ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಕೊಪ್ಪದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿ, ಕಳೆದ ಬಾರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ 3000 ಕೋಟಿಯಷ್ಟು ಅನುದಾನವನ್ನು ರಾಜ್ಯಕ್ಕೆ ತಂದಿತು. ರಾಜ್ಯದಿಂದ ಆರಿಸಿ ಕಳಿಸಿದ ಸಂಸದರು ಕೇಂದ್ರದ ಕ್ಯಾಬಿನೆಟ್ ಚರ್ಚೆಯಲ್ಲಿ ಅನುದಾನ ಕೇಳದೆ ಸಂಬಂಧವಿಲ್ಲವಂತೆ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯದ ಸಂಸದರು ಸರ್ಕಾರದ ವಿರುದ್ಧ ಮಾತ್ರ ಮಾತನಾಡಲು ಮುಂದೆ ಬರುತ್ತಾರೆ. ಪ್ರಧಾನಿ ಬಳಿ ಅನುದಾನ ಕೇಳುವ ಧೈರ್ಯ ಯಾರಿಗೂ ಇಲ್ಲ. ಇವರಿಗೆ ಮರ್ಯಾದೆ ಇಲ್ಲ. ಕೇಂದ್ರ ಮಾಡಬೇಕಾದ ಅಭಿವೃದ್ಧಿ ಕಾರ್ಯಗಳನ್ನು ರಾಜ್ಯ ಸರ್ಕಾರ ಜನರ ಹಿತಕ್ಕಾಗಿ ಮಾಡುತ್ತಿದೆ. ನಮ್ಮ ಜಿಲ್ಲೆಯ ಅಧಿಕಾರಿಗಳು ಜನರ ಅಭಿವೃದ್ಧಿಗಾಗಿ ಸಾಕಷ್ಟು ಪ್ರಾಮಾಣಿಕ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.ನಾವು ಎಷ್ಟೇ ಪ್ರಾಮಾಣಿಕವಾಗಿ ಜನರ ಸಮಸ್ಯೆ ಆಲಿಸಿ ಪರಿಹರಿಸುವ ಕೆಲಸ ಮಾಡಿದರೂ ಕೆಲವರಿಗೆ ತೃಪ್ತಿಯೇ ಇಲ್ಲ. ಕಳೆದ ಬಾರಿ ಸರ್ಕಾರ ಕಳೆದ ಐದು ವರ್ಷದಲ್ಲಿ ಮಾಡಿದ ಅಭಿವೃದ್ಧಿ ಕೆಲಸ ಮತ್ತು ನಮ್ಮ ಸರ್ಕಾರ ಬಂದ ಎರಡೂವರೆ ವರ್ಷದಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕೆಲಸಗಳನ್ನು ಅವಲೋಕಿಸಿ ನೋಡಿ ಯಾರೂ ಎಷ್ಟು ಕೆಲಸ ಮಾಡಿದ್ದಾರೆ ಎಂಬುದರ ಬಗ್ಗೆ ನಿಮಗೆ ಸ್ಪಷ್ಟತೆ ದೊರೆಯುತ್ತದೆ ಎಂದರು.
ನಾನು ನಾಲ್ಕು ಬಾರಿ ಎಂಎಲ್ಎ ಹಾಗೂ ಒಂದು ಬಾರಿ ಎಂಪಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ನಾಗಮಂಗಲ ಕ್ಷೇತ್ರದಿಂದ 2018ರಲ್ಲಿ ಸ್ಪರ್ಧಿಸಿದ್ದ ನನ್ನನ್ನು ಜನರು ಸರಿಸುಮಾರು 50 ಸಾವಿರ ಮತಗಳ ಅಂತರದಿಂದ ಸೋಲಿಸಿದರು. ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದರೂ ಕೈ ಹಿಡಿಯಲಿಲ್ಲ ಎಂದು ಭಾವುಕರಾದರು.
ಮದ್ದೂರು:
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಸೇರಿದಂತೆ ರಾಜಕೀಯವಾಗಿ ಮಠಾಧೀಶರು ಏನೇ ಹೇಳಿಕೆ ನೀಡಿದರೂ ಅದು ಅವರ ಧರ್ಮ ಪೀಠಗಳಲ್ಲಿನ ಹೇಳಿಕೆ. ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದರು.
ಅಧಿಕಾರ ಶಾಶ್ವತವಲ್ಲ ಎಂದು ಹೇಳಿರುವುದು ರಾಜಕೀಯ ವೈರಾಗ್ಯವಲ್ಲ. ಜನರಿಗೆ ಎಷ್ಟೇ ಸಹಾಯ ಮಾಡಿದರೂ ನೆನೆಯಲ್ಲ. ಈ ಬಗ್ಗೆ ಅಸಮಾಧಾನವಿಲ್ಲ ಎಂದ ಸಚಿವರು, ರಾಜ್ಯದ ಅಭಿವೃದ್ಧಿಯನ್ನು ಕೇಂದ್ರವೇ ಮಾಡುತ್ತಿದೆ. ರಾಜ್ಯ ಸರ್ಕಾರ ಯಾವುದೇ ಕೆಲಸ ಮಾಡುತ್ತಿಲ್ಲ. ಅವರೇ ರಾಜ್ಯಕ್ಕೆ ಅನುದಾನ ಕೊಡಿಸಲಿ ಎಂದು ಬಿಜೆಪಿ- ಜೆಡಿಎಸ್ ನವರ ಹೇಳಿಕೆ, ಪ್ರತಿಭಟನೆಗೆ ತಿರುಗೇಟು ನೀಡಿದರು.