ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆ, ಪ್ರವಾಹದಂತ ಪ್ರಕೃತಿ ವಿಕೋಪಗಳಿಂದ ಹಾನಿಯಾಗಿರುವ ಕೃಷಿ, ತೋಟಗಾರಿಕೆ ಬೆಳೆ ಹಾನಿ ವರದಿಯನ್ನು ನಿಖರವಾಗಿ ಪಡೆಯಲು ಜಂಟಿ ಸರ್ವೇ ಕಾರ್ಯವನ್ನು ಶೀಘ್ರ ಮುಗಿಸಬೇಕು. ಹಾನಿಯಾಗಿರುವ ಪ್ರತೀ ರೈತರ ಜಮೀನಿನಲ್ಲಿ ಕರಾರುವಕ್ಕಾಗಿ ಬೆಳೆಹಾನಿಯನ್ನು ಲೆಕ್ಕಾಚಾರ ಮಾಡಿ ವರದಿ ನೀಡಬೇಕು. ಈ ಸಂಬಂಧ ರೈತ ಸಂಪರ್ಕ ಕೇಂದ್ರಗಳು, ಮತ್ತಿತ್ತರ ಕಡೆ ಪ್ರಚುರಪಡಿಸಿ ಸಂಬಂಧಪಟ್ಟವರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಬೇಕು. ಅಂತಿಮವಾಗಿ ಅರ್ಹರೆಲ್ಲರಿಗೂ ಪರಿಹಾರ ಸಿಗುವಂತೆ ಕ್ರಮವಹಿಸಬೇಕು ಎಂದು ತಿಳಿಸಿದರು.ಜಿಲ್ಲೆಯಲ್ಲಿ ಶಿಥಿಲಗೊಂಡಿರುವ ಮನೆಗಳ ಸಮೀಕ್ಷೆ ಕಾರ್ಯವು ತ್ವರಿತವಾಗಿ ಕೈಗೊಳ್ಳಬೇಕು. ಯಾವುದೇ ಹಾನಿ ಸಂಭವಿಸದಂತೆ ಮೊದಲೇ ಶಿಥಿಲಾವಸ್ಥೆಯಲ್ಲಿ ಇರುವ ಮನೆಗಳ ವರದಿಯನ್ನು ಸಲ್ಲಿಸಬೇಕು. ಈ ಕಾರ್ಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಅರ್ಹರಿಗೆ ಮನೆಗಳನ್ನು ನೀಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ಹೀಗಾಗಿ ಆದ್ಯತೆ ಮೇರೆಗೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕೆಂದು ಸೂಚನೆ ನೀಡಿದರು.
ಪ್ರಸ್ತುತ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ಎಲ್ಲಾ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕೃಷಿ ಇಲಾಖೆ ತೆಗೆದುಕೊಳ್ಳಬೇಕು. ಬಿತ್ತನೆ ಬೀಜ, ರಸಗೊಬ್ಬರಗಳು ಅಗತ್ಯಕ್ಕನುಗುಣವಾಗಿ ಪೂರೈಸಬೇಕು. ಎಲ್ಲಿಯೂ ಕೊರತೆಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್, ಜಂಟಿ ಕೃಷಿ ನಿರ್ದೇಶಕರಾದ ಆಬೀದ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಂ.ವಿ.ಸುಧಾ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಎಲ್ಲ ತಾಲೂಕುಗಳ ತಹಶೀಲ್ದಾರರು, ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.