ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಭೌತಶಾಸ್ತ್ರ ವಿಭಾಗದ ವತಿಯಿಂದ ಜರುಗಿದ ಒಂದು ದಿನದ ಕಾರ್ಯಾಗಾರ ಉದ್ಘಾಟನೆ
ಕನ್ನಡಪ್ರಭ ವಾರ್ತೆ ಕೊಪ್ಪಳ
ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಭೌತಶಾಸ್ತ್ರ ವಿಭಾಗದ ವತಿಯಿಂದ ಜರುಗಿದ ಒಂದು ದಿನದ ಕಾರ್ಯಾಗಾರ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಭೌತಶಾಸ್ತ್ರ ವಿಷಯದಲ್ಲಿ ಹೆಚ್ಚಿನ ಆಸಕ್ತಿ ಹೊಂದುವಂತೆ ಪ್ರಾಧ್ಯಾಪಕರು ಪ್ರೇರೇಪಿಸಬೇಕು. ವಿಜ್ಞಾನದ ಅಗತ್ಯತೆ ಮತ್ತು ಪ್ರಾಮುಖ್ಯತೆ ಇತ್ತೀಚೆಗೆ ಅರಿವಾಗುತ್ತಿದೆ. ಹೀಗಾಗಿ, ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಕುರಿತು ಕುತೂಹಲ ಮೂಡಿಸಬೇಕು. ಹಾಗೆಯೇ ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಮನೋಭಾವನೆಯನ್ನು ಪ್ರೇರೇಪಿಸಬೇಕು ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಚನ್ನಬಸವ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಚಾರ್ಯ ಡಾ. ಕರಿಬಸವೇಶ್ವರ ಬಿ., ಐಕ್ಯೂಎಸಿ ಸಂಯೋಜಕ ಡಾ. ಅರುಣಕುಮಾರ ಎ.ಜಿ. ಭಾಗವಹಿದ್ದರು. ಕಾರ್ಯಕ್ರಮದ ಆಯೋಜಕ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ ಎಂ., ಪ್ರಾಧ್ಯಾಪಕರಾದ ಡಾ. ಶಶಿಕಾಂತ ಉಮ್ಮಾಪುರೆ, ಡಾ. ಮಂಜುನಾಥ ಗಾಳಿ, ಡಾ. ಜಾಲಿಹಾಳ ಶರಣಪ್ಪ, ಡಾ. ಸುಂದರ ಮೇಟಿ, ಡಾ. ಅಜಿತ ನಾರಾಯಣ ಉಪಸ್ಥಿತರಿದ್ದರು.