ಪೌರ್ಣಿಮೆ ಧರ್ಮ ಸಮಾರಂಭದಲ್ಲಿ ಶ್ರೀ ರಂಭಾಪುರಿ ಜಗದ್ಗುರು ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು
ಸತ್ಯ ಕಾಣಲು ಸಮಯ ಶ್ರಮ ಬೇಕಾಗುತ್ತದೆ. ನಡೆಯುವ ದಾರಿಯಲ್ಲಿ ತಾಕತ್ತು ಇದ್ದರೆ ತಡೆಯುವ ಶಕ್ತಿ ಯಾರಿಗೂ ಇರುವುದಿಲ್ಲ. ಮೂರ್ಖನ ಹೃದಯ ಅವನ ನಾಲಿಗೆಯಲ್ಲಿ ಇರುತ್ತದೆ. ವಿವೇಕಿಯ ನಾಲಿಗೆ ಅವನ ಹೃದಯದಲ್ಲಿ ಇರುತ್ತದೆ. ಸಮಯ ಸಂದರ್ಭಗಳು ಯಾವಾಗಲೂ ಬದಲಾಗುತ್ತಿರುತ್ತವೆ. ಆದರೆ ಒಳ್ಳೆಯ ಸಂಬಂಧಗಳು ಹಾಗೂ ನಿಜವಾದ ಸ್ನೇಹಿತರು ಎಂದೂ ಬದಲಾಗುವುದಿಲ್ಲ. ಇತಿಹಾಸ ನಿನ್ನೆ ಸುಖವಿತ್ತೆಂದು ಹೇಳುತ್ತದೆ. ವಿಜ್ಞಾನ ನಾಳೆ ಸುಖವಿರುವುದೆಂದು ಹೇಳುತ್ತದೆ. ಆದರೆ ಸತ್ಯವಾದ ಮನಸ್ಸು ಹಾಗೂ ಸ್ವಚ್ಛವಾದ ಹೃದಯವಿದ್ದರೆ ನಿತ್ಯವೂ ಸುಖ ಇರುವುದೆಂದು ಭಾರತೀಯ ಧರ್ಮ, ತತ್ವಜ್ಞಾನ ಹೇಳುತ್ತದೆ. ಬದುಕು ಅನ್ನುವುದು ಕೊನೆಯಿಲ್ಲದ ಪಯಣ. ಯಾವುದೂ ನಮ್ಮ ಜೊತೆ ಉಳಿಯುವುದಿಲ್ಲ. ಉಳಿಯುವುದು ಹೃದಯಕ್ಕೆ ತಟ್ಟಿದ ನೆನಪೆಂಬುದು ಒಂದೇ ಎಂದು ತಿಳಿಯಬೇಕು. ಉಜ್ವಲ ಜೀವನದ ಉನ್ನತಿ ಮತ್ತು ಶ್ರೇಯಸ್ಸಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯರು ನಿರೂಪಿಸಿದ ವಿಚಾರ ಧಾರೆ ಅನುಸರಿಸಿ ಬಾಳಿದರೆ ನೆಮ್ಮದಿ ಶಾಂತಿ ಪ್ರಾಪ್ತವಾಗುವುದು ಎಂದರು. ಪೌರ್ಣಿಮೆ ಸಮಾರಂಭದಲ್ಲಿ ಮಳಲಿಮಠದ ಡಾ.ನಾಗಭೂಷಣ ಶಿವಾಚಾರ್ಯರು, ಕಾರ್ಜುವಳ್ಳಿ ಹಿರೇಮಠದ ಸದಾಶಿವ ಶಿವಾಚಾರ್ಯರು, ಹನುಮಾಪುರ ಹಿರೇಮಠದ ಡಾ.ಸೋಮಶೇಖರ ಶಿವಾಚಾರ್ಯರು, ಆಲೂರು ಹಿರೇಮಠದ ಶ್ರೀಗಳು, ವೀರೇಶ ಪಾಟೀಲ, ಮನು ಸಹೋದರರು ಭದ್ರಾವತಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಾಮೂಹಿಕ ಶಿವದೀಕ್ಷಾ ನೆರವೇರಿಸಲಾಯಿತು. ಬೆಳಿಗ್ಗೆ ಕ್ಷೇತ್ರದ ಎಲ್ಲ ದೈವಗಳಿಗೆ ಪೌರ್ಣಿಮಾ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಸದ್ಭಕ್ತರಿಗೆ ಅನ್ನ ದಾಸೋಹ ನೆರವೇರಿತು. ೨೩ಬಿಹೆಚ್ಆರ್ ೪:
ಬಾಳೆಹೊನ್ನೂರಿನ ಜಗದ್ಗುರು ರಂಭಾಪುರಿ ಪೀಠದಲ್ಲಿ ಪೌರ್ಣಿಮೆ ಅಂಗವಾಗಿ ಶಿವದೀಕ್ಷೆ ಪಡೆದ ವಟುಗಳು ಶ್ರೀ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದರು.