
ಕನ್ನಡಪ್ರಭ ವಾರ್ತೆ ಮಡಿಕೇರಿ
ಆದಿಮಸಂಜಾತ ಏಕ-ಜನಾಂಗೀಯ ಪ್ರಕೃತಿ ಆರಾಧಕ ಆನಿಮಿಸ್ಟಿಕ್ ಕೊಡವರಿಗಾಗಿ ಸಂವಿಧಾನದಡಿ ‘ಭೂ-ರಾಜಕೀಯ ಸ್ವಾಯತ್ತತೆ’ ಮತ್ತು ‘ವಿಶೇಷ ಸ್ಥಾನಮಾನ’ಕ್ಕಾಗಿ ಶನಿವಾರ ಬೆಳಗ್ಗೆ 10 ಗಂಟೆಗೆ ಹಮ್ಮಿಕೊಂಡಿರುವ ‘ಕೊಡವ ಕ್ವೆಸ್ಟ್’ ವಿಚಾರ ಸಂಕಿರಣದಲ್ಲಿ ಶಾಸನ ರೂಪಿಸುವವರು, ನ್ಯಾಯವಾದಿಗಳು ಹಾಗೂ ಶಿಕ್ಷಣ ತಜ್ಞರು ಹಕ್ಕೊತ್ತಾಯದ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತದ ಈಶಾನ್ಯ ರಾಜ್ಯಗಳಿಗೆ 244 ಮತ್ತು 371ನೇ ವಿಧಿಗಳಡಿ ನೀಡಲಾಗಿರುವ ಮಾದರಿಯಲ್ಲೇ, ಅಲ್ಪಸಂಖ್ಯಾತ ಸೂಕ್ಷ್ಮ ಕೊಡವ ಜನಾಂಗದ ಭೂಮಿ, ಎಸ್ಟಿ ಜನಾಂಗೀಯ ವರ್ಗೀಕರಣ, ಕೊಡವರ ಧಾರ್ಮಿಕ ಸಂಸ್ಕಾರವಾದ ಸಾಂಪ್ರದಾಯಿಕ ಬಂದೂಕು ಹಕ್ಕು, ಭಾಷೆ, ಸಾಂಸ್ಕೃತಿಕ ಪರಂಪರೆ, ಸಾಂಪ್ರದಾಯಿಕ ಕಾನೂನು ಹಾಗೂ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ಕಳೆದ 36 ವರ್ಷಗಳಿಂದ ಕೊಡವ ಜನಾಂಗದ ಅಪ್ರತಿಮ ಧ್ವನಿಯಾಗಿ ಸಿಎನ್ಸಿ ಶಾಂತಿಯುತ ಮತ್ತು ನಿರಂತರವಾಗಿ ಸಂವಿಧಾನಬದ್ಧವಾಗಿ ಹೋರಾಟವನ್ನು ನಡೆಸುತ್ತಾ ಬಂದಿದೆ.ಇದೀಗ ಕೊಡವರ ಹಕ್ಕುಗಳು, ಸ್ವಯಂ ಆಡಳಿತ ಮತ್ತು ಸ್ವಾಯತ್ತತೆಯನ್ನು ಎತ್ತಿ ತೋರಿಸುವ ಉದ್ದೇಶದಿಂದ ಸಿಎನ್ಸಿ ಆಯೋಜಿಸಿರುವ ಈ ವಿಚಾರ ಸಂಕಿರಣವು ಒಂದು ಮಹತ್ವದ ಹೆಜ್ಜೆಯಾಗಿದೆ. ರಾಷ್ಟ್ರೀಯ ಜನಗಣತಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂನ್ನು ಕೋರುವ ಮೂಲಕ, ಸಾಂವಿಧಾನಿಕ ಹಕ್ಕುಗಳಿಗೆ ಬಲವಾದ ಅಡಿಪಾಯವನ್ನು ಸ್ಥಾಪಿಸುವ ಗುರಿ ಸಿಎನ್ಸಿ ಹೊಂದಿದೆ.