ವರ್ಷದ ಮೊದಲ ದಿನ ದೇಗುಲಗಳಿಗೆ ಜನಸಾಗರ

KannadaprabhaNewsNetwork |  
Published : Jan 02, 2026, 03:00 AM IST
 ದೇಗುಲಗಳಿಗೆ ಹೆಚ್ಚಿನ ಸಂಖ್ಯೆಯ ಭಕ್ತರು | Kannada Prabha

ಸಾರಾಂಶ

ಹೊಸ ವರ್ಷದ ಹಿನ್ನೆಲೆಯಲ್ಲಿ ನಗರದ ಹಲವು ದೇವಸ್ಥಾನಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಹೊಸ ವರ್ಷದ ಹಿನ್ನೆಲೆಯಲ್ಲಿ ನಗರದ ಹಲವು ದೇವಸ್ಥಾನಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ನಗರದ ಬನಶಂಕರಿ ದೇವಸ್ಥಾನ, ಇಸ್ಕಾನ್ ಕೃಷ್ಣನ ದೇಗುಲ, ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನ, ಮಲ್ಲೇಶ್ವರದ ಕಾಡು ಮಲ್ಲೇಶ್ವರ ದೇವಸ್ಥಾನ, ಸಾಯಿಬಾಬಾ ದೇವಸ್ಥಾನ ಸೇರಿದಂತೆಅನೇಕ ದೇಗುಲಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಹೊಸ ವರ್ಷದ ಅಂಗವಾಗಿ ದೇವರಿಗೆ ವಿಶೇಷ ಅಲಂಕಾರ, ಅಭಿಷೇಕ, ಪೂಜೆ ಕೈಂಕಾರ್ಯಗಳು ಜರುಗಿದವು. ಭಕ್ತರಿಗೆ ಪ್ರಸಾದ ವಿನಿಯೋಗದ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಬನಶಂಕರಿ ದೇವಸ್ಥಾನದಲ್ಲಿ ದೇವಿಗೆ ಮುತ್ತು ರತ್ನಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ಜ.3ರಂದು ಬನದ ಹುಣ್ಣಿಮೆಯಂದು ಬನಶಂಕರಿ ದೇವಾಲಯದ 110ನೇ ವರ್ಷದ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮ ರಥೋತ್ಸವ ಜರುಗಲಿದೆ. ಹೀಗಾಗಿ, ಭಕ್ತರ ಸಂಖ್ಯೆ ಹೆಚ್ಚಿತ್ತು.

ವರ್ಷದ ಮೊದಲ ದಿನ ದೇವರ ಆಶೀರ್ವಾದ ಪಡೆಯಲು ನಗರದ ಬಹುತೇಕ ದೇವಾಲಯಗಳಿಗೆ ಸಾವಿರಾರು ಭಕ್ತರು ಮುಂಜಾನೆಯೇ ತೆರಳಿದ್ದರು. ಹೀಗಾಗಿ, ದರ್ಶನಕ್ಕೆ ಉದ್ದನೆ ಸಾಲು ಕಂಡು ಬಂತು.

ಬಸವನಗುಡಿಯ ದೊಡ್ಡ ಗಣಪತಿ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಅಲಂಕಾರಗಳನ್ನು ಏರ್ಪಡಿಸಲಾಗಿತ್ತು. ವಸಂತಪುರದ ಐತಿಹಾಸಿಕ ವಸಂತ ವಲ್ಲಭರಾಯ ದೇವಸ್ಥಾನ ಹಾಗೂ ರಾಜಾಜಿನಗರದ ಇಸ್ಕಾನ್ ದೇವಾಲಯಗಳಲ್ಲಿಯೂ ಜನಸಂದಣಿ ಹೆಚ್ಚಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಸ ವರ್ಷ: ದೇವಾಲಯಗಳಿಗೆ ಭಕ್ತರ ದಾಂಗುಡಿ
ಜಿ ರಾಮ್‌ ಜಿ, ಅನುದಾನ ಕಡಿತ ವಿರುದ್ಧ ಇಂದು ರಾಜ್ಯ ಸಂಪುಟದಲ್ಲಿ ನಿರ್ಣಯ?