ಮಟ್ಕಾ, ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ

KannadaprabhaNewsNetwork |  
Published : Jan 23, 2026, 02:00 AM IST
22ಹೆಚ್.ಆರ್.ಆರ್ 01ಹರಿಹರದ ಗುರು ಭವನದಲ್ಲಿ ಎಸ್.ಸಿ/ಎಸ್‌ಟಿ ಸಭೆ ನಡೆಯಿತು.  | Kannada Prabha

ಸಾರಾಂಶ

ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಮಟ್ಕಾ ಹಾಗೂ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ಪರಿಶಿಷ್ಟ ಜಾತಿಯ ಯುವಜನರು ಹಾಳಾಗುತ್ತಿದ್ದಾರೆ. ಈ ಅವ್ಯವಸ್ಥೆ ನಿಯಂತ್ರಿಸಲು ಅಧಿಕಾರಿಗಳು ಮುಂದಾಗಬೇಕೆಂದು ಎಸ್‌ಸಿ- ಎಸ್‌ಟಿ ಸಮುದಾಯ ಮುಖಂಡರು ಹರಿಹರದಲ್ಲಿ ಆಗ್ರಹಿಸಿದ್ದಾರೆ.

- ಎಸ್‌ಸಿ- ಎಸ್‌ಟಿ ಸಮುದಾಯದ ಕುಂದುಕೊರತೆ ಸಭೆಯಲ್ಲಿ ಮುಖಂಡರ ಆಗ್ರಹ

- - -

ಕನ್ನಡಪ್ರಭ ವಾರ್ತೆ ಹರಿಹರ

ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಮಟ್ಕಾ ಹಾಗೂ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ಪರಿಶಿಷ್ಟ ಜಾತಿಯ ಯುವಜನರು ಹಾಳಾಗುತ್ತಿದ್ದಾರೆ. ಈ ಅವ್ಯವಸ್ಥೆ ನಿಯಂತ್ರಿಸಲು ಅಧಿಕಾರಿಗಳು ಮುಂದಾಗಬೇಕೆಂದು ಎಸ್‌ಸಿ- ಎಸ್‌ಟಿ ಸಮುದಾಯ ಮುಖಂಡರು ಆಗ್ರಹಿಸಿದರು.

ನಗರದ ಗುರು ಭವನದಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ಜಿಲ್ಲಾ ಗ್ರಾಮಾಂತರ ಡಿವೈಎಸ್‌ಪಿ ಕಚೇರಿ, ಸ್ಥಳಿಯ ಪೊಲೀಸ್ ಠಾಣೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಕರೆದಿದ್ದ ಎಸ್‌ಸಿ- ಎಸ್‌ಟಿ ಸಮುದಾಯದ ಕುಂದು ಕೊರತೆಗಳ ಸಭೆಯಲ್ಲಿ ಅವರು ಮಾತನಾಡಿದರು.

ವಿಶ್ವನಾಥ ಮೈಲಾಳ ಮಾತನಾಡಿ, ನಗರ ಹಾಗೂ ಗ್ರಾಮಾಂತರ ಪ್ರದೇಶಗಳಿಂದ ಸಮುದಾಯದ ಅನೇಕ ಮುಖಂಡರು ತಮ್ಮ ತಮ್ಮ ಗ್ರಾಮಗಳಲ್ಲಿಯ ಸಮಸ್ಯೆಗಳ ಕುರಿತು ಸಭೆಗೆ ಮಾಹಿತಿ ನೀಡಿ, ಪರಿಹಾರ ಕಂಡುಕೊಳ್ಳಬೇಕಿತ್ತು. ಆದರೆ ಸಮಸ್ಯೆಗಳ ಪರಿಹರಿಸಲು ಅಥವಾ ಭರವಸೆಗಳನ್ನು ನೀಡಲು ಜಿಲ್ಲಾ ಹಾಗೂ ತಾಲೂಕು ಆಡಳಿತದಿಂದ ಯಾರೂ ಬಂದಿಲ್ಲ. ಹಾಗಾಗಿ ಪೊಲೀಸರು ಕರೆದಿದ್ದ ಸಭೆ ಕಾಟಾಚಾರದ ಸಭೆಯಾಗಿದೆ ಎಂದು ಆರೋಪಿಸಿದರು.

ರಾಜನಹಳ್ಳಿ ಗ್ರಾಪಂ ಮಾಜಿ ಸದಸ್ಯ ಎ.ಕೆ. ನಾಗೇಂದ್ರಪ್ಪ ಹಾಗೂ ಹರಳಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಹನುಮಂತಪ್ಪ ಮಾತನಾಡಿ, ರಾಜನಹಳ್ಳಿ ಹಾಗೂ ಹರಳಳ್ಳಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಭವನ ನಿರ್ಮಿಸಲು ಹಣ ಬಿಡುಗಡೆಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಭವನ ನಿರ್ಮಿಸಲು ಏಕೆ ಮುಂದಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ಕೊಟ್ರೇಶ ಮಾತನಾಡಿ, ನಗರದ ಶಿವಮೊಗ್ಗ- ಹೊಸಪೇಟೆ ರಸ್ತೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಮೇಲ್ವಿಚಾರಕಿಯರು ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ಹಾಗೂ ಸಾರ್ವಜನಿಕರಿಗೆ ಏಕ ವಚನದಲ್ಲಿ ಮಾತನಾಡುತ್ತಿದ್ದಾರೆ. ಎ.ಕೆ. ನಾಗರತ್ನ ಎಂಬವರಿಗೆ ನಿಯಮಾನುಸಾರ ಕಾರ್ಯಕರ್ತೆ ಹುದ್ದೆ ನೀಡುವಲ್ಲಿ ಈ ಹಿಂದಿನ ಸಿಡಿಪಿಒಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು.

ಸಭಾ ಸ್ಥಳ ಸಂಪೂರ್ಣ ಧೂಳಿನಿಂದ ಕೂಡಿದ್ದು, ಕಾರ್ಯಕ್ರಮಕ್ಕೆ ಮೊದಲು ಸ್ವಚ್ಛ ಮಾಡಿಸದೇ, ಅದರಲ್ಲಿಯೇ ಸಭೆ ನಡೆಸಿದ ಅಧಿಕಾರಿಗಳ ನಿರ್ಲಕ್ಷಕ್ಕೆ ಬೇಸರಗೊಂಡ ಘಟನೆ ನಡೆಯಿತು.

ಎ.ಕೆ. ಭೂಮೇಶ್, ಎಚ್.ಸುಧಾಕರ, ಬೇವಿನಹಳ್ಳಿ ಶಿವರಾಮ್, ಧೂಳೆಹೊಳಿ ಪರಶುರಾಮ್, ವಾಸನ ಸುರೇಶ್, ತಿಪ್ಪೇಶ್, ಪಿ.ಜೆ. ಮಹಾಂತೇಶ್, ಬಾಗ್ಲಾ ಹನುಮಂತಪ್ಪ, ಬೆಳ್ಳೂಡಿ ಹಾಲೇಶ್, ಆರೋಗ್ಯ ಸ್ಥಾಯಿ ಸಮಿತಿ ಸದಸ್ಯ ಆರ್.ವಿಜಯಕುಮಾರ್, ಹನುಮಂತಪ್ಪ ಕೊತ್ವಾಲ್, ವೈ.ಬಿ. ಪ್ರಭಾಕರ್, ಮಂಜುನಾಥ, ಸಂತೋಷ ನೋಟದವರ, ಪಂಚಾಕ್ಷರಿ ಮತ್ತಿತರರು ಮಾತನಾಡಿದರು.

ಗ್ರಾಮೀಣ ಡಿವೈಎಸ್‌ಪಿ ಬಿ.ಎಸ್. ಬಸವರಾಜ, ಸಿಪಿಐ ಸುರೇಶ ಸಗರಿ, ಪಿಎಸ್‌ಐ ಯುವರಾಜ ಕಂಬಳಿ, ಮಲೇಬೆನ್ನೂರು ಪಿಎಸ್‌ಐ ಹಾರೂನ್ ಅಖ್ತರ್, ನಗರ ಸಿಪಿಐ ಆರ್.ಎಫ್. ದೇಸಾಯಿ, ಪಿಎಸ್‌ಐಗಳಾದ ಶ್ರೀಪತಿ ಗಿನ್ನಿ, ಮಂಜುಳಾ, ಮಂಜುನಾಥ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ದುರುಗಪ್ಪ, ಸಮಾಜ ಕಲ್ಯಾಣಾಧಿಕಾರಿ ಹನುಮಂತಪ್ಪ ನಾಯ್ಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಪ್ರಿಯದರ್ಶಿನಿ, ಪ್ರಭಾರ ಪೌರಾಯುಕ್ತ ವಿನಯ್‌ಕುಮಾರ, ವ್ಯವಸ್ಥಾಪಕ ಶಿವಕುಮಾರ, ಶಿರಸ್ತೇದಾರ ಹರ್ಷವರ್ಧನ್, ಹಿರಿಯ ಆರೋಗ್ಯ ನಿರೀಕ್ಷಕ ನಾಗರಾಜ ಉಪಸ್ಥಿತರಿದ್ದರು.

- - -

-22ಎಚ್.ಆರ್.ಆರ್01: ಹರಿಹರದ ಗುರು ಭವನದಲ್ಲಿ ಎಸ್.ಸಿ/ಎಸ್‌ಟಿ ಕುಂದುಕೊರತೆ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವರ್ಷ ಪೂರೈಸಿದ ನಗರಸಭೆ ಅಧ್ಯಕ್ಷ ಶೇಷಾದ್ರಿಗೆ ಅಭಿನಂದನೆ
ಭ್ರಷ್ಟಾಚಾರದಲ್ಲಿ ಮುಳುಗಿದೆ ಕಾಂಗ್ರೆಸ್ ಸರ್ಕಾರ