ಕನ್ನಡಪ್ರಭ ವಾರ್ತೆ ವಿಜಯಪುರ
ಏಳು ದಿನಗಳ ಕಾಲ ನಡೆದ ಈ ಕ್ರೀಡಾಕೂಟದಲ್ಲಿ ಒಟ್ಟು 14 ನಾನಾ ಕಾಲೇಜುಗಳ ತಂಡಗಳು ಭಾಗವಹಿಸಿದ್ದವು. ಫೈನಲ್ ಪಂದ್ಯದಲ್ಲಿ ಆಯುರ್ವೇದ ಕಾಲೇಜು ತಂಡ ಎಸ್.ಬಿ. ಆರ್ಟ್ಸ್ ಮತ್ತು ಮತ್ತು ಕೆ.ಸಿ.ಪಿ ಸೈಲೇನ್ಸ್ ಕಾಜು ತಂಡವನ್ನು 36 ರನ್ ಗಳಿಂದ ಸೋಲಿಸಿತು. ಅಲ್ಲದೇ, ಟ್ರೋಫಿಯ ಜೊತೆಗೆ ರೂ. 51,000 ನಗದು ಬಹುಮಾನ ಪಡೆದುಕೊಂಡಿತು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಮತ್ತು ಕೋಚ್ ಈರಪ್ಪ ಇಕ್ಕಳಕಿ ಮಾರ್ಗದರ್ಶನದಲ್ಲಿ ತಂಡವು ಸಾಧಿಸಿರುವುದಕ್ಕೆ ಕಾಲೇಜಿನ ಪ್ರಾಚಾರ್ಯ ಡಾ.ಅಶೋಕ ಪಾಟೀಲ, ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂಜಯ ಕಡ್ಲಿಮಟ್ಟಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಂತಸ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.