ಹೊಸಪೇಟೆ: ಕನ್ನಡ ಭಾಷೆ, ಸಾಹಿತ್ಯಾಭಿಮಾನ ಬೆಳೆಸಿಕೊಳ್ಳಬೇಕು. ಪ್ರೀತಿಯೊಬ್ಬರು ನಮ್ಮ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಅನ್ಯಭಾಷೆಗೂ ಗೌರವ ನೀಡಬೇಕು. ನಾವೆಲ್ಲರೂ ಕನ್ನಡ ಭಾಷೆ, ಸಾಹಿತ್ಯವನ್ನು ಬೆಳೆಸಬೇಕು ಎಂದು ಸ್ಥಳೀಯ ಕೊಟ್ಟೂರುಸ್ವಾಮಿ ಸಂಸ್ಥಾನಮಠದ ಜ.ಶ್ರೀ ಬಸವಲಿಂಗ ಮಹಾಸ್ವಾಮೀಜಿ ಹೇಳಿದರು.
ಮನುಷ್ಯ ಅಧ್ಯಾತ್ಮದೊಂದಿಗೆ ವ್ಯಕ್ತಿತ್ವ ಹೊಂದಬೇಕು. ರಾಜ್ಯದಲ್ಲಿ ಮಠಮಾನ್ಯಗಳು ಕೂಡ ಕನ್ನಡ ಭಾಷೆ ಹಾಗೂ ಸಾಹಿತ್ಯವನ್ನು ಪೋಷಿಸಿವೆ. ಹೊಸಪೇಟೆ ಕಸಾಪದಿಂದ ಕೈಗೊಳ್ಳುವ ಕನ್ನಡ ಕಾರ್ಯಗಳಿಗೆ ಶ್ರೀಮಠ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ಹೇಳಿದರು.
ಕಸಾಪ ಜಿಲ್ಲಾಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ, ಕನ್ನಡ ವಿವಿ ಪ್ರಾಧ್ಯಾಪಕ ಡಾ. ವೆಂಕಟಗಿರಿ ದಳವಾಯಿ, ಜಿಲ್ಲಾ ಆರ್ಸಿಎಚ್ಒ ಡಾ. ಬಿ. ಜಂಬಯ್ಯ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ ಶಂಕ್ರಿ, ಮುಖಂಡರಾದ ಶರಣುಸ್ವಾಮಿ, ಸಾಲಿಸಿದ್ದಯ್ಯ ಸ್ವಾಮಿ, ಗುಜ್ಜಲ ಗಣೇಶ, ಕಸಾಪ ತಾಲೂಕು ಅಧ್ಯಕ್ಷ ಗುಂಡಿ ಮಾರುತಿ, ನಿಕಟಪೂರ್ವ ಅಧ್ಯಕ್ಷ ಡಾ. ನಾಯಕರ ಹುಲುಗಪ್ಪ ಮತ್ತಿತರರಿದ್ದರು.