಮಾಣ ತಡೆಗಟ್ಟಬೇಕು. ಅನಧಿಕೃತ ಕಂಡು ಬಂದಲ್ಲಿ ಕ್ರಮ ಜರುಗಿಸಬೇಕು. ಕೆಲವು ಗ್ರಾಪಂಗಳಲ್ಲಿ ಅಭಿವೃದ್ಧಿ ಅಧಿಕಾರಿಗಳ ಗೈರು ಎದ್ದು ಕಾಣುತ್ತಿದ್ದು, ಬೆಳಗ್ಗೆ ೧೦ರಿಂದ ಮಧ್ಯಾಹ್ನ ೧೨ ಗಂಟೆ ವರೆಗೆ ಕಚೇರಿಯಲ್ಲಿದ್ದು, ಸಾರ್ವಜನಿಕರಿಗೆ ಸ್ಪಂದಿಸಬೇಕು. ಬರಗಾಲದ ದಿನಗಳನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಗತ್ಯ ಸಿದ್ಧತೆ ಕೈಗೊಂಡು ಯುದ್ಧೋಪಾದಿಯಲ್ಲಿ ಕೆಲಸ ಮಾಡುವಂತೆ ಸೂಚಿಸಿದರು.

ಸಹಾಯಕ ನಿರ್ದೇಶಕ ಚನ್ನಬಸಪ್ಪ ಹಾವಣಗಿ, ಯೋಜನಾಧಿಕಾರಿ ಚಂದ್ರಶೇಖರ ಸೂಡಂಬಿ ಉಪಸ್ಥಿತರಿದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ