ಕ್ರೀಡೋ ಲ್ಯಾಬ್ ನಿಂದ ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿ: ಸವಿತಾ ಅರಳಿಕಟ್ಟಿ

KannadaprabhaNewsNetwork |  
Published : Jun 17, 2025, 01:54 AM IST
ಪೊಟೋ ಜೂ.16ಎಂಡಿಎಲ್ 1ಎ, 1ಬಿ. ಮುಧೋಳ ರಾಯಲ್ ಸ್ಕೂಲ್ ನಲ್ಲಿ ಕ್ರೀಡೋ ಲ್ಯಾಬ್ ಉದ್ಘಟನಾ ಕಾರ್ಯಕ್ರಮದಲ್ಲಿ ಅತಿಥಿ ಗಣ್ಯರು ಭಾಗವಹಿಸಿ, ಕ್ರೀಡೋ ಲ್ಯಾಬ್ ಪರಿಚಯಿಸಲಾಯಿತು. | Kannada Prabha

ಸಾರಾಂಶ

ನರ್ಸರಿ, ಎಲ್.ಕೆ.ಜಿ ಹಾಗೂ ಯು.ಕೆ.ಜಿ ಮಕ್ಕಳ ಕಲಿಕೆ ಸುಗಮವಾಗಲೆಂದು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಾಗಲಕೋಟೆ ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಕ್ರೀಡೋ ಲ್ಯಾಬ್ ನ್ನು ಅರಳಿಕಟ್ಟಿ ಫೌಂಡೇಶನ್ ನ ಮುಧೋಳ ರಾಯಲ್ ಸ್ಕೂಲ್ ನಲ್ಲಿ ಅಳವಡಿಸಲಾಗಿದೆ. ಕ್ರೀಡೋ ಲ್ಯಾಬ್ ನಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಹಾಗೂ ಕಲಿಯುವ ಹುಮ್ಮಸ್ಸು ದ್ವಿಗುಣಗೊಳ್ಳುತ್ತದೆ ಎಂದು ಮುಧೋಳ ರಾಯಲ್ ಸ್ಕೂಲ್ ಅಧ್ಯಕ್ಷೆ, ಕನ್ನಡಪ್ರಭದ ಸುವರ್ಣ ಸಾಧಕಿ-2025ರ ಪ್ರಶಸ್ತಿ ಪುರಸ್ಕೃತರಾದ ಸವಿತಾ ತಿಮ್ಮಣ್ಣ ಅರಳಿಕಟ್ಟಿ ಅವರು ಹೇಳಿದರು.

ಕನ್ನಡಪ್ರಭ ವಾರ್ತೆ ಮುಧೋಳ

ನರ್ಸರಿ, ಎಲ್.ಕೆ.ಜಿ ಹಾಗೂ ಯು.ಕೆ.ಜಿ ಮಕ್ಕಳ ಕಲಿಕೆ ಸುಗಮವಾಗಲೆಂದು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಾಗಲಕೋಟೆ ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಕ್ರೀಡೋ ಲ್ಯಾಬ್ ನ್ನು ಅರಳಿಕಟ್ಟಿ ಫೌಂಡೇಶನ್ ನ ಮುಧೋಳ ರಾಯಲ್ ಸ್ಕೂಲ್ ನಲ್ಲಿ ಅಳವಡಿಸಲಾಗಿದೆ. ಕ್ರೀಡೋ ಲ್ಯಾಬ್ ನಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಹಾಗೂ ಕಲಿಯುವ ಹುಮ್ಮಸ್ಸು ದ್ವಿಗುಣಗೊಳ್ಳುತ್ತದೆ ಎಂದು ಮುಧೋಳ ರಾಯಲ್ ಸ್ಕೂಲ್ ಅಧ್ಯಕ್ಷೆ, ಕನ್ನಡಪ್ರಭದ ಸುವರ್ಣ ಸಾಧಕಿ-2025ರ ಪ್ರಶಸ್ತಿ ಪುರಸ್ಕೃತರಾದ ಸವಿತಾ ತಿಮ್ಮಣ್ಣ ಅರಳಿಕಟ್ಟಿ ಅವರು ಹೇಳಿದರು.ಮುಧೋಳ ರಾಯಲ್ ಸ್ಕೂಲ್ ನಲ್ಲಿ ಸೋಮವಾರ ಕ್ರೀಡೋ ಲ್ಯಾಬ್ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿ, ಸುಸಜ್ಜಿತವಾದ ಕ್ರೀಡೋ ಲ್ಯಾಬ್ ₹5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿದೆ. ಒಟ್ಟಾರೆಯಾಗಿ ಕಲಿಕೆಯ ವಿಷಯವನ್ನು ಮಕ್ಕಳಿಗೆ ಪರಿಣಾಮಕಾರಿಯಾಗಿ ಮುಟ್ಟಿಸಲು ಈ ಕಲಿಕಾ ಸಾಧನಗಳು ಸಹಾಯ ಮಾಡಲಿವೆ ಎಂದು ಅಭಿಪ್ರಾಯಪಟ್ಟರು.

ಕ್ರೀಡೋ ಲ್ಯಾಬ್ ಉದ್ಘಾಟಿಸಿ ಮಾತನಾಡಿದ ಪ್ರೊ.ಬಸವರಾಜ ಕೊಣ್ಣೂರ ಅವರು, ಡಾ.ತಿಮ್ಮಣ್ಣ ಅರಳಿಕಟ್ಟಿ ಅವರು ಓರ್ವ ಕನಸುಗಾರ. ಅವರು ಬೇರೆ ಬೇರೆ ಶಾಲೆಗಳಿಗೆ ಭೇಟಿ ನೀಡಿದಾಗ ಅಲ್ಲಿರುವ ಸೌಲಭ್ಯ ಮತ್ತು ಸೌಕರ್ಯಗಳನ್ನು ಕಂಡು ತಮ್ಮ ಸ್ಕೂಲ್ ನಲ್ಲಿ ಅಳವಡಿಸಿಕೊಂಡು ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ವಿಶೇಷ. ವಿನೂತನ ಮಾದರಿಯ ಕ್ರೀಡಾ ಲ್ಯಾಬ್, ಮಕ್ಕಳ ಮಾನಸಿಕ ಚಟುವಟಿಕೆಗಳ ಮೂಲಕ ಮಕ್ಕಳಿಗೆ ವಿನೂತನ ಜ್ಞಾನ ನೀಡಲಾಗುತ್ತದೆ ಎಂದು ಹೇಳಿದರು.

ಅರಳಿಕಟ್ಟಿ ಫೌಂಡೇಶನ್ ಅಧ್ಯಕ್ಷ ಡಾ.ತಿಮ್ಮಣ್ಣ ಅರಳಿಕಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನರ್ಸರಿ, ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ದೈಹಿಕ ಚಟುವಟಿಕೆಗಳ ಜೊತೆಗೆ ಮಾನಸಿಕ ಚಟುವಟಿಕೆಗಳ ಮೂಲಕ ಶಿಕ್ಷಣ ಕಲಿಯಲು ಕ್ರೀಡೋ ಲ್ಯಾಬ್ ಹೆಚ್ಚು ಸಹಕಾರಿಯಾಗಲಿದೆ. ಕೋವಿಡ್ ಸಂದರ್ಭದಲ್ಲಿ ಆರಂಭವಾದ ಈ ಸ್ಕೂಲ್ ಇಂದು 1250ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಹೊಂದಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದೇವೆ. ಇದಕ್ಕೆಲ್ಲ ಪಾಲಕರ ಸಹಕಾರ ಬಹುಮುಖ್ಯವಾಗಿದೆ ಎಂದರು.

ರಾಯಲ್ ಸ್ಕೂಲ್ ಕಾರ್ಯದರ್ಶಿ ವಿನಾಯಕ ತಿಮ್ಮಣ್ಣ ಅರಳಿಕಟ್ಟಿ, ಪಿಎಸ್ಐ ಅಜೀತಕುಮಾರ ಹೊಸಮನಿ, ಆಡಳಿತಾಧಿಕಾರಿ ಇಂದಿರಾ ಸಾತನೂರ, ಪ್ರಾಂಶುಪಾಲ ಚಂದ್ರಶೇಖರ ಆರ್. ನಾಗವಾಂದ ವೇದಿಕೆ ಮೇಲೆ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ