ಮಕ್ಕಳಲ್ಲಿ ಸಂಸ್ಕಾರ ಅತೀ ಮುಖ್ಯ

KannadaprabhaNewsNetwork |  
Published : Feb 24, 2025, 12:32 AM IST
ಆಲೂರು ತಾಲ್ಲೂಕು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ | Kannada Prabha

ಸಾರಾಂಶ

: ಮಕ್ಕಳಲ್ಲಿ ಉತ್ತಮ ಸಂಸ್ಕಾರ ಮುಖ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ. ಜೆ. ಕೃಷ್ಣೇಗೌಡ ಅಭಿಪ್ರಾಯಪಟ್ಟರು.

ಆಲೂರು: ಮಕ್ಕಳಲ್ಲಿ ಉತ್ತಮ ಸಂಸ್ಕಾರ ಮುಖ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ. ಜೆ. ಕೃಷ್ಣೇಗೌಡ ಅಭಿಪ್ರಾಯಪಟ್ಟರು.

ಪಟ್ಟಣ ವಿಶ್ವೇಶ್ವರಯ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ ಸಹಯೋಗದಲ್ಲಿ ಲಾರ್ಡ್ ಬೇಡನ್ ಪೊವೆಲ್ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವ ಚಿಂತಕರ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಿವೃತ್ತ ಸೇನಾನಿ ಲಾರ್ಡ್ ಬೇಡನ್ ಪೊವೆಲ್ ಚಿಕ್ಕ ಮಕ್ಕಳಲ್ಲಿಯೇ ಮಾನವೀಯ, ಸಾಮಾಜಿಕ, ಸಾಂಸ್ಕೃತಿಕ ಮೌಲ್ಯಗಳನ್ನು ಬಿತ್ತುವ ಸಲುವಾಗಿ ಹುಟ್ಟುಹಾಕಿದ ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿ ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಶಿಸ್ತು, ಸಂಯಮವನ್ನು ರೂಢಿಸುತ್ತದೆ. ಇದೊಂದು ಉತ್ತಮ ಚಳವಳಿಯಾಗಿದ್ದು ಮಕ್ಕಳು ಹಾಗೂ ಪೋಷಕರು ಸದುಪಯೋಗ ಪಡಿಸಿಕೊಳ್ಳಬೇಕಿದೆ ಎಂದರು.

ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ ಮಾತನಾಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಾಗತಿಕ ಸಂಸ್ಥೆಯಾಗಿದ್ದು ಸುಮಾರು ೨೦೦ ಕ್ಕೂ ಹೆಚ್ಚಿನ ರಾಷ್ಟ್ರಗಳಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಹಗಲಿರುಳು ಶ್ರಮಿಸುತ್ತಿದೆ. ಇಡೀ ಭಾರತದಲ್ಲಿ ಕರ್ನಾಟಕ ಸ್ಕೌಟ್ಸ್ ಗೈಡ್ಸ್ ಸಂಸ್ಥೆ ಮುಂಚೂಣಿಯಲ್ಲಿದ್ದರೆ ಕರ್ನಾಟಕದ ಮೈಸೂರು ವಿಭಾಗ ಮಟ್ಟದಲ್ಲಿ ಸತತ ಏಳು ವರ್ಷಗಳಿಂದ ಹಾಸನ ಮುಂಚೂಣಿ ಸ್ಥಾನದಲ್ಲಿದೆ. ನಮ್ಮ ಜಿಲ್ಲೆಯ ಸಮಾಜಮುಖಿ ಕಾರ್ಯಗಳು, ಶೈಕ್ಷಣಿಕ ಚಟವಟಿಕೆಗಳು, ವಿವಿಧ ತರಬೇತಿ ಶಿಬಿರಗಳು, ಮಕ್ಕಳ ನಿರಂತರ ಕಾರ್ಯ ಚಟವಟಿಕೆಗಳು ಈ ಯಶಸ್ಸಿಗೆ ಕಾರಣ. ಬೇಡನ್ ಪೊವೆಲ್ ಜನ್ಮ ದಿನವನ್ನು ಜಾಗತಿಕ ಚಿಂತಕರ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.ವಿಶ್ವೇಶ್ವರ ಐಟಿಐ ಸಂಸ್ಥೆಯ ಪ್ರಾಂಶುಪಾಲ ನಾಗಭೂಷಣ್ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಯಾವುದೇ ಶಿಕ್ಷಣ ಸಂಸ್ಥೆಯ ಶೋಭೆಯನ್ನು ಹೆಚ್ಚಿಸುತ್ತದೆ. ಮಕ್ಕಳಲ್ಲಿ ಶಿಸ್ತು, ಸಹಾಕಾರ, ಸೇವಾ ಮನೋಭಾವವನ್ನು ಬೆಳೆಸುವುದರ ಮೂಲಕ ಉತ್ತಮ ನಾಗರೀಕರನ್ನಾಗಿ ರೂಪಿಸುತ್ತದೆ. ಮುಂಬರುವ ದಿನಗಳಲ್ಲಿ ಇಡೀ ಶಾಲಾ ಮಕ್ಕಳೆಲ್ಲರನ್ನೂ ಸ್ಕೌಟ್ಸ್ ಮತ್ತು ಗೈಡ್ಸ್ ಮಾಡಿಸಬೇಕೆಂಬುದು ನಮ್ಮ ಮಹಾದಾಸೆ ಎಂದರು.

ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಎಚ್.ಎಂ. ಪ್ರಿಯಾಂಕ, ಭೈರಾಪುರದ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಗಿರೀಶ್, ತಾಲೂಕು ಕಾರ್ಯದರ್ಶಿ ಕೊಟ್ರೇಶ್ ಎಸ್. ಉಪ್ಪಾರ್, ಶಿಕ್ಷಣ ಸಂಯೋಜಕ ತಿಮ್ಮಶೆಟ್ಟಿ, ತಾಲೂಕು ಉಪಾಧ್ಯಕ್ಷೆ ಸಿ.ಎಸ್.ಪೂರ್ಣಿಮಾ, ತಾಲೂಕು ಖಜಾಂಚಿ ಬಿ.ಎಸ್. ಹಿಮ, ಸ್ಕೌಟ್ ಮಾಸ್ಟರ್ ರಾಮಚಂದ್ರ ಮಾತನಾಡಿದರು. ಸುರೇಶ್ ಗುರೂಜಿ, ಕೊಟ್ರೇಶ್ ಎಸ್. ಉಪ್ಪಾರ್, ಬಿ.ಎಸ್. ಹಿಮ, ದೇವರಾಜು, ರೋಸಿ, ರಾಮಚಂದ್ರ, ಕಾವ್ಯ, ಎಂ. ಎಲ್. ಎಲಿಜೆಬೆತ್, ವೆಂಕಟರಂಗಯ್ಯ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''