- ಶಾಮನೂರು ಡೈಮಂಡ್ ಕಪ್, ಶಿವಗಂಗಾ ಕಪ್, ದಾಖಲೆಯ ನಗದು ಬಹುಮಾನ: ದಿನೇಶ ಶೆಟ್ಟಿ ಮಾಹಿತಿ - ರಾಜ್ಯದ ಜಿಲ್ಲೆಗಳು, ಗುಜರಾತ್, ತಮಿಳುನಾಡು, ಮಹಾರಾಷ್ಟ್ರ, ಜೊತೆಗೆ ನೇಪಾಳ, ಶ್ರೀಲಂಕಾ ತಂಡಗಳೂ ಭಾಗಿ ವಿಶೇಷ
- ಪ್ರತಿವರ್ಷ ಸುಮಾರು ₹40-₹45 ಲಕ್ಷ ವೆಚ್ಚದಲ್ಲಿ ಪಂದ್ಯಾವಳಿ ಆಯೋಜನೆ ವಿಶೇಷ
- ವೈಯಕ್ತಿಕ ಉತ್ತಮ ಆಲ್ರೌಂಡರ್ಗೆ ಹೀರೋ ಹೊಂಡಾ ಬೈಕ್ ಬಹುಮಾನವಾಗಿ ನೀಡಲಾಗುವುದು- - -
ದಿವಂಗತ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸವಿನೆನಪಿಗಾಗಿ ದಾವಣಗೆರೆ ಇಲೆವೆನ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಂಘದಿಂದ 18ನೇ ಬಾರಿಗೆ ಶ್ರೀಲಂಕಾ, ನೇಪಾಳ ತಂಡಗಳನ್ನು ಒಳಗೊಂಡ ರಾಷ್ಟ್ರಮಟ್ಟದ ಹೊನಲು ಬೆಳಕಿನ ಲೀಗ್ ಕಂ ನೌಕೌಟ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನ.26ರಿಂದ 30 ರವರೆಗೆ 5 ದಿನಗಳ ಕಾಲ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ದೇಶದಲ್ಲೇ ಅತಿ ಹೆಚ್ಚು ನಗದು ಬಹುಮಾನದ ಈ ಟೆನ್ನಿಸ್ ಪಂದ್ಯಾವಳಿಯಲ್ಲಿ ಕರ್ನಾಟಕದ ಬೆಂಗಳೂರು, ಮೈಸೂರು, ಮಂಗಳೂರು, ಉಡುಪಿ, ತುಮಕೂರು, ಶಿವಮೊಗ್ಗ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳು, ಗುಜರಾತ್, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳ ಜೊತೆಗೆ ನೆರೆಯ ದೇಶಗಳಾದ ನೇಪಾಳ, ಶ್ರೀಲಂಕಾ ತಂಡಗಳೂ ಭಾಗವಹಿಸುತ್ತಿರುವುದು ಪಂದ್ಯಾವಳಿ ವಿಶೇಷ ಎಂದು ತಿಳಿಸಿದರು.
ವಿಶೇಷವಾಗಿ ಪಂದ್ಯಾವಳಿ ವೀಕ್ಷಿಸಲು ಕ್ರೀಡಾಭಿಮಾನಿಗಳಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಗ್ಯಾಲರಿಗಳ ವ್ಯವಸ್ಥೆ ಮಾಡಲಾಗುವುದು. ಟೂರ್ನಿಗೆ 3ನೇ ಅಂಪೈರ್ ವ್ಯವಸ್ಥೆ ಮಾಡಲಾಗುತ್ತಿದ್ದು, ಯು ಟ್ಯೂಬ್ ನಲ್ಲಿ ಇಡೀ ಪಂದ್ಯಾವಳಿಯ ನೇರ ಪ್ರಸಾರವಿರುತ್ತದೆ. ಈಗಾಗಲೇ ಪರ ಜಿಲ್ಲೆ, ಪರ ರಾಜ್ಯ, ಶ್ರೀಲಂಕಾ, ನೇಪಾಳ ತಂಡಗಳು ಹೆಸರು ನೋಂದಾಯಿಸಿದ್ದು, ಪಂದ್ಯಾವಳಿಗಾಗಿ ಭರದ ಸಿದ್ಧತೆ ನಡೆದಿದೆ ಎಂದು ದಿನೇಶ್ ಶೆಟ್ಟಿ ಮಾಹಿತಿ ನೀಡಿದರು.
ಪಂದ್ಯಾವಳಿ ಆಯೋಜಕ, ಸಂಘದ ಸಹ ಕಾರ್ಯದರ್ಶಿ ಜಯಪ್ರಕಾಶ ಗೌಡ ಮಾತನಾಡಿ, ಪ್ರತಿ ವರ್ಷದಂತೆ ಈ ಸಲವೂ ಪೊಲೀಸ್, ಪತ್ರಕರ್ತರು, ವರ್ತಕರು, ಜಿಲ್ಲಾಧಿಕಾರಿಗಳ ತಂಡ, ಪಾಲಿಕೆ ಸದಸ್ಯರ ತಂಡ, ವಕೀಲರ ತಂಡಗಳು ಸೇರಿದಂತೆ 8 ತಂಡಗಳಿಗಾಗಿ ವಿಶೇಷವಾಗಿ ಅಫಿಷಿಯಲ್ ಕಪ್ ಪಂದ್ಯಾವಳಿ ಇರುತ್ತದೆ. ಈ ಸಲ ವಿಶೇಷವಾಗಿ ದಾವಣಗೆರೆ ಜಿಲ್ಲಾ ವರದಿಗಾರರ ತಂಡದ ಮನವಿ ಮೇರೆಗೆ, ಪತ್ರಕರ್ತರ ಎರಡು ತಂಡಗಳಿಗೆ ಅವಕಾಶ ನೀಡುತ್ತಿದ್ದೇವೆ ಎಂದರು.
ಸಂಘದ ಉಪಾಧ್ಯಕ್ಷ, ಯುವ ಕೈಗಾರಿಕೋದ್ಯಮಿ ಶ್ರೀನಿವಾಸ ವಿ.ಶಿವಗಂಗಾ, ಹಿರಿಯ ಕ್ರೀಡಾಪಟುಗಳಾದ ರಂಗಸ್ವಾಮಿ, ಸುರೇಶ, ಚಂದ್ರು, ಹಾಲಪ್ಪ, ಬಸವನಗೌಡ, ಶಾಂತಕುಮಾರ, ರಾಘವೇಂದ್ರ ಇತರರು ಇದ್ದರು.
-11ಕೆಡಿವಿಜಿ3.ಜೆಪಿಜಿ:
ದಾವಣಗೆರೆಯಲ್ಲಿ ಮಂಗಳವಾರ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಯುವ ಉದ್ಯಮಿ ಶ್ರೀನಿವಾಸ ವಿ.ಶಿವಗಂಗಾ, ಜಯಪ್ರಕಾಶಗೌಡ, ರಂಗಸ್ವಾಮಿ ಇತರರು ಇದ್ದರು. -11ಕೆಡಿವಿಜಿ4: ದಿ। ಪಾರ್ವತಮ್ಮ ಶಿವಶಂಕರಪ್ಪ.