ಐತಿಹಾಸಿಕ ತಾಣ ಐಹೊಳೆಯ ಜಯಸಿಂಹ ವೇದಿಕೆಯಲ್ಲಿ ಗುರುವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸಿದವು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಐತಿಹಾಸಿಕ ತಾಣ ಐಹೊಳೆಯ ಜಯಸಿಂಹ ವೇದಿಕೆಯಲ್ಲಿ ಗುರುವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸಿದವು.ಮಧ್ಯಾಹ್ನ 3 ರಿಂದ ಸಂಜೆ 6.30ರವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದರೆ, ಸಂಜೆ 7.30 ರಿಂದ ಸಮೂಹ ನೃತ್ಯ, ಕುಚಿಪುಡಿ, ಸುಗಮ ಸಂಗೀತ, ನೃತ್ಯ ರೂಪಕ, ಮ್ಯಾಜಿಕ್ ಶೋ, ಚಂಡೆ & ವಾಯೋಲಿಸ್, ಸ್ಯಾಕ್ಸೋಪೋನ್, ಹಾಸ್ಯ ಸಂಜೆ ಕಾರ್ಯಕ್ರಮ ಜರುಗಿದವು. ರಾತ್ರಿ ಚಲನಚಿತ್ರ ನಟ ಡಾಲಿ ಧನಂಜಯ ಮತ್ತು ರಘು ದೀಕ್ಷಿತ್ ತಂಡದಿಂದ ಸಂಗೀತ ಮತ್ತು ಮನರಂಜನೆ ಕಾರ್ಯಕ್ರಮ ಮನರಂಜನೆಯ ರಸದೌತನ ನೀಡಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.