ಮಾದಪ್ಪನ ಸನ್ನಿಧಿಗೆ ಹರಿದು ಬಂದ ಭಕ್ತರ ದಂಡು

KannadaprabhaNewsNetwork |  
Published : Oct 03, 2024, 01:29 AM IST
   ಕನ್ನಡಪ್ರಭ ವಾರ್ತೆ  ಹನೂರು ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದಿಂದ ಜರುಗಿತು.ಹನೂರು ತಾಲೂಕಿನಮಲೆ ಮಹದೇಶ್ವರ ಬೆಟ್ಟದ ವತಿಯಿಂದ ಕಳೆದ ಮೂರು ದಿನಗಳಿಂದ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ಸಾಲೂರು ಬ್ರಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತ್ರತ್ವದಲ್ಲಿ ಸರದಿ ಬೇಡಗಂಪಣ ಅರ್ಚಕ ತಂಡದವರಿಂದ ಮಾದಪ್ಪನಿಗೆ ವಿಶೇಷ ಅಭಿಷೇಕ ದೂಪದ ಅಭಿಷೇಕ ಮಹಾಮಂಗಳಾರತಿ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಜರುಗಿತು.ಹರಕೆ ಹೊತ್ತ ಭಕ್ತರಿಂದ ವಿಶೇಷ ಉತ್ಸವಗಳು ಜರುಗಿತು : ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಹರಕೆ ಒತ್ತ ಭಕ್ತರಿಂದ ಚಿನ್ನದ ರಥೋತ್ಸವ ಬೆಳ್ಳಿ ರಥೋತ್ಸವ ಹಾಗೂ ಮಲೆ ಮಹದೇಶ್ವರ ಉತ್ಸವ ಮೂರ್ತಿ ಮೆರವಣಿಗೆ ಹುಲಿ ವಾಹನ ಉತ್ಸವ ರುದ್ರಾಕ್ಷಿ ಮಂಟಪೋತ್ಸವ ಉರುಳು ಸೇವೆ ಪಂಜಿನ ಸೇವೆ ಮುಡಿಸೇವೆ ಹಾಗೂ ಹಲವು  ಉತ್ಸವಗಳು ಧಾರ್ಮಿಕವಾಗಿ ಸಂಭ್ರಮ ಸಡಗರದಿಂದ ನಡೆಯಿತು..ವಿಶೇಷ ದರ್ಶನ ಭಾಗ್ಯ :ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 60 ವರ್ಷ ಮೇಲ್ಪಟ್ಟ ವಿಶೇಷ ಮತ್ತು 500 ಹಾಗೂ 250 ಟಿಕೆಟ್ ಕೌಂಟರ್ ಗಳನ್ನು ಸಹ  ವ್ಯವಸ್ಥಿತವಾಗಿ ಕಲ್ಪಿಸಲಾಗಿತ್ತು ಉಚಿತ ಸರತಿ ಸಾಲಿನಲ್ಲಿ ನಿಂತು ಭಕ್ತರು ಮಾದಪ್ಪನ ದರುಶನ ಪಡೆದರು ....ವಿಶೇಷ ದಾಸೋಹ : ರಾಜ್ಯದ ನಾನಾ ಭಾಗಗಳಿಂದ ಬರುವ ಮಾದಪ್ಪನ ಪಂಚಾಯಿತಿ ವಿಶೇಷ ದಾಸೋಹ ಬೆಳಿಗ್ಗೆ 8:00 ಯಿಂದ ಪ್ರಾರಂಭವಾದ 11 ರವರೆಗೆ ತಿಂಡಿ ಹಾಗೂ ನಂತರ ಊಟದ ವ್ಯವಸ್ಥೆ ಸಹ ವಿಶೇಷ ದಾಸೋಹವನ್ನು ಸಹ ಕಲ್ಪಿಸಲಾಗಿತ್ತು ಕಳೆದ ಮೂರು ದಿನಗಳಿಂದ ಲಾಡು ಪ್ರಸಾದ ಒಂದು ಲಕ್ಷ ಮೂವತ್ತು ಸಾವಿರ ಮಾರಾಟವಾಗಿದೆ ಜೊತೆಗೆ ಇನ್ನೂ ಒಂದು ಲಕ್ಷ ದಾಸ್ತಾನು ಮಾಡಲಾಗಿದೆ ಬರುವಂತ ಭಕ್ತಾದಿಗಳಿಗೆ ವಿಶೇಷವಾಗಿ ಕುಡಿಯುವ ನೀರಿನ ವ್ಯವಸ್ಥೆ ಶೌಚಾಲಯ ವ್ಯವಸ್ಥೆ ಸಕಲ ರೀತಿಯಲ್ಲಿಯೂ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವ್ಯವಸ್ಥೆಯಲ್ಲಿ ಕಲ್ಪಿಸಲಾಗಿದೆ.ಮಾದಪ್ಪನ ಸನ್ನಿಧಿಯಲ್ಲಿ ಭಾರಿ ಜನಸ್ತೋಮ : ಮಹಾಲಯ ಅಮಾವಾಸ್ಯೆ ಪ್ರಯುಕ್ತ ಕಳೆದ ಮೂರು ದಿನಗಳಿಂದ ಅಮಾವಾಸ್ಯೆ ಪೂಜೆಗೆ ಲಕ್ಷಾಂತರ ಭಕ್ತರು ರಾಜ್ಯದ ಬೆಂಗಳೂರು ಮೈಸೂರು ಮಂಡ್ಯ ಹಾಗೂ ಚಾಮರಾಜನಗರ ತಾಲೂಕು ಕೇಂದ್ರದ ಹೋಬಳಿಗಳಿಂದಲೂ ಹಾಗೂ ತಮಿಳುನಾಡಿನಿಂದಲೂ ಅಪಾರ ಸಂಖ್ಯೆಯ ಭಕ್ತಾದಿಗಳು ಭೇಟಿ ನೀಡಿ  ಮಾದಪ್ಪನ ದರ್ಶನ ಪಡೆದು ಪುನೀತರಾದರು. ಬಿಗಿ ಬಂದೋಬಸ್ತ್ : ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಲಯ ಅಮಾವಾಸ್ಯೆ ಪೂಜಾ ಕಾರ್ಯಕ್ರಮಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ಹಿತಕರ ಘಟನೆಗಳು ಜರುಗದಂತೆ ಕ್ರಮ ವಹಿಸುವ ನೆಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲಾ ಪೊಲೀಸ್ ವರಿಷ್ಠ ಇದ್ದಾರೆ ಭೇಟಿ ಕವಿತಾ ಅವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ಉಪ ವಿಭಾಗ ಡಿ ವೈ ಎಸ್ ಪಿ ಧರ್ಮೇಂದರ್  ಮಲೆಯ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆಯಲ್ಲಿ  ಅವರ ಅಧ್ಯಕ್ಷತೆಯಲ್ಲಿ ಇನ್ಸ್ಪೆಕ್ಟರ್ ಜಗದೀಶ್ ಮಹಾ ಬೆಟ್ಟ ವ್ಯಾಪ್ತಿಯ ದೇವಾಲಯದ ಸಮೀಪ ಹಾಗೂ ಸಾಲೂರು ಮಠಕ್ಕೆ ತೆರಳುವ ರಸ್ತೆ ಬಸ್ ನಿಲ್ದಾಣ ಹಾಗೂ ಹಿಡಿದ ಹಾಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ...ಮಹಾಲಯ ಅಮಾವಾಸ್ಯೆಗೆ ಬರುವ ಮಾದಪ್ಪನ ಭಕ್ತರಿಗೆ ಯಾವುದೇ ಲೋಪದೋಷಗಳು ಬರದಂತೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹಿರಿಯ ನಾಗರಿಕರಿಗೆ ಹಾಗೂ ಕುಡಿಯವ ನೀರಿನ ವ್ಯವಸ್ಥೆ ಮತ್ತು ವಿಶೇಷ ದಾಸೋಹ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ ಹೀಗಾಗಿ ಭಕ್ತಾದಿಗಳಿಗೆ ಸಕಲ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಕ್ರಮ ವಹಿಸಲಾಗಿದೆ ...ರಘು  ಎ ಇ ಕಾರ್ಯದರ್ಶಿಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಲೆ ಮಾದೇಶ್ವರ ಬೆಟ್ಟ   ...Hnr,1news,1  ಹನೂರು ಮಲೆ ಮಾದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ನೆರೆದಿರುವ  ಭಕ್ತ ಸಮೂಹ ...Hnr,2news,1  ಹನೂರು ಮಲೆ ಮಾದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಹರಕೆ ಹೊತ್ತ ಭಕ್ತರಿಂದ ವಿವಿಧ ಉತ್ಸವಗಳಲ್ಲಿ ಭಾಗಿಯಾಗಿರುವ ಮಾದಪ್ಪನ ಭಕ್ತರು...Hnr,3news,1  ಹನೂರು ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಹರಕೆ ಹೊತ್ತು ಭಕ್ತಾದಿಗಳಿಗೆ ಉರುಳು ಸೇವೆ...Hnr,4news,1  ಹನೂರು ಮಲೆ ಮಾದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಮಾದಪ್ಪನ  ದರುಶನ ವ್ಯವಸ್ಥೆಯನ್ನು ಪರಿಶೀಲಿಸಿ ಪೂಜೆ ಸಲ್ಲಿಸಿದ ಕಾರ್ಯದರ್ಶಿ  ಎಇ ರಘು. | Kannada Prabha

ಸಾರಾಂಶ

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದಿಂದ ಜರುಗಿತು.

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದಿಂದ ಜರುಗಿತು.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವತಿಯಿಂದ ಕಳೆದ ಮೂರು ದಿನಗಳಿಂದ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಸರದಿ ಬೇಡಗಂಪಣ ಅರ್ಚಕ ತಂಡದವರಿಂದ ಮಾದಪ್ಪನಿಗೆ ವಿಶೇಷ ಅಭಿಷೇಕ ದೂಪದ ಅಭಿಷೇಕ ಮಹಾ ಮಂಗಳಾರತಿ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಜರುಗಿದವು.

ಹರಕೆ ಹೊತ್ತ ಭಕ್ತರಿಂದ ವಿಶೇಷ ಉತ್ಸವಗಳು ಜರುಗಿದವು. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಹರಕೆ ಹೊತ್ತ ಭಕ್ತರಿಂದ ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ ಹಾಗೂ ಮಲೆ ಮಹದೇಶ್ವರ ಉತ್ಸವ ಮೂರ್ತಿ ಮೆರವಣಿಗೆ, ಹುಲಿ ವಾಹನ ಉತ್ಸವ, ರುದ್ರಾಕ್ಷಿ ಮಂಟಪೋತ್ಸವ, ಉರುಳು ಸೇವೆ, ಪಂಜಿನ ಸೇವೆ, ಮುಡಿಸೇವೆ ಹಾಗೂ ಹಲವು ಉತ್ಸವಗಳು ಧಾರ್ಮಿಕವಾಗಿ ಸಂಭ್ರಮ ಸಡಗರದಿಂದ ನಡೆಯಿತು..

ವಿಶೇಷ ದರ್ಶನ ಭಾಗ್ಯ: ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 60 ವರ್ಷ ಮೇಲ್ಪಟ್ಟ ವಿಶೇಷ ಮತ್ತು 500 ಹಾಗೂ 250 ರು. ಟಿಕೆಟ್ ಕೌಂಟರ್‌ಗಳನ್ನು ಸಹ ವ್ಯವಸ್ಥಿತವಾಗಿ ಕಲ್ಪಿಸಲಾಗಿತ್ತು. ಉಚಿತ ಸರತಿ ಸಾಲಿನಲ್ಲಿ ನಿಂತು ಭಕ್ತರು ಮಾದಪ್ಪನ ದರ್ಶನ ಪಡೆದರು.

ವಿಶೇಷ ದಾಸೋಹ: ರಾಜ್ಯದ ನಾನಾ ಭಾಗಗಳಿಂದ ಬರುವ ಮಾದಪ್ಪನ ಪಂಚಾಯಿತಿ ವಿಶೇಷ ದಾಸೋಹ ಬೆಳಿಗ್ಗೆ 8 ರಿಂದ 11 ರವರೆಗೆ ತಿಂಡಿ ಹಾಗೂ ನಂತರ ಊಟದ ವ್ಯವಸ್ಥೆ, ವಿಶೇಷ ದಾಸೋಹವನ್ನು ಸಹ ಕಲ್ಪಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಲಾಡು ಪ್ರಸಾದ, ಒಂದು ಲಕ್ಷ ಮೂವತ್ತು ಸಾವಿರ ಮಾರಾಟವಾಗಿದೆ. ಜತೆಗೆ ಇನ್ನೂ ಒಂದು ಲಕ್ಷ ದಾಸ್ತಾನು ಮಾಡಲಾಗಿದೆ. ಬರುವ ಭಕ್ತಾದಿಗಳಿಗೆ ವಿಶೇಷವಾಗಿ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ.

ಮಾದಪ್ಪನ ಸನ್ನಿಧಿಯಲ್ಲಿ ಭಾರಿ ಜನಸ್ತೋಮ: ಮಹಾಲಯ ಅಮಾವಾಸ್ಯೆ ಪ್ರಯುಕ್ತ ಕಳೆದ ಮೂರು ದಿನಗಳಿಂದ ಅಮಾವಾಸ್ಯೆ ಪೂಜೆಗೆ ಲಕ್ಷಾಂತರ ಭಕ್ತರು ರಾಜ್ಯದ ಬೆಂಗಳೂರು ಮೈಸೂರು ಮಂಡ್ಯ ಹಾಗೂ ಚಾಮರಾಜನಗರ ತಾಲೂಕು ಕೇಂದ್ರದ ಹೋಬಳಿಗಳಿಂದಲೂ ಹಾಗೂ ತಮಿಳುನಾಡಿನಿಂದಲೂ ಅಪಾರ ಸಂಖ್ಯೆಯ ಭಕ್ತಾದಿಗಳು ಭೇಟಿ ನೀಡಿ ಮಾದಪ್ಪನ ದರ್ಶನ ಪಡೆದರು.

ಬಿಗಿ ಬಂದೋಬಸ್ತ್: ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಲಯ ಅಮಾವಾಸ್ಯೆ ಪೂಜಾ ಕಾರ್ಯಕ್ರಮಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕ್ರಮ ವಹಿಸುವ ನೆಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲಾ ಪೊಲೀಸ್ ವರಿಷ್ಠ ಇದ್ದಾರೆ ಭೇಟಿ ಕವಿತಾ ಅವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ಉಪ ವಿಭಾಗ ಡಿ ವೈ ಎಸ್ ಪಿ ಧರ್ಮೇಂದರ್ ಮಲೆಯ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆಯಲ್ಲಿ ಅವರ ಅಧ್ಯಕ್ಷತೆಯಲ್ಲಿ ಇನ್ಸ್ಪೆಕ್ಟರ್ ಜಗದೀಶ್ ಮಹಾ ಬೆಟ್ಟ ವ್ಯಾಪ್ತಿಯ ದೇವಾಲಯದ ಸಮೀಪ ಹಾಗೂ ಸಾಲೂರು ಮಠಕ್ಕೆ ತೆರಳುವ ರಸ್ತೆ ಬಸ್ ನಿಲ್ದಾಣ ಹಾಗೂ ಹಿಡಿದ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಮಹಾಲಯ ಅಮಾವಾಸ್ಯೆಗೆ ಬರುವ ಮಾದಪ್ಪನ ಭಕ್ತರಿಗೆ ಯಾವುದೇ ಲೋಪದೋಷಗಳು ಬರದಂತೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹಿರಿಯ ನಾಗರಿಕರಿಗೆ ಪ್ರತ್ಯೇಕ ವ್ಯವಸ್ಧೆ, ಭಕ್ತಾಧಿಗಳಿಗೆ ಕುಡಿಯವ ನೀರಿನ ವ್ಯವಸ್ಥೆ ಮತ್ತು ವಿಶೇಷ ದಾಸೋಹ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.

ರಘು, ಕಾರ್ಯದರ್ಶಿ, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಮಲೆ ಮಹದೇಶ್ವರ ಬೆಟ್ಟ.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌