ಬೇಲೂರು ಚನ್ನಕೇಶವನಿಗೆ ಸಿಟಿ ರವಿ ಕಲ್ಯಾಣೋಥ್ಸವ ಸೇವೆ

KannadaprabhaNewsNetwork |  
Published : Jun 07, 2026, 02:00 AM IST
4ಎಚ್ಎಸ್ಎನ್7 : ಬೇಲೂರು    ಚನ್ನಕೇಶವ ಸ್ವಾಮಿ ದೇಗುಲದಲ್ಲಿ   ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಸಿ.ಟಿ. ರವಿ ಕುಟುಂಬ ಸಮೇತರಾಗಿ ಕಲ್ಯಾಣೋತ್ಸವ ಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಚನ್ನಕೇಶವ ದೇವಸ್ಥಾನದಲ್ಲಿ ವಿಧಾನ ಪರಿಷತ್‌ ಸದಸ್ಯ ಸಿ. ಟಿ. ರವಿ ಅವರು ಕುಟುಂಬ ಸಮೇತರಾಗಿ ಶ್ರೀ ಚೆನ್ನಕೇಶವ ಸ್ವಾಮಿಗೆ ವಿಶೇಷ ಕಲ್ಯಾಣೋತ್ಸವ ಪೂಜೆ ಸಲ್ಲಿಸಿದರು. ರಾಜಕೀಯದಲ್ಲಿ ಅಧಿಕಾರ ಶಾಶ್ವತವಲ್ಲ. ಆದರೆ ಜನಪರ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆಯಲು ಅವಕಾಶವಿದೆ. ಹೊಸದಾಗಿ ಅಧಿಕಾರಕ್ಕೆ ಬಂದಿರುವ ಸರ್ಕಾರ ರಾಜ್ಯದ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಿದರೆ ವಿರೋಧ ಪಕ್ಷವಾಗಿ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದರು.

ಕನ್ನಡಪ್ರಭ ವಾರ್ತೆ ಬೇಲೂರುಐತಿಹಾಸಿಕ ಚನ್ನಕೇಶವ ದೇವಸ್ಥಾನದಲ್ಲಿ ವಿಧಾನ ಪರಿಷತ್‌ ಸದಸ್ಯ ಸಿ. ಟಿ. ರವಿ ಅವರು ಕುಟುಂಬ ಸಮೇತರಾಗಿ ಶ್ರೀ ಚೆನ್ನಕೇಶವ ಸ್ವಾಮಿಗೆ ವಿಶೇಷ ಕಲ್ಯಾಣೋತ್ಸವ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಮ್ಮ ಅತ್ತೆ- ಮಾವನವರ ವಿವಾಹದ 50ನೇ ವರ್ಷದ ಸಂಭ್ರಮ ಹಾಗೂ ಕುಟುಂಬ ಸದಸ್ಯ ಕುಮಾರಸ್ವಾಮಿ ಅವರ ವಿವಾಹದ 25ನೇ ವರ್ಷದ ನೆನಪಿನ ಅಂಗವಾಗಿ ಹಾಗೂ ಲೋಕ ಕಲ್ಯಾಣ ಸರ್ವರ ಒಳಿತಿಗಾಗಿ ಶ್ರೀ ಚೆನ್ನಕೇಶವ ಸ್ವಾಮಿಯ ಕಲ್ಯಾಣೋತ್ಸವವನ್ನು ನಡೆಸಲಾಗುತ್ತಿದೆ ಎಂದರು.ವಸುದೈವ ಕುಟುಂಬಕಂ :

ಸನಾತನ ಧರ್ಮದ ಮೂಲ ತತ್ವವೇ ಲೋಕ ಕಲ್ಯಾಣವಾಗಿದ್ದು, ‘ವಸುದೈವ ಕುಟುಂಬಕಂ’ ಎಂಬ ಮಹತ್ವದ ಸಂದೇಶವನ್ನು ಜಗತ್ತಿಗೆ ಸಾರುತ್ತದೆ. ಇಡೀ ವಿಶ್ವವೇ ಒಂದು ಕುಟುಂಬ ಎಂಬ ಭಾವನೆಯೊಂದಿಗೆ ಸನಾತನ ಧರ್ಮ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ ಎಂದರು.ಸನಾತನ ವಿರೋಧಿಗಳಿಗೆ ತಕ್ಕ ಪಾಠ :

ಸನಾತನ ಧರ್ಮವನ್ನು ವಿರೋಧಿಸುವವರ ಇತಿಹಾಸದಲ್ಲಿ ಹಿರಣ್ಯಕಶ್ಯಪನಂತಹವರು ಧರ್ಮದ ವಿರುದ್ಧ ನಿಂತರೂ, ಅವರ ಕುಟುಂಬದಲ್ಲೇ ಪ್ರಹ್ಲಾದನಂತಹ ಭಕ್ತರು ಹುಟ್ಟಿ ಧರ್ಮದ ಮಹತ್ವವನ್ನು ಜಗತ್ತಿಗೆ ಸಾರಿದ್ದಾರೆ. ಅದೇ ರೀತಿ ಧರ್ಮವನ್ನು ವಿರೋಧಿಸುವವರ ಒಡಲಲ್ಲಿಯೇ ಭಗವಂತನ ದರ್ಶನ ಮಾಡಿಸುವಂತಹ ಪ್ರಹ್ಲಾದರು ಜನ್ಮ ತಾಳಿ ಸನಾತನ ವಿರೋಧಿಗಳಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಅಭಿಪ್ರಾಯಪಟ್ಟರು.ಹೊಸ ಸರ್ಕಾರಕ್ಕೆ ಕಿವಿಮಾತು:

ರಾಜಕೀಯದಲ್ಲಿ ಅಧಿಕಾರ ಶಾಶ್ವತವಲ್ಲ. ಆದರೆ ಜನಪರ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆಯಲು ಅವಕಾಶವಿದೆ. ಹೊಸದಾಗಿ ಅಧಿಕಾರಕ್ಕೆ ಬಂದಿರುವ ಸರ್ಕಾರ ರಾಜ್ಯದ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಿದರೆ ವಿರೋಧ ಪಕ್ಷವಾಗಿ ಸಂಪೂರ್ಣ ಬೆಂಬಲ ನೀಡುತ್ತೇವೆ. ಆದರೆ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿ ಯಾವುದೇ ನಿರ್ಧಾರ ಕೈಗೊಂಡರೆ ಅದನ್ನು ಬಲವಾಗಿ ವಿರೋಧಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಶ್ರೀನಿವಾಸ್ ಭಟ್, ನರಸಿಂಹಪ್ರಿಯ ಭಟ್ , ಪಲ್ಲವಿ ಸಿಟಿ ರವಿ, ಬಿಜೆಪಿ ಕಾರ್ಯಕರ್ತರು, ಕುಟುಂಬ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಖಾಸಗಿ ಶಾಲೆಗಳಲ್ಲಿ ಡೊನೇಶನ್ ಹಾವಳಿ ತಡೆಗೆ ಒತ್ತಾಯ
ಉದ್ಯಮಿಗಳಲ್ಲಿ ಆತ್ಮಸ್ಥೈರ್ಯ ತುಂಬಿದ ಸ್ಟಾರ್ಟಪ್‌ ಕಾನ್‌ಕ್ಲೇವ್‌