ತಂತ್ರಜ್ಞಾನದ ಮೂಲಕ ಉದ್ಯೋಗ ಸೃಷ್ಟಿಸಿ

KannadaprabhaNewsNetwork |  
Published : Jun 26, 2024, 12:34 AM IST
ಹುಬ್ಬಳ್ಳಿಯ ವಿದ್ಯಾನಗರ ಬಿವಿಬಿ ಕಾಲೇಜಿನಲ್ಲಿ ಕೆಎಲ್‌ಇ ಸಂಸ್ಥೆಯ ಪ್ರೇರಣಾ ರೆಸಿಡೆನ್ಸಿಯಲ್ ಪಿ.ಯು. ವಿಜ್ಞಾನ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಓರಿಯೆಂಟೇಶನ್ ಸಮಾರಂಭಕ್ಕೆ ಗಣ್ಯರು ಚಾಲನೆ ನೀಡಿದರು. | Kannada Prabha

ಸಾರಾಂಶ

ಸದ್ಯ ವಿಜ್ಞಾನಕ್ಕಿಂತ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸುತ್ತಿದೆ. ಅದರಲ್ಲಿ ನ್ಯಾನೊ, ಬೈಯೋ ಹಾಗೂ ಎಐ ತಂತ್ರಜ್ಞಾನಗಳಿವೆ. ಮುಂದಿನ 15 ವರ್ಷಗಳಲ್ಲಿ ಜಗತ್ತು ಇದೇ ರೀತಿ ಇರುವುದಿಲ್ಲ. ನಾವು ಮಾಡುವ ಕೆಲಸ ಮಷಿನ್‌ಗಳು ಮಾಡಬಹುದು.

ಹುಬ್ಬಳ್ಳಿ:

ತಂತ್ರಜ್ಞಾನ ಕಂಡು ಹಿಡಿದು ಅಳವಡಿಸಿಕೊಂಡಿರುವುದು ಮನುಷ್ಯರೇ. ಮುಂದೆ ತಂತ್ರಜ್ಞಾನದ ಮೂಲಕ ಉದ್ಯೋಗ ಸೃಷ್ಟಿಸಿ ಜಗತ್ತನ್ನು ಬದಲಿಸುವ ಪ್ರಕ್ರಿಯೆಯಲ್ಲಿ ನೀವೆಲ್ಲರೂ ಭಾಗವಹಿಸಬೇಕು ಎಂದು ಧಾರವಾಡ ಐಐಟಿಯ ಡೀನ್ ಎಸ್.ಎಂ. ಶಿವಪ್ರಸಾದ ಹೇಳಿದರು.

ಅವರು ಇಲ್ಲಿಯ ವಿದ್ಯಾನಗರ ಬಿವಿಬಿ ಕಾಲೇಜಿನಲ್ಲಿ ಕೆಎಲ್‌ಇ ಸಂಸ್ಥೆಯ ಪ್ರೇರಣಾ ರೆಸಿಡೆನ್ಸಿಯಲ್ ಪಿ.ಯು. ವಿಜ್ಞಾನ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಓರಿಯೆಂಟೇಶನ್ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

ಸದ್ಯ ವಿಜ್ಞಾನಕ್ಕಿಂತ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸುತ್ತಿದೆ. ಅದರಲ್ಲಿ ನ್ಯಾನೊ, ಬೈಯೋ ಹಾಗೂ ಎಐ ತಂತ್ರಜ್ಞಾನಗಳಿವೆ. ಮುಂದಿನ 15 ವರ್ಷಗಳಲ್ಲಿ ಜಗತ್ತು ಇದೇ ರೀತಿ ಇರುವುದಿಲ್ಲ. ನಾವು ಮಾಡುವ ಕೆಲಸ ಮಷಿನ್‌ಗಳು ಮಾಡಬಹುದು. ವಿದ್ಯಾರ್ಥಿಗಳು ತಂತ್ರಜ್ಞಾನ ಯುಗವನ್ನು ಸೂಕ್ತವಾಗಿ ಎದುರಿಸಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆಎಲ್‌ಇ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಮಹಾಂತೇಶ ಕವಟಗಿಮಠ, ಜೀವನ ರೂಪಿಸಲು ಪಿಯು ಶಿಕ್ಷಣ ಅವಶ್ಯಕ. ಪೋಷಕರು ತಮ್ಮ ಮಕ್ಕಳನ್ನು ಇನ್ನೊಬ್ಬರೊಂದಿಗೆ ಹೊಲಿಸುವುದು, ತಾರತಮ್ಯ ಮಾಡುವುದು ಬಿಡಬೇಕು. ಪ್ರತಿಯೊಬ್ಬ ಮನುಷ್ಯ ವಿಭಿನ್ನವಾಗಿರುತ್ತಾನೆ. ಶಿಕ್ಷಣದ ಜತೆ ಸಂಸ್ಕಾರ ಕಲಿಯಬೇಕು. ಕ್ಷಮತೆ, ದೃಢ ಸಂಕಲ್ಪವಿದ್ದವರು ಸಾಧನೆ ಮಾಡಬಹುದು ಎಂದು ಹೇಳಿದರು.

ಕೆಎಲ್‌ಇ ಸಂಸ್ಥೆ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಪ್ರಾಂಶುಪಾಲ ಶ್ರೀನಿವಾಸ ನಿಕ್ಕಿ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು