ಕನ್ನಡಪ್ರಭ ವಾರ್ತೆ ರಾಮನಗರ
ನಗರದ ಜಾನಪದ ಲೋಕದಲ್ಲಿ ಬೆಂಗಳೂರಿನ ಕಾವೇರಿ ಬಿ.ಇಡಿ ಕಾಲೇಜು ವತಿಯಿಂದ ಪ್ರಶಿಕ್ಷಣಾರ್ಥಿಗಳಿಗೆ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದ ಸಮುದಾಯ ಜೀವನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿ, ವೃತ್ತಿ ಪ್ರಾಮಾಣಿಕವಾಗಿ ಮಾಡುವ ಶಿಕ್ಷಕ ಸಾಧಕರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುತ್ತಾನೆ. ಒಬ್ಬ ಉತ್ತಮ ಶಿಕ್ಷಕ ವಿದ್ಯಾರ್ಥಿಗಳ ದೇವರಾಗಬಹುದು. ಉತ್ತಮ ಪ್ರಜೆಗಳನ್ನು ರೂಪಿಸುವ ಶಿಕ್ಷಕರನ್ನು ಪ್ರತಿಯೊಬ್ಬರೂ ಗೌರವಿಸುತ್ತಾರೆ ಎಂದು ಹೇಳಿದರು.
ಸದಾ ಮಕ್ಕಳೊಂದಿಗೆ ಒಡನಾಟ ಮತ್ತು ಅವರ ಕಲಿಕೆಯಲ್ಲಿ ತಮ್ಮ ಜೀವಮಾನವನ್ನು ಕಳೆಯುವ ಶಿಕ್ಷಕರು ವಿದ್ಯಾರ್ಥಿಗಳಿಗೆ ಅಚ್ಚು ಮೆಚ್ಚು. ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡುವ ಮೂಲಕ ಅವರ ಬಾಳಿಗೆ ಬೆಳಕು ನೀಡುವಲ್ಲಿ ಶಿಕ್ಷಕರು ಶ್ರಮಿಸುತ್ತಾರೆ ಎಂದು ಹೇಳಿದರು.ಪ್ರಶಿಕ್ಷಣಾರ್ಥಿಗಳು ಮುಂದೆ ಶಿಕ್ಷಕರಾಗುವವರು. ನೀವು ಸ್ವಾಭಿಮಾನದಿಂದ ಬದುಕುವುದನ್ನು ಕಲಿಯುವ ಜೊತೆಗೆ ಅಧ್ಯಯನಶೀಲತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾವೇರಿ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ಎಂ. ದೇವರಾಜಪ್ಪ ಮಾತನಾಡಿ, ಮಕ್ಕಳನ್ನು ಕತ್ತಲೆಯಿಂದ ಬೆಳಕಿನೆಡೆಗೆ ನಡೆಸುವಂತಹ ಪ್ರವೃತ್ತಿಯನ್ನು ಶಿಕ್ಷಕರು ಬೆಳೆಸಿಕೊಳ್ಳಬೇಕು. ಗುಣಮಟ್ಟದ ಶಿಕ್ಷಣದಿಂದ ಮಾತ್ರ ಅಜ್ಞಾನ ಹೋಗಲಾಡಿಸಲು ಸಾಧ್ಯ. ದೇಶದ ಅಭಿವದ್ಧಿ ಶಿಕ್ಷಣದ ಮೇಲಿದೆ. ಆದ್ದರಿಂದ ಶಿಕ್ಷಕರು, ಮಕ್ಕಳಿಗೆ ತಂದೆ ತಾಯಿಗಳಾಗಿ ಅವರಲ್ಲಿನ ನೈಜ ಪ್ರತಿಭೆ ಹೊರಗೆಳೆಯಬೇಕು ಎಂದು ಕರೆ ನೀಡಿದರು.ಕಾವೇರಿ ಬಿ.ಇಡಿ ಕಾಲೇಜಿನ ಪ್ರಾಂಶುಪಾಲ ಡಾ.ಇ.ಬಿ. ರಾಜೇಶ್ ಮಾತನಾಡಿ, ಶಿಕ್ಷಕರಾಗುವವರು ಸರ್ವಧರ್ಮ ಸಹಿಷ್ಣುಗಳಾಗಿರಬೇಕು. ಬೋಧನೆಯಲ್ಲಿ ಉತ್ತಮ ಗುಣಮಟ್ಟ ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿರುವ ಕೀಳರಿಮೆ ಹೋಗಲಾಡಿಸಿ ಅವರಿಗೆ ಆತ್ಮವಿಶ್ವಾಸ ತುಂಬಬೇಕು ಎಂದು ತಿಳಿಸಿದರು.
ಶಿಬಿರದ ಮುಖ್ಯಸ್ಥ ಡಾ.ಚಂದ್ರಮೌಳೇಶ್, ಅಧ್ಯಾಪಕರಾದ ಶಿವಗುಂಡಪ್ಪ, ಬಿಂದುಕುಮಾರ್, ಶೃತಿ ಮತ್ತಿತರರು ಹಾಜರಿದ್ದರು.