ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಭುಜವಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದವರು ದೋಸ್ತಿ ಶಾಸಕರನ್ನು ಖರೀದಿ ಮಾಡಿದ್ದಾರೆ ಎಂದು ಹೇಳಲು ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದರು.
ನಮ್ಮದು ಮಹಾ ರಾಷ್ಟ್ರೀಯ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ ಶಾಸಕರನ್ನು ಯಾರು ಖರೀದಿಯಾಗುತ್ತಾರೆ. ನಾವು ಯಾವುದೇ ಶಾಸಕರನ್ನು ಹೋಗಿ ವೈಯಕ್ತಿಕವಾಗಿ ಭೇಟಿ ಮಾಡಿ ಮತಯಾಚಿಸಿಲ್ಲ. ಹಣ ಅಥವಾ ಅಧಿಕಾರದ ಆಮಿಷ ನೀಡಿಲ್ಲ. ಗೌಪ್ಯ ಮತದಾನದ ಮುಖಾಂತರ ಚುನಾವಣೆ ನಡೆದಿದೆ. ಬಿಜೆಪಿ- ಜೆಡಿಎಸ್ ಎರಡು ಪಕ್ಷಗಳ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದರು.ಬಿಜೆಪಿ ನಾಯಕರ ಬಗ್ಗೆ ಶಾಸಕರಿಗೆ ಸಾಕಷ್ಟ ಅಸಮಾಧಾನವಿದೆ. ಪಕ್ಷದ ಶಾಸಕರ ಬಗ್ಗೆ ಕೆಟ್ಟ ಪದ ಬಳಸುವುದು ಬಿಜೆಪಿ- ಜೆಡಿಎಸ್ ನಾಯಕರ ಹುಟ್ಟುಗುಣ. ಅಡ್ಡ ಮತದಾನ ಮಾಡಿದ ಶಾಸಕರನ್ನು ಮೀರ್ ಸಾದಿಕ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕೆ ಕುರಿತು ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎಂಬ ಮಾತು ಅನ್ವಯಿಸುತ್ತದೆ ಎಂದರು.
ಮದ್ದೂರು ಕ್ಷೇತ್ರದಲ್ಲಿ ನಾನು ಶಾಸಕನರಾದ ನಂತರ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ರೈತರಿಗೆ ಅನುಕೂಲವಾಗಲು ಹೊಲ ಗದ್ದೆಗಳಿಗೆ ತೆರಳುವ ರಸ್ತೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು. ಸಾಕಷ್ಟು ಅನುದಾನ ತಂದು ಕೆಲಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಹೊಲ ಗದ್ದೆಗಳಿಗೆ ತೆರಳುವ ರೈತರ ಅನೂಕುಲಕ್ಕಾಗಿ ರಸ್ತೆಗಳ ಅಭಿವೃದ್ಧಿ ಕ್ರಮ ವಹಿಸುವಂತೆ ಎಂಜಿನಿಯರ್ಗಳಿಗೆ ಸೂಚಿಸಿದ್ದೇನೆ ಎಂದರು.
ಭುಜವಳ್ಳಿ ಅಲ್ಲದೇ, ಹರಳಹಳ್ಳಿ, ಕಡಿಲುವಾಗಿಲು, ಲಕ್ಷ್ಮೇಗೌಡನದೊಡ್ಡಿ, ಸಬ್ಬನಹಳ್ಳಿ, ಕಾಡುಕೋತ್ತನಹಳ್ಳಿ ಹಾಗೂ ಕಪರೆಕೊಪ್ಪಲು ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆಯಿಂದ ಸುಮಾರು 2 ಕೋಟಿಗೂ ಅಧಿಕ ವೆಚ್ಚದಲ್ಲಿ ಗ್ರಾಮ ಪರಿಮಿತಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು.