ಕನ್ನಡಪ್ರಭ ವಾರ್ತೆ ತುಮಕೂರು
ನಟಿ ಅನುಷಾರಾಯ್ ಮಾತನಾಡಿ ಯಾರೂ ಕದಿಯಲು ಸಾಧ್ಯವಾಗದ ಎರಡು ವಿಷಯಗಳೆಂದರೆ ವಿದ್ಯೆ ಮತ್ತು ಕಲೆ. ಶಿಕ್ಷಣ ಬದುಕಿಗೆ ಬಹಳ ಮುಖ್ಯವಾದ ಅಂಶ. ವಿದ್ಯಾರ್ಥಿ ಬದುಕು ಜೀವನದ ಒಂದು ದೊಡ್ಡಘಟ್ಟ.ಈ ಹಂತದಲ್ಲಿ ನಿಮ್ಮ ಪ್ರತಿಭೆಗಳನ್ನು ನೀವೇ ಗುರುತಿಸಿಕೊಳ್ಳಬೇಕು ಎಂದರು. ಮತ್ತೋರ್ವ ನಟಿ ದೀಪಿಕಾ ದಾಸ್ ಮಾತನಾಡಿ ಶಿಕ್ಷಣದ ಜೊತೆ ಜೊತೆಯಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಸಾಂಸ್ಕೃತಿಕ ನಗರ ಎಂದೇ ಪ್ರಸಿದ್ಧವಾದ ಈ ನಾಡಿನಲ್ಲಿ ಹುಟ್ಟಿ ಬೆಳೆದಿರುವಂತಹ ಪ್ರತಿಭೆಗಳು ಬಹಳ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಶಿಕ್ಷಣವೆಂಬುದು ಕೇವಲ ಅಕ್ಷರ ಕಲಿಕೆಯಲ್ಲಿ ಮಾತ್ರ ಇರುವುದಿಲ್ಲ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಳ್ಳಲು ವೇದಿಕೆ ಸೃಷ್ಟಿ ಮಾಡುವುದು ಕೂಡ ಶಿಕ್ಷಣ ಸಂಸ್ಥೆಗಳ ಕರ್ತವ್ಯ ಎಂದರು.ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಾಹಿದಾ ಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ.ಉಪಸ್ಥಿತರಿದ್ದರು. ಸಾಂಸ್ಕೃತಿಕ ಚಟುವಟಿಕೆಗಳ ಘಟಕದ ಸಂಯೋಜಕ ಡಾ. ದೇವರಾಜು ಎಸ್. ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಘಟಕದ ನಿರ್ದೇಶಕ ಪ್ರೊ. ಬಸವರಾಜು ಜಿ. ವಂದಿಸಿದರು. ಸಹ ಪ್ರಾಧ್ಯಾಪಕ ಡಾ.ಸಿಬಂತಿ ಪದ್ಮನಾಭ ಕೆ. ವಿ. ನಿರೂಪಿಸಿದರು.‘ಕೋರ’ ಹಾಗೂ ‘ಹ್ಯಾಶ್ಟ್ಯಾಗ್ ಪಾರುಪಾರ್ವತಿ’ ಚಿತ್ರತಂಡಗಳು ಭಾಗವಹಿಸಿದವು.