ಕ್ರಿಕೆಟ್ ಕೇವಲ ಆಟವಲ್ಲ ಪರಸ್ಪರ ಬಾಂಧವ್ಯ ಬೆಸೆಯುವ ಕ್ರೀಡೆ: ಯಡಗೆರೆ ಸುಬ್ರಮಣ್ಯ ಅಭಿಮತ

KannadaprabhaNewsNetwork |  
Published : Apr 20, 2026, 02:00 AM IST
 ನರಸಿಂಹರಾಜಪುರ ತಾಲೂಕಿನ ಕುದುರೆಗುಂಡಿ ಸರ್ಕಾರಿ ಪ್ರೌಢ ಶಾಲೆಯ ಕ್ರೀಡಾಂಗಣದಲ್ಲಿ ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ  ಬ್ರಾಹ್ಮಣ ಸಭಾದ ಎನ್‌.ಆರ್.ಪುರ ಘಟಕ , ಯುವ ಹೆಬ್ಬಾರ ಬಳಗದ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ  ಹೆಬ್ಬಾರ ಕ್ರಿಕೆಟ್ ಲೀಗ್ ಶ್ರೀ ಪಾದ ಕಪ್ ಪಂದ್ಯಾವಳಿಯನ್ನು ಕೊಪ್ಪ  ಯಡಗೆರೆ ಸೌಹಾರ್ದ ಕ್ರಿಕೆಟ್ ಕೋ ಆಪರೇಟಿವ್  ಅಧ್ಯಕ್ಷ ಯಡಗೆರೆ ಸುಬ್ರಮಣ್ಯ ಉದ್ಘಾಟಿಸಿದರು. | Kannada Prabha

ಸಾರಾಂಶ

ನರಸಿಂಹರಾಜಪುರಕ್ರಿಕೆಟ್ ಇಂದು ಕೇವಲ ಆಟವಾಗಿ ಉಳಿಯದೆ ಯುವಕರಲ್ಲಿ ಪರಸ್ಪರ ಬಾಂಧವ್ಯ ಬೆಸೆಯುವ ಕ್ರೀಡೆಯಾಗಿದೆ ಎಂದು ಕೊಪ್ಪ ಯಡಗೆರೆ ಸೌಹಾರ್ದ ಕ್ರೆಡಿಟ್ ಕೋ ಆಪರೇಟೀವ್ ನ ಅಧ್ಯಕ್ಷ ಯಡಗೆರೆ ಸುಬ್ರಮಣ್ಯ ಅಭಿಮತ ವ್ಯಕ್ತಪಡಿಸಿದರು.

ಕುದುರೆಗುಂಡಿಯಲ್ಲಿ 2 ದಿನಗಳ ರಾಜ್ಯ ಮಟ್ಟದ ಹೆಬ್ಬಾರ್ ಕ್ರಿಕೆಟ್ ಲೀಗ್ ಶ್ರೀಪಾದ ಕಪ್ ಪಂದ್ಯಾವಳಿ ಉದ್ಘಾಟನೆ

ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ಕ್ರಿಕೆಟ್ ಇಂದು ಕೇವಲ ಆಟವಾಗಿ ಉಳಿಯದೆ ಯುವಕರಲ್ಲಿ ಪರಸ್ಪರ ಬಾಂಧವ್ಯ ಬೆಸೆಯುವ ಕ್ರೀಡೆಯಾಗಿದೆ ಎಂದು ಕೊಪ್ಪ ಯಡಗೆರೆ ಸೌಹಾರ್ದ ಕ್ರೆಡಿಟ್ ಕೋ ಆಪರೇಟೀವ್ ನ ಅಧ್ಯಕ್ಷ ಯಡಗೆರೆ ಸುಬ್ರಮಣ್ಯ ಅಭಿಮತ ವ್ಯಕ್ತಪಡಿಸಿದರು.

ಶನಿವಾರ ಕುದುರೆಗುಂಡಿ ಸರ್ಕಾರಿ ಪ್ರೌಢ ಶಾಲೆ ಆಟದ ಮೈದಾನದಲ್ಲಿ ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಸಭಾದ ಎನ್‌.ಆರ್.ಪುರ ಘಟಕ ಹಾಗೂ ಯುವ ಹೆಬ್ಬಾರ ಬಳಗದ ಸಂಯುಕ್ತ ಆಶ್ರಯದಲ್ಲಿ ನಡೆದ 5 ನೇ ವರ್ಷದ ಎರಡು ದಿನಗಳ ಹೆಬ್ಬಾರ್ ಕ್ರಿಕೆಟ್ ಲೀಗ್ ಶ್ರೀಪಾದ ಕಪ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಹೆಬ್ಬಾರ ಬ್ರಾಹ್ಮಣ ಮಹಾ ಸಭಾದ ಎನ್‌.ಆರ್.ಪುರ ಘಟಕದವರು 5 ವರ್ಷದಿಂದಲೂ ನಿರಂತರವಾಗಿ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ನಡೆಸಿಕೊಂಡು ಬರುತ್ತಿದ್ದಾರೆ.ಮುಂದಿನ ವರ್ಷಗಳಲ್ಲೂ ಯುವಕರು ಇದೇ ರೀತಿ ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದು ಕರೆ ನೀಡಿದರು.

ಮಲೆನಾಡು ಹೆಬ್ಬಾರ ಬ್ರಾಹ್ಮಣ ಮಹಾ ಸಭಾದ ಕೇಂದ್ರೀಯ ಆಡಳಿತ ಮಂಡಳಿ ಉಪಾಧ್ಯಕ್ಷ ವೈ.ಎಸ್.ರಾಮಚಂದ್ರ ಮಾತನಾಡಿ, ಶೃಂಗೇರಿ ಶಿಷ್ಯ ಹೆಬ್ಬಾರ ಬ್ರಾಹ್ಮಣ ಮಹಾ ಸಭಾ ಪ್ರತಿ ವರ್ಷ ಝೇಂಕಾರ ಎಂಬ ಸಾಂಸ್ಕೃತಿಕ ಸ್ಪರ್ಧೆ ನಡೆಸುತ್ತಿದೆ. ಇದರಲ್ಲಿ ಹೆಚ್ಚಾಗಿ ಮಹಿಳೆಯರು, ಮಕ್ಕಳು ಭಾಗವಹಿಸುತ್ತಿದ್ದಾರೆ. ಕ್ರೀಡಾ ಕೂಟದಲ್ಲಿ ಯುವಕರು ಹೆಚ್ಚಾಗಿ ತೊಡಗಿಸಿಕೊಂಡಿದ್ದಾರೆ. 2 ದಿನಗಳಲ್ಲಿ 13 ತಂಡಗಳ 150 ಯುವಕರು ಕ್ರೀಡೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.

ಮುಖ್ಯ ಅತಿಥಿಯಾಗಿದ್ದ ಶಿವಮೊಗ್ಗ ಶಾರದಾ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ವೃತ್ತಿ ಪರ ನಿರ್ದೇಶಕ ಕೆ.ಆರ್.ಶಿವಕುಮಾರ್ ಮಾತನಾಡಿ, ಯುವಕರು ಕ್ರೀಡಾ ಕೂಟದ ಜೊತೆಗೆ ಹೆಬ್ಬಾರ ಸಮಾಜದ ಮುಖ್ಯ ಕಾರ್ಯಕ್ರಮ ವಾದ ಗುರುದರ್ಶನ, ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲೂ ಭಾಗವಹಿಸಬೇಕು. ಶೃಂಗೇರಿ ಶಿಷ್ಯ ಹೆಬ್ಬಾರ ಮಲೆನಾಡು ಹೆಬ್ಬಾರ ಬ್ರಾಹ್ಮಣ ಸಭಾದ ಶಾರದಾ ಸೊಸೈಟಿ ಕೇಂದ್ರ ಕಚೇರಿ ಶಿವಮೊಗದಲ್ಲಿದೆ. ಹೊಸನಗರ, ರಿಪ್ಪನ್ ಪೇಟೆ, ಶೃಂಗೇರಿ, ಕಳಸದಲ್ಲಿ ಶಾಖಾ ಕಚೇರಿಗಳಿದ್ದು ನಮ್ಮ ಸಂಘದಲ್ಲೂ ಕನಿಷ್ಠ ವ್ಯವಹಾರ ಮಾಡಬೇಕು ಎಂದು ಕರೆ ನೀಡಿದರು.

ಹೆಬ್ಬಾರ್ ಕ್ರಿಕೆಟ್ ಲೀಗ್ ಶ್ರೀಪಾದ ಪಂದ್ಯಾವಳಿಯಲ್ಲಿ 13 ತಂಡಗಳು ಭಾಗವಹಿಸಿದ್ದವು.ಭಾನುವಾರವೂ ಕ್ರಿಕೆಟ್ ಪಂದ್ಯಾವಳಿ ಮುಂದುವರಿಯಲಿದ್ದು ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.

ಸಭೆಯ ಅಧ್ಯಕ್ಷತೆ ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಸಭಾದ ಎನ್‌.ಆರ್.ಪುರ ಘಟಕದ ಅಧ್ಯಕ್ಷ ಎ.ವಿ.ಪ್ರಶಾಂತ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಹೆಬ್ಬಾರ ಬ್ರಾಹ್ಮಣ ಮಹಾ ಸಭಾದ ಕೇಂದ್ರೀಯ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಚರಣ ಹೆಬ್ಬಾರ, ಎನ್‌.ಆರ್.ಪುರ ಘಟಕದ ಗೌರವಾಧ್ಯಕ್ಷ ಎ.ಎಸ್.ವೆಂಕಟರಮಣ, ಕಾರ್ಯದರ್ಶಿ ಕೆ.ವಿ.ಪ್ರಭಾಕರ, ಎನ್‌.ಆರ್‌.ಪುರ ಯುವ ಬಳಗದ ಅಧ್ಯಕ್ಷ ವೈ.ಎಂ.ಮಧು, ಯುವ ಬಳಗದ ಕಾರ್ಯದರ್ಶಿ ಕೆ.ಎಂ.ವಿಕಾಸ್, ಎ.ಎಸ್.ವೆಂಕಟರಮಣ, ಚರಣ ಹೆಬ್ಬಾರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳಾ ಮೀಸಲಾತಿಗೆ ಕಾಂಗ್ರೆಸ್‌ ವಿರೋಧ: ಜೆಡಿಎಸ್‌ ಪ್ರತಿಭಟನೆ
ವಿಶ್ವಕರ್ಮ ಸಮಾಜ ಸಂಘಟಿತರಾಗಲಿ: ಕೆ.ಪಿ. ನಂಜುಂಡಿ