-ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳಸ ಸೂಚನೆ
ಗಣಿ ಕಂಪನಿಗಳು ಸಿಎಸ್ ಆರ್ (ಸಾಮಾಜಿಕ ಹೊಣೆಗಾರಿಕೆ) ನಿಧಿಯನ್ನು ಬಾಂಬೆ, ಡೆಲ್ಲಿಯಲ್ಲಿ ವಿನಿಯೋಗಿಸುವಂತಿಲ್ಲ. ಬದಲಾಗಿ ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಬಳಕೆ ಮಾಡಬೇಕೆಂದು ಸಂಸದ ಗೋವಿಂದ ಎಂ.ಕಾರಜೋಳ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಡು ಮಾತನಾಡಿದ ಅವರು ಸಿಎಸ್ ಆರ್ ಫಂಡ್ ಸ್ಥಳೀಯ ಜನರು ಹಾಗೂ ಪ್ರದೇಶ ಅಭಿವೃದ್ಧಿ ಬಳಸಬೇಕು. ಕುಡಿವ ನೀರು, ಶಾಲೆ-ಕಾಲೇಜು, ರಸ್ತೆ, ಕೆರೆ ಕಟ್ಟೆಗಳ ನಿರ್ಮಾಣಕ್ಕೆ ಗಣಿ ಕಂಪನಿಗಳು ಕೊಡುಗೆ ನೀಡಬೇಕು. ಜಿಲ್ಲೆಯ ಗಣಿ ಸಂಪತ್ತು ಬಳಸಿ ವ್ಯಾಪಾರ ವಹಿವಾಟು ನಡೆಸುತ್ತಿರುವ ಖಾಸಗಿ ಗಣಿ ಕಂಪನಿಗಳು ಸಾಮಾಜಿಕ ಹೊಣೆಗಾರಿಕೆಯನ್ನು ಪ್ರದರ್ಶಿಸಬೇಕು. ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡಬೇಕೆಂದರು.ಜಿಲ್ಲೆಯಲ್ಲಿ ಪ್ರಮುಖವಾಗಿ 8 ಖಾಸಗಿ ಗಣಿ ಕಂಪನಿಗಳಿಗೆ ಗುತ್ತಿಗೆ ನೀಡಲಾಗಿದೆ. ಇದರಲ್ಲಿ 5 ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಗಣಿ ಮತ್ತು ಅದಿರು ನಿಯಂತ್ರಣ ಅಭಿವೃದ್ಧಿ ನಿಯಮಗಳ ಕಾಯ್ದೆ ಅನುಸಾರ ಗಣಿ ಕಂಪನಿಗಳಿಗೆ ಗುತ್ತಿಗೆ ನೀಡುವ ಸಂದರ್ಭದಲ್ಲಿಯೇ ಸ್ಥಳೀಯ ಪ್ರದೇಶ ಹಾಗೂ ಜನರ ಅಭಿವೃದ್ಧಿ ಕಾರ್ಯನಿರ್ವಹಿಸುವ ನಿಬಂಧನೆ ವಿಧಿಸಲಾಗಿರುತ್ತದೆ. ಸ್ಥಳೀಯ ಭೂಮಿ, ವಿದ್ಯುತ್, ರಸ್ತೆ, ಸಂಪತ್ತು, ಮೂಲಭೂತ ಸೌಕರ್ಯಗಳನ್ನು ಬಳಸಿ ಗಣಿಗಾರಿಕೆ ನಡೆಸುವ ಕಂಪನಿಗಳು ಸ್ಥಳೀಯ ಜನರಿಗೆ ಉದ್ಯೋಗ ನೀಡದೇ ಹೋದರೆ ಹೇಗೆ? ಎಂದು ಪ್ರಶ್ನಿಸಿದರು. ಗಣಿ ಕಂಪನಿಗಳು ಕೇವಲ ರಾಜ್ಯದ ಬೊಕ್ಕಸಕ್ಕೆ ತೆರಿಗೆ ನೀಡಿದರೆ ಸಾಲದು. ಸ್ಥಳೀಯ ಜನರ ಅಭಿವೃದ್ಧಿಗೂ ಕೊಡುಗೆ ನೀಡಬೇಕು ಎಂದರು.
ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಬಳಿ ಜಿಲ್ಲೆಯ ಕುರಿತು ಚರ್ಚಿಸಿದ್ದೇನೆ. ಅವರ ಸಮ್ಮುಖದಲ್ಲಿಯೇ ಎಲ್ಲಾ ಗಣಿ ಕಂಪನಿಗಳ ಮುಖ್ಯಸ್ಥರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಪರಿಶೀಲನೆ ಸಭೆ ನಡೆಸಲಾಗುವುದು ಎಂದು ಸಂಸದ ಗೋವಿಂದ ಎಂ ಕಾರಜೋಳ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಗಣಿ ಇಲಾಖೆ ಉಪನಿರ್ದೇಶಕ ಡಾ.ಎಂ.ಜೆ.ಮಹೇಶ್, ಹಿರಿಯ ಭೂವಿಜ್ಞಾನಿ ನಾಗೇಂದ್ರಪ್ಪ ಸೇರಿಂದತೆ ಮತ್ತಿರರು ಇದ್ದರು.----------------
ಪೋಟೋ: ಚಿತ್ರದುರ್ಗ ಡಿಸಿ ಕಚೇರಿಯಲ್ಲಿ ನಡೆದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿದರು.----ಫೋಟೋ: 10 ಸಿಟಿಡಿ5