ನೀರ್ಕೆರೆ ಪ್ರೌಢಶಾಲೆಯಲ್ಲಿ ಗ್ರಾಹಕ ಮಾಹಿತಿ ಕಾರ್‍ಯಕ್ರಮ

KannadaprabhaNewsNetwork |  
Published : Jan 16, 2026, 01:45 AM IST
ನೀರ್ಕೆರೆ ಪ್ರೌಢಶಾಲೆಯಲ್ಲಿ ಗ್ರಾಹಕ ಮಾಹಿತಿ ಕಾರ್ಯಕ್ರಮ | Kannada Prabha

ಸಾರಾಂಶ

ತೆಂಕ ಮಿಜಾರು ಗ್ರಾಮದ ನೀರ್ಕೆರೆ ಪ್ರೌಢಶಾಲೆಯಲ್ಲಿ ಗ್ರಾಹಕ ಮಾಹಿತಿ ಕಾರ್‍ಯಕ್ರಮ

ಮೂಡುಬಿದಿರೆ: ತೆಂಕ ಮಿಜಾರು ಗ್ರಾಮದ ನೀರ್ಕೆರೆ ಪ್ರೌಢಶಾಲೆಯಲ್ಲಿ ಗ್ರಾಹಕ ಮಾಹಿತಿ ಕಾರ್‍ಯಕ್ರಮ ನಡೆಯಿತು. ಬೆಂಗಳೂರು ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ಸಂಪನ್ಮೂಲ ವ್ಯಕ್ತಿ, ದ.ಕ. ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್‍ಯದರ್ಶಿ, ಹಿರಿಯ ಪತ್ರಕರ್ತ ರಾಯಿ ರಾಜ ಕುಮಾರರು ಮುಖ್ಯ ಮಾಹಿತಿದಾರರಾಗಿದ್ದರು.

ಗ್ರಾಹಕ ಹಿತರಕ್ಷಣಾ ಕಾಯಿದೆ ಅಂಶಗಳು, ಮಾನವನ ಜೀವಿಸುವ ಹಕ್ಕು, ಸಮಾನತೆ ಹಕ್ಕು, ಆಯ್ಕೆಯ ಹಕ್ಕು, ಶೋಷಣೆ ವಿರುದ್ಧದ ಹಕ್ಕು ಇತ್ಯಾದಿಗಳ ಸಮಗ್ರ ಮಾಹಿತಿ ನೀಡಿದ ಅವರು ಮಾಹಿತಿ ಹಕ್ಕಿನ ಮೂಲಕ ದಾಖಲೆಗಳನ್ನು ಪಡೆಯುವ ವಿಧಾನವನ್ನು ವಿವರಿಸಿದರು.

ಶಾಲೆಯ ಎಲ್ಲ ವಿದ್ಯಾರ್ಥಿಗಳು, ಶಿಕ್ಷಕರು ಕಾರ್‍ಯಕ್ರಮದ ಪ್ರಯೋಜನ ಪಡೆದುಕೊಂಡರು. ಹಿರಿಯ ಶಿಕ್ಷಕಿ ಸವಿತಾ ವಿಠಲ ಕೋಟ್ಯಾನ್ ಸ್ವಾಗತಿಸಿ, ಅನುಪಮ ವಂದಿಸಿದರು. ಬಾಲಚಂದ್ರ ಆಚಾರ್ಯ ಕಾರ್‍ಯಕ್ರಮ ಸಂಘಟಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧಮ್ಕಿ ರಾಜೀವ್‌ಗೌಡ ವಿರುದ್ಧ 2 ಕೇಸ್‌, ಬೆನ್ನಲ್ಲೇ ನಾಪತ್ತೆ
ಆರ್‌ಸಿಯು ಧೂಳಿಗೆ ಕಮರಿದ ರೈತರ ಬದುಕು