11ರಂದು ಸಾಂಸ್ಕೃತಿಕ ವೈಭವ: ಶಿವರಾಜಕುಮಾರ್‌ ಚಾಲನೆ

KannadaprabhaNewsNetwork |  
Published : Oct 04, 2024, 01:00 AM IST
ಫೋಟೋ 3ಟಿಎಂಕೆ14.ಫೋಟೋ 3ಟಿಎಂಕೆ15ವೈಭವಯುತ ತುಮಕೂರು ದಸರಾದ ಸಿದ್ದತೆ ಕುರಿತು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.ಇದೇ ವೇಳೆ ಜಿಪಂ ಸಿಇಒ ಜಿ.ಪ್ರಭು ಹಾಗೂ ಪೊಲೀಸ್‌ ವರಿಷ್ಟಾಧಿಕಾರಿ ಕೆ.ವಿ.ಆಶೋಕ್‌ ಇದ್ದರು. | Kannada Prabha

ಸಾರಾಂಶ

ತುಮಕೂರು: ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿರುವ ವೈಭವಯುತ ತುಮಕೂರು ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 11ರಂದು ಮುಖ್ಯ ವೇದಿಕೆಯಲ್ಲಿ ಡಾ.ಶಿವರಾಜ್ ಕುಮಾರ್ ಅವರು ಸಾಂಸ್ಕೃತಿಕ ವೈಭವಕ್ಕೆ ಚಾಲನೆ ನೀಡಲಿ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ತುಮಕೂರು: ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿರುವ ವೈಭವಯುತ ತುಮಕೂರು ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 11ರಂದು ಮುಖ್ಯ ವೇದಿಕೆಯಲ್ಲಿ ಡಾ.ಶಿವರಾಜ್ ಕುಮಾರ್ ಅವರು ಸಾಂಸ್ಕೃತಿಕ ವೈಭವಕ್ಕೆ ಚಾಲನೆ ನೀಡಲಿ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಅಂದು ಜನಪದ ಗೀತೆ, ಸುಗಮ ಸಂಗೀತ,ಆಕರ್ಷಕ ಲೇಸರ್ ಶೋ ಮತ್ತು ಖ್ಯಾತ ಗಾಯಕರಾದ ಗುರುಕಿರಣ್ ಹಾಗೂ ಕಂಬದ ರಂಗಯ್ಯ ಅವರ ತಂಡದಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ಜರುಗಲಿದೆ. ಅಕ್ಟೋಬರ್ 12ರಂದು ಕವಿಗೋಷ್ಠಿ, ನವ ದುರ್ಗಿಯರ ನೃತ್ಯ ರೂಪಕ, ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರ ತಂಡದಿಂದ ಸಂಗೀತ ರಸ ಸಂಜೆ, ಡ್ರೋನ್ ಶೋ ಮತ್ತು ಸಮಾರೋಪ ಸಮಾರಂಭದ ನಂತರ ಬಾಣ-ಬಿರುಸು ಪ್ರದರ್ಶನ ನೆರವೇರಲಿವೆ. ಇಸ್ರೋ ಸಂಸ್ಥೆಯಿಂದ ಮಾಹಿತಿಯುಕ್ತವಾದ ಬಾಹ್ಯಾಕಾಶ ಕುರಿತ ವಸ್ತು ಪ್ರದರ್ಶನ,ವಿಂಟೇಜ್ ಕಾರ್ ಪ್ರದರ್ಶನ, ಹೆಲಿಕಾಪ್ಟರ್ ಪ್ರದರ್ಶನಗಳು ಎರಡೂ ದಿನವೂ ನಡೆಯಲಿದ್ದು,ಮಕ್ಕಳಿಗೆ ರಜೆ ಇರುವ ಕಾರಣ ಪೋಷಕರು ಮಕ್ಕಳನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಬರುವಂತೆ ಮನವಿ ಮಾಡಿದರು.

ಜಿಲ್ಲೆ ಸೇರಿದಂತೆ ರಾಜ್ಯದ ಅನೇಕ ಭಾಗಗಳಿಂದ ದಸರಾ ಉತ್ಸವಕ್ಕೆ ಜನರು ಆಗಮಿಸುವುದರಿಂದ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ, ಅವಘಡ ಉಂಟಾಗದಂತೆ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನಕ್ಷರತೆ ಬಾಲ್ಯ ವಿವಾಹ ಕೇಸ್‌ ರದ್ದತಿಗೆ ಆಧಾರವಾಗದು: ಕೋರ್ಟ್‌
ಕೆಎಸ್‌ಡಿಎಲ್‌ನಿಂದ ₹400ನ ಮಲ್ಲಿಗೆ ಸೋಪ್‌!