ನಾಪೋಕ್ಲು: ಮಹಿಳೆಯರ ವೃದ್ಧರ ನೋವಿನ ಶಾಪ ಸರ್ಕಾರಕ್ಕೆ ತಟ್ಟಲಿದೆ ಎಂದರು ಬಿಜೆಪಿ ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಹೇಳಿದರು.
ವಿಕಲಚೇತನರಿಗೆ ಹಾಗೂ ವೃದ್ಧರಿಗೆ ವೇತನ ನೀಡಲು 32,000 ಆದಾಯ ನಿಗದಿಪಡಿಸಿದೆ ಆದಾಯ ಪ್ರಮಾಣ ಪತ್ರ ನೀಡಿದರೆ ಮಾತ್ರ ವಿಕಲಚೇತನರ ವೇತನ ಹಾಗೂ ವೃದ್ಧಾಪ್ಯ ವೇತನಗಳನ್ನು ನೀಡುವುದಾಗಿ ತಿಳಿಸಿದ್ದು ಇದು ಖಂಡನೀಯ. ಇದರಿಂದಾಗಿ ವಿಕಲಚೇತನರು ಮಹಿಳೆಯರು ಹಾಗೂ ವೃದ್ಧರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಇಂತಹ ವೇತನಗಳನ್ನು ನಂಬಿ ಬದುಕುತಿದ್ದ ಮಹಿಳೆಯರ ವೃದ್ಧರ ಶಾಪ ಸರ್ಕಾರಕ್ಕೆ ತಟ್ಟಲಿದೆ ಎಂದರು. ಮಂಡಲ ಬಿಜೆಪಿ ವತಿಯಿಂದ ಹಾಗೂ ಶಕ್ತಿ ಕೇಂದ್ರದ ವತಿಯಿಂದ ಇದನ್ನು ಸಂಪೂರ್ಣವಾಗಿ ಖಂಡಿಸುವುದಾಗಿ ಅವರು ತಿಳಿಸಿದರು.
ಶಕ್ತಿ ಕೇಂದ್ರದ ಪ್ರಮುಖ್ ಸುಭಾಶ್ಚಂದ್ರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸಹ ಪ್ರಮುಖ ಉದಯ ಕುಂಬಳಚೇರಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಂಜಪ್ಪ ಮತ್ತು ಬೂತ್ ಮಟ್ಟದ ಅಧ್ಯಕ್ಷರು, ಶಕ್ತಿ ಕೇಂದ್ರದ ಸದಸ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.