ಮನುಷ್ಯನಿಗೆ ಜಾತಿಗಿಂತ ಸಂಸ್ಕಾರ ಮುಖ್ಯ: ಚಲನಚಿತ್ರ ಹಿರಿಯ ನಟ ದೊಡ್ಡಣ್ಣ

KannadaprabhaNewsNetwork |  
Published : Mar 15, 2026, 01:15 AM IST
ಪೋಟೋ 3 :  ಸೋಂಪುರ ಹೋಬಳಿಯ ಮೇಲಣಗವಿ ವೀರಸಿಂಹಾಸನ ಮಠದಲ್ಲಿ ನಡೆದ  ಜಗದ್ಗುರು ರೇಣುಕಾಚಾರ್ಯ ಜಯಂತಿ ಮತ್ತು ಶಿವಗಂಗಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮೀಜಿ, ಚಿತ್ರನಟ ದೊಡ್ಡಣ್ಣ ಗಣ್ಯರು ಉದ್ಘಾಟಿಸಿದರು. | Kannada Prabha

ಸಾರಾಂಶ

ದೇವರಲ್ಲಿ, ಗುರುಗಳಲ್ಲಿ ನಂಬಿಕೆಯಿಟ್ಟಾಗ ಕಷ್ಟ- ಕಾರ್ಪಣ್ಯಗಳು ನಿವಾರಣೆಯಾಗುತ್ತವೆ. ಈ ಬಗ್ಗೆ ನನಗೆ ಸ್ವಂತ ಅನುಭವವಾಗಿದೆ. ವಿಭೂತಿಯನ್ನು ಪ್ರತಿಯೊಬ್ಬರೂ ಧರಿಸಬೇಕು. ವಿಭೂತಿ ಒಬ್ಬರಿಗೆ ಮಾತ್ರ ಸೀಮಿತವಾಗಿಲ್ಲ. ಇತ್ತೀಚೆಗೆ ಜಾತಿ ಜಾತಿಗಳ ನಡುವೆ ವೈಷಮ್ಯ ಹೆಚ್ಚಾಗುತ್ತಿದೆ, ಮನುಷ್ಯನಿಗೆ ಜಾತಿ ಮುಖ್ಯವಲ್ಲ, ಸಂಸ್ಕಾರ ಮುಖ್ಯವಾಗಿದ್ದು, ಗುರುವಿನ ಗುಲಾಮನಾದರೆ ಮೋಕ್ಷ ಪಡೆಯಲು ಸಾಧ್ಯ ಎಂದರು.

ಕನ್ನಡಪ್ರಭ ವಾರ್ತೆ ದಾಬಸ್‍ಪೇಟೆ

ವೀರಶೈವ ಲಿಂಗಾಯತ ಸಮುದಾಯದಲ್ಲಿ ಒಗ್ಗಟ್ಟಿನ ಕೊರತೆ ಕಾಣುತ್ತಿದ್ದೇವೆ. ನಾವು ಒಂದಾಗಿರದಿದ್ದರೆ ಬೇರೆಯವರು ನಮ್ಮನ್ನು ಆಳ್ವಿಕೆ ಮಾಡಲು ಮುಂದಾಗುತ್ತಾರೆ, ಅದಕ್ಕೆಲ್ಲಾ ನಮ್ಮ ವೀರಶೈವ ಲಿಂಗಾಯತ ಸಮಾಜ ಅವಕಾಶ ಮಾಡಿಕೊಡಬಾರದು ಎಂದು ಚಲನಚಿತ್ರ ನಟ ದೊಡ್ಡಣ್ಣ ತಿಳಿಸಿದರು.

ಸೋಂಪುರ ಹೋಬಳಿಯ ಮೇಲಣಗವಿ ಮಠದಲ್ಲಿ ನಡೆದ ಜಗದ್ಗುರು ರೇಣುಕಾಚಾರ್ಯ ಜಯಂತಿ ಮತ್ತು ಶಿವಗಂಗಾಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶಿವಗಂಗಾಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ದೇವರಲ್ಲಿ, ಗುರುಗಳಲ್ಲಿ ನಂಬಿಕೆಯಿಟ್ಟಾಗ ಕಷ್ಟ- ಕಾರ್ಪಣ್ಯಗಳು ನಿವಾರಣೆಯಾಗುತ್ತವೆ. ಈ ಬಗ್ಗೆ ನನಗೆ ಸ್ವಂತ ಅನುಭವವಾಗಿದೆ. ವಿಭೂತಿಯನ್ನು ಪ್ರತಿಯೊಬ್ಬರೂ ಧರಿಸಬೇಕು. ವಿಭೂತಿ ಒಬ್ಬರಿಗೆ ಮಾತ್ರ ಸೀಮಿತವಾಗಿಲ್ಲ. ಇತ್ತೀಚೆಗೆ ಜಾತಿ ಜಾತಿಗಳ ನಡುವೆ ವೈಷಮ್ಯ ಹೆಚ್ಚಾಗುತ್ತಿದೆ, ಮನುಷ್ಯನಿಗೆ ಜಾತಿ ಮುಖ್ಯವಲ್ಲ, ಸಂಸ್ಕಾರ ಮುಖ್ಯವಾಗಿದ್ದು, ಗುರುವಿನ ಗುಲಾಮನಾದರೆ ಮೋಕ್ಷ ಪಡೆಯಲು ಸಾಧ್ಯ ಎಂದರು.

ಪ್ರಶಸ್ತಿಗಳನ್ನು ನಾವು ಹುಡುಕಿಕೊಂಡು ಹೋಗಬಾರದು, ಪ್ರಶಸ್ತಿಗಳೇ ನಮ್ಮನ್ನು ಹುಡುಕಿಕೊಂಡು ಬಂದಾಗ ಪ್ರಶಸ್ತಿಯ ಮೌಲ್ಯ ಹೆಚ್ಚಾಗುತ್ತದೆ. ನನಗೆ ಸಿಕ್ಕಿರುವ ಈ ಪ್ರಶಸ್ತಿಯನ್ನು ನನಗೆ ಜನ್ಮನೀಡಿದ ತಾಯಿಗೆ ಅರ್ಪಿಸುತ್ತೇನೆ. ನಮ್ಮನ್ನು ಹೆತ್ತ ತಂದೆ- ತಾಯಿಗೆ ಋಣಿಯಾಗಿರಬೇಕು. ಅವರನ್ನು ಸಾಕಿ ಸಲುಹಿದಾಗ ಮಾತ್ರ ನಮ್ಮ ಜವಾಬ್ದಾರಿ ಹೆಚ್ಚಾಗುತ್ತದೆ ಎಂದರು.

ಪ್ರಶಸ್ತಿಯ ಮೌಲ್ಯ ಹೆಚ್ಚಿದೆ:

ಸಿದ್ಧಗಂಗಾ ಮಠದ ಶ್ರೀಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಮೇಲಣಗವಿ ಮಠದ ಶ್ರೀಗಳು ತಮ್ಮಲ್ಲಿರುವ ಜ್ಞಾನವನ್ನು ದೇಶ- ವಿದೇಶಗಳಲ್ಲಿ ಪಸರಿಸಿ ಸಮಾಜದ, ಧರ್ಮದ ಏಳಿಗೆಗೆ ಶ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಪ್ರತಿವರ್ಷವೂ ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತೊಡಗಿರುವ ವ್ಯಕ್ತಿಗಳನ್ನು ಗುರುತಿಸಿ ಶಿವಗಂಗಾ ಪ್ರಶಸ್ತಿ ನೀಡುವುದರ ಮೂಲಕ ಪ್ರಶಸ್ತಿ ಮೌಲ್ಯ ಹೆಚ್ಚಿಸುತ್ತಿದ್ದಾರೆ. ಚಿತ್ರನಟ ದೊಡ್ಡಣ್ಣ ಅವರಿಗೆ ಶಿವಗಂಗಾಶ್ರೀ ಪ್ರಶಸ್ತಿ ನೀಡಿರುವುದು ಪ್ರಶಸ್ತಿಯ ಮೌಲ್ಯ ಹೆಚ್ಚಿಸಿದೆ. ದೊಡ್ಡಣ್ಣನವರಿಗೆ ಹೆಸರಿಗೆ ತಕ್ಕಂತೆ ನಡೆ- ನುಡಿಯಲ್ಲಿಯೂ ದೊಡ್ಡತನ ಇದೆ. ಪ್ರತಿ ವರ್ಷ ಮಠದಲ್ಲಿ ಎಲ್ಲಾ ಮಕ್ಕಳಿಗೆ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುತ್ತಾ ಬರುತ್ತಿದ್ದಾರೆ ಎಂದರು.

ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಶ್ರೀ ಜಗದ್ಗುರು ರೇಣುಕಾಚಾರ್ಯರಿಗೂ ಹಾಗೂ ಮೇಲಣಗವಿಮಠಕ್ಕೂ ಅವಿನಾಭಾವ ಸಂಬಂಧವಿದೆ. ಅವರ ನೆನಪಿಗಾಗಿ ಪ್ರತಿವರ್ಷ ರೇಣುಕಾಚಾರ್ಯ ಜಯಂತಿ ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ತಮ್ಮ ದೈವಶಕ್ತಿ ಮತ್ತು ಯೋಗದಂಡದಿಂದ ಶಿವಗಂಗೆ ಬೆಟ್ಟದ ತಪ್ಪಲಲ್ಲಿ ಒಳಕಲ್ಲು ತೀರ್ಥ ಸ್ಥಾಪನೆ ಮಾಡಿದರು. ಇಲ್ಲಿ ವರ್ಷದ 12 ತಿಂಗಳು ದೈವಶಕ್ತಿಯ ತೀರ್ಥವನ್ನು ನಾವು ಕಾಣಬಹುದಾಗಿದೆ ಎಂದರು.

ಗೌರಿಗದ್ದೆ ಆಶ್ರಮದ ಡಾ.ವಿನಯ್ ಗುರೂಜಿ ಮಾತನಾಡಿ, ಸೃಷ್ಟಿ ಇರುವುದು ಎಷ್ಟು ಸತ್ಯವೋ, ಸೃಷ್ಟಿಕರ್ತ ಇರುವುದು ಅಷ್ಟೇ ಸತ್ಯ. ನಮ್ಮ ಪುಣ್ಯಭೂಮಿಯಲ್ಲಿ ಶಿವಯೋಗಿಗಳ ತಪಸ್ಸಿನ ಫಲವಾಗಿ ಶಾಂತಿ ನೆಲೆಸಿದೆ. ಗುರುವಿನ ಶಕ್ತಿ ನಾಶ ಮಾಡಲು ಯಾವುದೇ ದುಷ್ಟಶಕ್ತಿಗಳಿಗೂ ಸಾಧ್ಯವಿಲ್ಲ ಎಂದರು.

ವಿವಿಧ ಕ್ಷೇತ್ರದ ಸಾಧಕರಾದ ಮಂಜುನಾಥಯ್ಯ, ಕುಮಾರಿ ಶಿವಾನಿ ಶಿವದಾಸಸ್ವಾಮಿ, ಕೆ.ಎಸ್. ಮಹದೇವಯ್ಯ, ಉಮಾಶಂಕರ್, ಬಸವ ರಾಜಣ್ಣ, ರೇವಣ ಸಿದ್ದಯ್ಯ, ಶಿವನಂಜಪ್ಪ, ಶರಣಪ್ಪ, ಲೋಕೇಶ್, ಸೂಡಿ ಸುರೇಶ್, ರಮೇಶ್‍ ಬಾಬು, ರವಿಕುಮಾರ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಡಸಿದ್ಧೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ, ಡೋಣೂರು ಚಾನುಕೋಟಿ ಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀರಂಗಪಟ್ಟಣ ಬೇಬಿ ಮಠದ ತ್ರಿನೇತ್ರ ಮಹಾಂತ ಶಿವಯೋಗೀಶ್ವರ ಸ್ವಾಮೀಜಿ, ವಿಭೂತಿಪುರ ಮಠದ ಶ್ರೀ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಬಸವಣ್ಣ ದೇವರ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಹೊನ್ನಮ್ಮಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಹಿರೇಮಠದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ವನಕಲ್ಲು ಮಠದ ಡಾ.ಶ್ರೀ ಬಸವರಮಾನಂದ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸೇರಿ ಹಲವು ಮಠಾಧೀಶರು, ಅಭಾವಿಲೀಂ ಮಹಾಸಭಾದ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪನವರ, ಜಿಲ್ಲಾಧ್ಯಕ್ಷೆ ರಾಜಮ್ಮ, ತಾಲೂಕು ಅಧ್ಯಕ್ಷೆ ವೇದಾವತಿ, ಜಿಲ್ಲಾ ಸಂಘದ ಅಧ್ಯಕ್ಷ ರೇವಣಸಿದ್ದಯ್ಯ, ಮಾಜಿ ಅಧ್ಯಕ್ಷರುಗಳಾದ ನಟರಾಜು, ಉಮಾಶಂಕರ್, ಹೊನ್ನಗಂಗಶೆಟ್ಟಿ, ಜಗದೀಶ್, ಅಣ್ಣಪ್ಪ, ಕೋಟ್ರೇಶ್ ಮತ್ತಿತರರು ಉಪಸ್ಥಿತರಿದ್ದರು.

-------

ಪೋಟೋ 3: ಸೋಂಪುರ ಹೋಬಳಿಯ ಮೇಲಣಗವಿ ವೀರಸಿಂಹಾಸನ ಮಠದಲ್ಲಿ ನಡೆದ ಜಗದ್ಗುರು ರೇಣುಕಾಚಾರ್ಯ ಜಯಂತಿ ಮತ್ತು ಶಿವಗಂಗಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಚಿತ್ರನಟ ದೊಡ್ಡಣ್ಣ ಸೇರಿ ಗಣ್ಯರು ಉದ್ಘಾಟಿಸಿದರು.

ಪೋಟೋ 4 : ಚಿತ್ರನಟ ದೊಡ್ಡಣ್ಣ ಅವರಿಗೆ ಶಿವಗಂಗಾ ಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿರುವ ಮಠಾಧೀಶರು ಹಾಗೂ ಗಣ್ಯರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿ: ತಪ್ಪಿದ ಭಾರೀ ದುರಂತ
ಮುತ್ತೋಡಿ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು