ಕನ್ನಡಪ್ರಭ ವಾರ್ತೆ ಶ್ರೀಮಂಗಲ
ಅವರು ಪೊನ್ನಂಪೇಟೆ ತಾಲೂಕಿನ ಹುದಿಕೇರಿ, ಕೋಣಗೇರಿ, ಬಿರುನಾಣಿ ಗ್ರಾ. ಪಂ. ವ್ಯಾಪ್ತಿಯ ಪೊರಾಡು ಗ್ರಾಮಗಳ ತೋಟಗಳಿಗೆ ಭೇಟಿ ನೀಡಿದರು. ಈ ಸಂದರ್ಭ ಸ್ಥಳೀಯ ಬೆಳೆಗಾರರು ಪ್ರಸಕ್ತ ವರ್ಷ ಬಿರುಗಾಳಿ ಸಹಿತ ಅತಿವೃಷ್ಟಿಗೆ ಕಾಫಿ ಬೆಳೆ, ಕೊಳೆ ರೋಗ ಹಾಗೂ ತೊಟ್ಟು ಕೊಳೆಯುವ ರೋಗದಿಂದ ಪೀಡಿತವಾಗಿ ಶೇ. 70 ಫಸಲು ನಷ್ಟವಾಗಿದೆ. ಇನ್ನೂ ಸಹ ಮಳೆ ಮುಂದುವರಿದಿದ್ದು ನಷ್ಟ ಪ್ರಮಾಣ ಹೆಚ್ಚಾಗಲಿದೆ. ಕಾಫಿ ಮಂಡಳಿ ಕೊಳೆರೋಗ ನಿಯಂತ್ರಣಕ್ಕೆ ಔಷಧಿ ಸಿಂಪಡನೆಗೆ ಸಲಹೆ ನೀಡಿದ್ದರೂ , ಔಷಧಿ ದುಬಾರಿಯಾಗಿದ್ದು ಮಳೆ ಬಿಡುವು ನೀಡದೆ ಈ ಕಾರ್ಯ ನಡೆಸಲು ಸಾಧ್ಯವಾಗುವುದಿಲ್ಲ ಎಂದು ವಿವರಿಸಿದರು.
ಕಾರ್ಮಿಕರ ಕೊರತೆ, ರಸಗೊಬ್ಬರ ದರ ಏರಿಕೆ, ಫಸಲು ಕುಂಠಿತದಿಂದ ತೋಟ ನಿರ್ವಹಣೆ ದೊಡ್ಡ ಸವಾಲಾಗಿದೆ, ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ಹೆಚ್ಚಿನ ಮಟ್ಟದ ಪರಿಹಾರ ನೀಡಲು ಸರ್ಕಾರಕ್ಕೆ ವರದಿ ಸಲ್ಲಿಸಲು ಬೆಳೆಗಾರರು ಮನವಿ ಮಾಡಿದರು.ಕಳೆದ 15ಕ್ಕೂ ಹೆಚ್ಚು ವರ್ಷಗಳಿಂದ ಕಾಫಿಗೆ ಎನ್.ಡಿ.ಆರ್.ಎಫ್. ಪರಿಹಾರ ಮೊತ್ತ ಪರಿಷ್ಕರಣೆ ಮಾಡಿಲ್ಲ. ಆದ್ದರಿಂದ ಪ್ರತಿ ಎಕರೆಗೆ 1 ಲಕ್ಷ ಪರಿಹಾರ ನೀಡಬೇಕೆಂದು ಬೆಳೆಗಾರರು ಮನವಿ ಮಾಡಿದರು.
ರಸಗೊಬ್ಬರ, ಕೊಳೆ ರೋಗದ ಔಷಧಿಗಳನ್ನು ಸಬ್ಸಿಡಿಯಡಿ ಕಾಫಿ ಬೆಳೆಗಾರರಿಗೆ ನೀಡಬೇಕು, ಕಾಫಿ ಬೆಳೆನಷ್ಟಕ್ಕೆ ವಿಮೆ ಸೌಲಭ್ಯ ವ್ಯಾಪ್ತಿಗೆ ತರಬೇಕೆಂದು ಮನವಿ ಮಾಡಿದರು.
ಸ್ಥಳೀಯ ಬೆಳೆಗಾರರೊಂದಿಗೆ ಭಾರತೀಯ ಕಾಫಿ ಮಂಡಳಿಯ ಗೋಣಿಕೊಪ್ಪ ವಿಭಾಗದ ಹಿರಿಯ ಸಂಪರ್ಕ ಅಧಿಕಾರಿ ಶ್ರೀರಮಣ ಹಾಗೂ ಶ್ರೀಮಂಗಲ ಕಿರಿಯ ಸಂಪರ್ಕ ಅಧಿಕಾರಿ ಸುನಿಲ್ ಕುಮಾರ್ ಹಾಜರಿದ್ದರು.